ವಚನ ವಿಚಾರ – ಸೋಂಕಿನ ಸೋಜಿಗ

ವಚನ ವಿಚಾರ – ಸೋಂಕಿನ ಸೋಜಿಗ

ಅರಿವಿನ ಬಲದಿಂದ ಕೆಲಬರು ಅರಿಯದವರ ಗೆಲಬೇಕೆಂದು
ಬರುಮಾತಿನ ಉಯ್ಯಲನೇರಿ ಒದೆದು ಒರಲಿ ಕೆಡುವ ದರಿದ್ರರು
ಅರಿವು ತೋರದೆ ಇರಬೇಕು ಕಾಯನಿರ್ಣಯ ನಿಃಪತಿಯೆಂಬಾತನು
ಸೋಂಕಿನ ಸೋಜಿಗವೆಂಬ ಪರಿಣತೆ ಫಲಿಸಬೇಕು
ಅರಿವು ತೊರೆದ ಎರಂಡೆಂಬ ಭಿನ್ನವೇಷವ ತೊಟ್ಟು
ಡಂಬಕವ ನುಡಿದಹೆವೆಂಬ ಉದ್ದಂಡರ ಗುಹೇಶ್ವರ ಕಂಡರೆ ಕನಲುವ

[ಬರುಮಾತಿನ–ಬರಿಯ ಮಾತಿನ, ಕಾಯನಿರ್ಣಯ ನಿಃಪತಿ-ಪೂರ್ಣಪ್ರಬುದ್ಧತೆಯ ಲಕ್ಷಣ]

ಅಲ್ಲಮನ ವಚನ.

ಕೆಲವರಿಗೆ ಜ್ಞಾನದ ಬಲ ಇರುತ್ತದೆ. ಅದನ್ನು ಬಳಸಿಕೊಂಡು ಅರಿಯದವರನ್ನು ಗೆಲ್ಲಬೇಕೆಂದು ಇನ್ನಿಲ್ಲದಂತೆ ಪ್ರಯತ್ನಿಸುತ್ತಾರೆ. ಮಾತಿನ ಉಯ್ಯಾಲೆಯನ್ನು ಏರಿ ಅತ್ತ ಇತ್ತ ತುಯ್ದಾಡುತ್ತಾರೆ, ಒಮ್ಮೆ ಹಾಗೆ, ಒಮ್ಮೆ ಹೀಗೆ ಅಭಿಪ್ರಾಯವ್ಯಕ್ತಪಡಿಸುತ್ತಾರೆ. ಇವರೆಲ್ಲ (ನಾವೆಲ್ಲ?) ಹೀಗೆ ಸುಮ್ಮನೆ ಮಾತು ಒರಲಿ ಕೆಡುವ ದರಿದ್ರರು.

ಮುಂದಿನ ಕೆಲವು ಪಾರಿಭಾಷಿಕಗಳನ್ನು ಬಿಟ್ಟರೂ `ಸೋಂಕಿನ ಸೋಜಿಗವೆಂಬ ಪರಿಣತೆ ಫಲಿಸಬೇಕು’ ಅನ್ನುವ ಮಾತು ಗಮನಿಸಿ, ಸ್ಪರ್ಶದ ಸೋಜಿಗವನ್ನು ಅನುಭವಿಸಿ, ಪರಿಣತರಾಗಿ ಫಲಿಸಬೇಕು.

ನಾವಾಡುವ ವಿಷಯವೆಲ್ಲ ಬರಿಯ ಮಾತಿನ ಮಟ್ಟದ ಮಾಹಿತಿಯಾಗಿದ್ದರೆ ನಾವೆಲ್ಲ ಮಾತಿನ ಉಯ್ಯಾಲೆಯಾಡುವ, ಅನ್ಯರನ್ನು ಗೆಲ್ಲಬಯಸುವ, ಕೆಡುವ, ದರಿದ್ರರು ಅಷ್ಟೆ. ಆಡುವ ಮಾತಿನ ನಿಜವನ್ನು ಮುಟ್ಟಿ, ಸೋಂಕಿ, ಸೋಜಿಗಪಡುವುದು ಮುಖ್ಯ. ಸೋಜಿಗ ಫಲಿಸುವುದು, ಹಣ್ಣಾಗುವುದು ಮುಖ್ಯ. ಅದು ಆಗದಿದ್ದರೆ ಮಾತು ವ್ಯರ್ಥ.

ಇನ್ನು ಮಾತು ಬೇಡ, ಸುಮ್ಮನೆ ಪರಿಣಮಿಸೋಣ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ತಾಳೆಯ ಮರದಡಿ
Next post ಮನವಿದ್ದೆಡೆ ಮಾರ್ಗ

ಸಣ್ಣ ಕತೆ

  • ಹುಟ್ಟು

    ಶಾದಿ ಮಹಲ್‌ನ ಒಳ ಆವರಣದಲ್ಲಿ ದೊಡ್ಡ ಹಾಲ್‌ನಲ್ಲಿ ಹೆಂಗಸರೆಲ್ಲಾ ಸೇರಿದ್ದರು. ಹೊರಗಡೆ ಹಾಕಿದ್ದ ಶಾಮಿಯಾನದಲ್ಲಿ ಗಂಡಸರು ನೆರೆದಿದ್ದರು. ಒಂದು ಕಡೆಯ ಎತ್ತರವಾದ ವೇದಿಕೆಯ ಮೇಲೆ ಮದುವೆ ಗಂಡು,… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…