Home / ಲೇಖನ / ಇತರೆ / ವಚನ ವಿಚಾರ – ಸೋಂಕಿನ ಸೋಜಿಗ

ವಚನ ವಿಚಾರ – ಸೋಂಕಿನ ಸೋಜಿಗ

ಅರಿವಿನ ಬಲದಿಂದ ಕೆಲಬರು ಅರಿಯದವರ ಗೆಲಬೇಕೆಂದು
ಬರುಮಾತಿನ ಉಯ್ಯಲನೇರಿ ಒದೆದು ಒರಲಿ ಕೆಡುವ ದರಿದ್ರರು
ಅರಿವು ತೋರದೆ ಇರಬೇಕು ಕಾಯನಿರ್ಣಯ ನಿಃಪತಿಯೆಂಬಾತನು
ಸೋಂಕಿನ ಸೋಜಿಗವೆಂಬ ಪರಿಣತೆ ಫಲಿಸಬೇಕು
ಅರಿವು ತೊರೆದ ಎರಂಡೆಂಬ ಭಿನ್ನವೇಷವ ತೊಟ್ಟು
ಡಂಬಕವ ನುಡಿದಹೆವೆಂಬ ಉದ್ದಂಡರ ಗುಹೇಶ್ವರ ಕಂಡರೆ ಕನಲುವ

[ಬರುಮಾತಿನ–ಬರಿಯ ಮಾತಿನ, ಕಾಯನಿರ್ಣಯ ನಿಃಪತಿ-ಪೂರ್ಣಪ್ರಬುದ್ಧತೆಯ ಲಕ್ಷಣ]

ಅಲ್ಲಮನ ವಚನ.

ಕೆಲವರಿಗೆ ಜ್ಞಾನದ ಬಲ ಇರುತ್ತದೆ. ಅದನ್ನು ಬಳಸಿಕೊಂಡು ಅರಿಯದವರನ್ನು ಗೆಲ್ಲಬೇಕೆಂದು ಇನ್ನಿಲ್ಲದಂತೆ ಪ್ರಯತ್ನಿಸುತ್ತಾರೆ. ಮಾತಿನ ಉಯ್ಯಾಲೆಯನ್ನು ಏರಿ ಅತ್ತ ಇತ್ತ ತುಯ್ದಾಡುತ್ತಾರೆ, ಒಮ್ಮೆ ಹಾಗೆ, ಒಮ್ಮೆ ಹೀಗೆ ಅಭಿಪ್ರಾಯವ್ಯಕ್ತಪಡಿಸುತ್ತಾರೆ. ಇವರೆಲ್ಲ (ನಾವೆಲ್ಲ?) ಹೀಗೆ ಸುಮ್ಮನೆ ಮಾತು ಒರಲಿ ಕೆಡುವ ದರಿದ್ರರು.

ಮುಂದಿನ ಕೆಲವು ಪಾರಿಭಾಷಿಕಗಳನ್ನು ಬಿಟ್ಟರೂ `ಸೋಂಕಿನ ಸೋಜಿಗವೆಂಬ ಪರಿಣತೆ ಫಲಿಸಬೇಕು’ ಅನ್ನುವ ಮಾತು ಗಮನಿಸಿ, ಸ್ಪರ್ಶದ ಸೋಜಿಗವನ್ನು ಅನುಭವಿಸಿ, ಪರಿಣತರಾಗಿ ಫಲಿಸಬೇಕು.

ನಾವಾಡುವ ವಿಷಯವೆಲ್ಲ ಬರಿಯ ಮಾತಿನ ಮಟ್ಟದ ಮಾಹಿತಿಯಾಗಿದ್ದರೆ ನಾವೆಲ್ಲ ಮಾತಿನ ಉಯ್ಯಾಲೆಯಾಡುವ, ಅನ್ಯರನ್ನು ಗೆಲ್ಲಬಯಸುವ, ಕೆಡುವ, ದರಿದ್ರರು ಅಷ್ಟೆ. ಆಡುವ ಮಾತಿನ ನಿಜವನ್ನು ಮುಟ್ಟಿ, ಸೋಂಕಿ, ಸೋಜಿಗಪಡುವುದು ಮುಖ್ಯ. ಸೋಜಿಗ ಫಲಿಸುವುದು, ಹಣ್ಣಾಗುವುದು ಮುಖ್ಯ. ಅದು ಆಗದಿದ್ದರೆ ಮಾತು ವ್ಯರ್ಥ.

ಇನ್ನು ಮಾತು ಬೇಡ, ಸುಮ್ಮನೆ ಪರಿಣಮಿಸೋಣ.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...