Home / ಲೇಖನ / ಇತರೆ / ವಚನ ವಿಚಾರ – ಸೋಂಕಿನ ಸೋಜಿಗ

ವಚನ ವಿಚಾರ – ಸೋಂಕಿನ ಸೋಜಿಗ

ಅರಿವಿನ ಬಲದಿಂದ ಕೆಲಬರು ಅರಿಯದವರ ಗೆಲಬೇಕೆಂದು
ಬರುಮಾತಿನ ಉಯ್ಯಲನೇರಿ ಒದೆದು ಒರಲಿ ಕೆಡುವ ದರಿದ್ರರು
ಅರಿವು ತೋರದೆ ಇರಬೇಕು ಕಾಯನಿರ್ಣಯ ನಿಃಪತಿಯೆಂಬಾತನು
ಸೋಂಕಿನ ಸೋಜಿಗವೆಂಬ ಪರಿಣತೆ ಫಲಿಸಬೇಕು
ಅರಿವು ತೊರೆದ ಎರಂಡೆಂಬ ಭಿನ್ನವೇಷವ ತೊಟ್ಟು
ಡಂಬಕವ ನುಡಿದಹೆವೆಂಬ ಉದ್ದಂಡರ ಗುಹೇಶ್ವರ ಕಂಡರೆ ಕನಲುವ

[ಬರುಮಾತಿನ–ಬರಿಯ ಮಾತಿನ, ಕಾಯನಿರ್ಣಯ ನಿಃಪತಿ-ಪೂರ್ಣಪ್ರಬುದ್ಧತೆಯ ಲಕ್ಷಣ]

ಅಲ್ಲಮನ ವಚನ.

ಕೆಲವರಿಗೆ ಜ್ಞಾನದ ಬಲ ಇರುತ್ತದೆ. ಅದನ್ನು ಬಳಸಿಕೊಂಡು ಅರಿಯದವರನ್ನು ಗೆಲ್ಲಬೇಕೆಂದು ಇನ್ನಿಲ್ಲದಂತೆ ಪ್ರಯತ್ನಿಸುತ್ತಾರೆ. ಮಾತಿನ ಉಯ್ಯಾಲೆಯನ್ನು ಏರಿ ಅತ್ತ ಇತ್ತ ತುಯ್ದಾಡುತ್ತಾರೆ, ಒಮ್ಮೆ ಹಾಗೆ, ಒಮ್ಮೆ ಹೀಗೆ ಅಭಿಪ್ರಾಯವ್ಯಕ್ತಪಡಿಸುತ್ತಾರೆ. ಇವರೆಲ್ಲ (ನಾವೆಲ್ಲ?) ಹೀಗೆ ಸುಮ್ಮನೆ ಮಾತು ಒರಲಿ ಕೆಡುವ ದರಿದ್ರರು.

ಮುಂದಿನ ಕೆಲವು ಪಾರಿಭಾಷಿಕಗಳನ್ನು ಬಿಟ್ಟರೂ `ಸೋಂಕಿನ ಸೋಜಿಗವೆಂಬ ಪರಿಣತೆ ಫಲಿಸಬೇಕು’ ಅನ್ನುವ ಮಾತು ಗಮನಿಸಿ, ಸ್ಪರ್ಶದ ಸೋಜಿಗವನ್ನು ಅನುಭವಿಸಿ, ಪರಿಣತರಾಗಿ ಫಲಿಸಬೇಕು.

ನಾವಾಡುವ ವಿಷಯವೆಲ್ಲ ಬರಿಯ ಮಾತಿನ ಮಟ್ಟದ ಮಾಹಿತಿಯಾಗಿದ್ದರೆ ನಾವೆಲ್ಲ ಮಾತಿನ ಉಯ್ಯಾಲೆಯಾಡುವ, ಅನ್ಯರನ್ನು ಗೆಲ್ಲಬಯಸುವ, ಕೆಡುವ, ದರಿದ್ರರು ಅಷ್ಟೆ. ಆಡುವ ಮಾತಿನ ನಿಜವನ್ನು ಮುಟ್ಟಿ, ಸೋಂಕಿ, ಸೋಜಿಗಪಡುವುದು ಮುಖ್ಯ. ಸೋಜಿಗ ಫಲಿಸುವುದು, ಹಣ್ಣಾಗುವುದು ಮುಖ್ಯ. ಅದು ಆಗದಿದ್ದರೆ ಮಾತು ವ್ಯರ್ಥ.

ಇನ್ನು ಮಾತು ಬೇಡ, ಸುಮ್ಮನೆ ಪರಿಣಮಿಸೋಣ.
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...