Home / ಲೇಖನ / ಇತರೆ / ವಚನ ವಿಚಾರ – ನಿಜವೇ?

ವಚನ ವಿಚಾರ – ನಿಜವೇ?

ಅರ್ಥ ಸನ್ಯಾಸಿ ಬ್ರಹ್ಮಚಾರಿ ಆನಯ್ಯ
ದೊರೆಕೊಳ್ಳದಿರ್ದಡೆ ಒಲ್ಲೆನೆಂಬೆನು
ದಿಟಕ್ಕೆ ಬಂದರೆ ಪರಿಹರಿಸಲರಿಯೆನು
ಎನಗೆ ನಿಸ್ಪೃಹದ ದೆಸೆಯನೆಂದಿಂಗೀವೆಯಯ್ಯಾ
ಸಕಳೇಶ್ವರದೇವಾ

[ನಿಸ್ಪೃಹ-ಆಸೆ ಇರದ; ತೃಪ್ತ; ಸಮಚಿತ್ತ]

ಸಕಳೇಶಮಾದರಸನ ವಚನ. ನಿಸ್ಪೃಹತೆಯ ಪ್ರಶ್ನೆಯನ್ನು ನಮ್ಮ ಮುಂದೆ ಒಡ್ಡುತ್ತದೆ ಈ ವಚನ. ದುಡ್ಡಿಲ್ಲದಿದ್ದಾಗ, ಹೆಣ್ಣು ದೊರೆಯದಿದ್ದಾಗ ಸನ್ಯಾಸಿ, ವಿರಕ್ತ, ಅಂದುಕೊಳ್ಳುವುದು ಸುಲಭ. ಸಿಗದಿರುವಾಗ ಬೇಡ ಅನ್ನುವುದು ಕಷ್ಟವಲ್ಲವೇ ಅಲ್ಲ. ಆದರೆ ಯಾವುದು ಬೇಡ ಅನ್ನುತ್ತೇನೋ ಅದು ನಿಜವಾಗಿಯೂ ಎದುರಿಗೆ ಬಂದಾಗ ಪರಿಹರಿಸಲು ಆಗದೆ ತಳಮಳಕ್ಕೆ ಒಳಗಾಗುತ್ತೇನೆ. ನನ್ನ ಮನಸ್ಸಿಗೆ ನಿಸ್ಪೃಹತೆಯ ದೆಸೆಯನ್ನು ಯಾವಾಗ ಕೊಡುತ್ತೀಯೆ ದೇವರೇ ಎಂದು ವಚನಕಾರ ಬೇಡುತ್ತಿದ್ದಾನೆ.

ನಮ್ಮ ನಮ್ಮ ವ್ಯಕ್ತಿತ್ವದ ಬಗ್ಗೆ ಆಕರ್ಷಕ ಕಲ್ಪನೆಗಳನ್ನಿಟ್ಟುಕೊಂಡು ಭ್ರಮೆಗೆ ಒಳಗಾಗುವುದು ಸುಲಭ. ಆದರೆ ದಿಟಕ್ಕೂ ನಮಗೆದುರಾಗುವ ಪ್ರಲೋಭನೆಗಳನ್ನು ಗೆಲಲ್ಲಾಗದು ಎಂಬ ಮನುಷ್ಯ ಸಹಜವಾದ ದೌರ್ಬಲ್ಯವನ್ನು ಪ್ರಾಮಾಣಿಕವಾಗಿ ಒಪ್ಪಿಕೊಳ್ಳುತ್ತಿದ್ದಾನೆ ಸಕಳೇಶ ಮಾದರಸ.
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...