Home / ಲೇಖನ / ಇತರೆ / ವಚನ ವಿಚಾರ – ಅಸಾಧ್ಯ

ವಚನ ವಿಚಾರ – ಅಸಾಧ್ಯ

ಅರಿವಿಂಗೆ ಸಿಕ್ಕದುದ ನೆನೆಯಲಮ್ಮಬಹುದೆ ಅಯ್ಯಾ
ನೆನಹಿಂಗೆ ಬಾರದುದ ಕಾಂಬುದು ಹುಸಿ
ಮುಟ್ಟಿ ಪೂಜಿಸುವ ಮಾತು ಮುನ್ನವೇ ದೂರ
ಚಿಕ್ಕಯ್ಯಪ್ರಿಯ ಸಿದ್ಧಲಿಂಗ ಇಲ್ಲ ಇಲ್ಲ ನಿಲ್ಲು ಮಾಣು

[ನೆನೆಯಲಮ್ಮಬಹುದೆ-ಧ್ಯಾನಿಸಲು ಯತ್ನಿಸಬಹುದೆ-ಕಾಂಬುದು-ಕಾಣುವುದು, ಮಾಣು-ಬಿಡು]

ಘಟ್ಟಿವಾಳಯ್ಯನ ವಚನ. ಈ ವಚನ ಅರಿವನ್ನು ಕುರಿತ ನಮ್ಮ ಕಲ್ಪನೆಗಳನ್ನೆಲ್ಲ ಪ್ರಶ್ನಿಸುತ್ತಿದೆ.

ಅರಿವು ಅನ್ನುವುದು ನೆನಪಿಗೆ ಕೂಡ ಸಂಬಂಧಿಸಿದ್ದು ಎಂದುಕೊಂಡಿದ್ದೇವೆ. ನಮ್ಮ ಇಡೀ ಶಿಕ್ಷಣ, ಸಂಸ್ಕೃತಿ ಎಲ್ಲವೂ ನೆನಪಿಗೆ ಸಂಬಂಧಿಸಿದ್ದು, ನೆನಪನ್ನೇ ಆಧರಿಸಿದ್ದು ಅಲ್ಲವೇ? ಆದರೆ ಸತ್ಯ ಅನ್ನುವುದು ಇದ್ದರೆ ಅದು ನೆನಪಿಗೆ ಸಿಲುಕದು. ಅರಿವಿಗೆ ಸಿಲುಕದು. ಅರಿವಿಗೆ ಬಾರದಿರುವ ಸತ್ಯ ನೆನಪಿಗೆ ಬರುತ್ತದೆಯೇ? ನೆನಪಿಗೆ ಬರುವುದೇನಿದ್ದರೂ ನಮ್ಮ ಹಳೆಯ ಅನುಭವ, ಕೇಳಿದ ಮಾತು ಇಂಥವೇ ಅಲ್ಲವೇ? ಯಾವುದು ನಮ್ಮ ನೆನಪಿನಲ್ಲಿ ದಾಖಲಾಗಿದೆಯೋ ಅದನ್ನು ಮಾತ್ರ ನಾವು ಈಗ ಗುರುತಿಸುತ್ತೇವೆ. ಯಾವುದು ನೆನಪಿಗೆ ಬಾರದೋ ಅದು ನಮಗೆ ಕಾಣುವುದೂ ಇಲ್ಲ. ನೆನಪನ್ನೇ ಆಧರಿಸಿಕೊಂಡಿರುವ ನಮ್ಮ ಕಾಣ್ಕೆ, ನಮ್ಮ ಅರಿವು ಸತ್ಯವನ್ನು ಕಾಣಿಸಿಕೊಡಲಾಗದು. ಹೀಗಿರುವಾಗ ಮಾತಿಗೆ ಸಿಲುಕದ, ನೆನಪಿಗೆ ಆಹಾರವಾಗದ ಸತ್ಯವನ್ನೋ ದೇವರನ್ನೋ ಮುಟ್ಟುವುದು ಪೂಜಿಸುವುದು ಅಸಾಧ್ಯ ಅನ್ನುತ್ತಾನೆ ಘಟ್ಟಿವಾಳಯ್ಯ.

ನಡುಗನ್ನಡದಲ್ಲಿ ನೆನೆ ಎಂಬ ಮಾತನ್ನು ಧ್ಯಾನಿಸು ಅನ್ನುವ ಅರ್ಥದಲ್ಲಿ ಬಳಸುವುದುಂಟು. ಧ್ಯಾನಿಸುವುದು ಏನಿದ್ದರೂ ನಮಗೆ ಗೊತ್ತಿರುವ, ನಮ್ಮ ಗ್ರಹಿಕೆಗೆ ಬಂದಿರುವ, ಧ್ಯಾನಿಸಬಲ್ಲ ಸಂಗತಿಗಳನ್ನು ಮಾತ್ರವೇ.

ಇಂಗ್ಲೀಶ್‌ನ ರಿಕಾಗ್ನಿಶನ್ ಎಂಬ ಮಾತು ನೆನೆದುಕೊಳ್ಳೋಣ. ಅದು ರಿ (ಮತ್ತೆ) ಕಾಗ್ನಿಶನ್ (ಗ್ರಹಿಸುವುದು, ಗುರುತಿಸುವುದು). ನಮ್ಮ ಜ್ಞಾನದ ಕಲ್ಪನೆ, ಅರಿವಿನ ಕಲ್ಪನೆ ಎಲ್ಲವೂ ನೆನಪನ್ನು ಮಾತ್ರ ಆಧರಿಸಿದ್ದು, ಅದರಂತೆ ನಾವು ಈ ಮೊದಲು ದೇವರನ್ನು, ಸತ್ಯವನ್ನು ಕಂಡಿಲ್ಲವಾದರೆ, ಕಂಡ ನೆನಪು ನಮ್ಮಲ್ಲಿಲ್ಲವಾದರೆ ಈಗ ಒಂದು ವೇಳೆ ದೇವರು, ಸತ್ಯ ನಮ್ಮ ಕಣ್ಣೆದುರಿಗೇ ಇದ್ದರೂ ಗುರುತಿಸಲಾರೆವು. ಹೀಗಿರುವಾಗ ನಾನು ಸತ್ಯವನ್ನು ಕಂಡೆ, ದೇವರನ್ನು ಕಂಡೆ ಅನ್ನುವ ಮಾತುಗಳೇ ಸರಿಯಲ್ಲ, ಅದು ಅಸಾಧ್ಯ ಅನ್ನುತ್ತಿರುವಂತಿದೆ ಘಟ್ಟಿವಾಳಯ್ಯ.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...