Home / ಲೇಖನ / ಇತರೆ / ವಚನ ವಿಚಾರ – ಸೋಂಕಿನ ಸೋಜಿಗ

ವಚನ ವಿಚಾರ – ಸೋಂಕಿನ ಸೋಜಿಗ

ಅರಿವಿನ ಬಲದಿಂದ ಕೆಲಬರು ಅರಿಯದವರ ಗೆಲಬೇಕೆಂದು
ಬರುಮಾತಿನ ಉಯ್ಯಲನೇರಿ ಒದೆದು ಒರಲಿ ಕೆಡುವ ದರಿದ್ರರು
ಅರಿವು ತೋರದೆ ಇರಬೇಕು ಕಾಯನಿರ್ಣಯ ನಿಃಪತಿಯೆಂಬಾತನು
ಸೋಂಕಿನ ಸೋಜಿಗವೆಂಬ ಪರಿಣತೆ ಫಲಿಸಬೇಕು
ಅರಿವು ತೊರೆದ ಎರಂಡೆಂಬ ಭಿನ್ನವೇಷವ ತೊಟ್ಟು
ಡಂಬಕವ ನುಡಿದಹೆವೆಂಬ ಉದ್ದಂಡರ ಗುಹೇಶ್ವರ ಕಂಡರೆ ಕನಲುವ

[ಬರುಮಾತಿನ–ಬರಿಯ ಮಾತಿನ, ಕಾಯನಿರ್ಣಯ ನಿಃಪತಿ-ಪೂರ್ಣಪ್ರಬುದ್ಧತೆಯ ಲಕ್ಷಣ]

ಅಲ್ಲಮನ ವಚನ.

ಕೆಲವರಿಗೆ ಜ್ಞಾನದ ಬಲ ಇರುತ್ತದೆ. ಅದನ್ನು ಬಳಸಿಕೊಂಡು ಅರಿಯದವರನ್ನು ಗೆಲ್ಲಬೇಕೆಂದು ಇನ್ನಿಲ್ಲದಂತೆ ಪ್ರಯತ್ನಿಸುತ್ತಾರೆ. ಮಾತಿನ ಉಯ್ಯಾಲೆಯನ್ನು ಏರಿ ಅತ್ತ ಇತ್ತ ತುಯ್ದಾಡುತ್ತಾರೆ, ಒಮ್ಮೆ ಹಾಗೆ, ಒಮ್ಮೆ ಹೀಗೆ ಅಭಿಪ್ರಾಯವ್ಯಕ್ತಪಡಿಸುತ್ತಾರೆ. ಇವರೆಲ್ಲ (ನಾವೆಲ್ಲ?) ಹೀಗೆ ಸುಮ್ಮನೆ ಮಾತು ಒರಲಿ ಕೆಡುವ ದರಿದ್ರರು.

ಮುಂದಿನ ಕೆಲವು ಪಾರಿಭಾಷಿಕಗಳನ್ನು ಬಿಟ್ಟರೂ `ಸೋಂಕಿನ ಸೋಜಿಗವೆಂಬ ಪರಿಣತೆ ಫಲಿಸಬೇಕು’ ಅನ್ನುವ ಮಾತು ಗಮನಿಸಿ, ಸ್ಪರ್ಶದ ಸೋಜಿಗವನ್ನು ಅನುಭವಿಸಿ, ಪರಿಣತರಾಗಿ ಫಲಿಸಬೇಕು.

ನಾವಾಡುವ ವಿಷಯವೆಲ್ಲ ಬರಿಯ ಮಾತಿನ ಮಟ್ಟದ ಮಾಹಿತಿಯಾಗಿದ್ದರೆ ನಾವೆಲ್ಲ ಮಾತಿನ ಉಯ್ಯಾಲೆಯಾಡುವ, ಅನ್ಯರನ್ನು ಗೆಲ್ಲಬಯಸುವ, ಕೆಡುವ, ದರಿದ್ರರು ಅಷ್ಟೆ. ಆಡುವ ಮಾತಿನ ನಿಜವನ್ನು ಮುಟ್ಟಿ, ಸೋಂಕಿ, ಸೋಜಿಗಪಡುವುದು ಮುಖ್ಯ. ಸೋಜಿಗ ಫಲಿಸುವುದು, ಹಣ್ಣಾಗುವುದು ಮುಖ್ಯ. ಅದು ಆಗದಿದ್ದರೆ ಮಾತು ವ್ಯರ್ಥ.

ಇನ್ನು ಮಾತು ಬೇಡ, ಸುಮ್ಮನೆ ಪರಿಣಮಿಸೋಣ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...