Home / ಲೇಖನ / ಇತರೆ / ವಚನ ವಿಚಾರ – ನಿಜವೇ?

ವಚನ ವಿಚಾರ – ನಿಜವೇ?

ಅರ್ಥ ಸನ್ಯಾಸಿ ಬ್ರಹ್ಮಚಾರಿ ಆನಯ್ಯ
ದೊರೆಕೊಳ್ಳದಿರ್ದಡೆ ಒಲ್ಲೆನೆಂಬೆನು
ದಿಟಕ್ಕೆ ಬಂದರೆ ಪರಿಹರಿಸಲರಿಯೆನು
ಎನಗೆ ನಿಸ್ಪೃಹದ ದೆಸೆಯನೆಂದಿಂಗೀವೆಯಯ್ಯಾ
ಸಕಳೇಶ್ವರದೇವಾ

[ನಿಸ್ಪೃಹ-ಆಸೆ ಇರದ; ತೃಪ್ತ; ಸಮಚಿತ್ತ]

ಸಕಳೇಶಮಾದರಸನ ವಚನ. ನಿಸ್ಪೃಹತೆಯ ಪ್ರಶ್ನೆಯನ್ನು ನಮ್ಮ ಮುಂದೆ ಒಡ್ಡುತ್ತದೆ ಈ ವಚನ. ದುಡ್ಡಿಲ್ಲದಿದ್ದಾಗ, ಹೆಣ್ಣು ದೊರೆಯದಿದ್ದಾಗ ಸನ್ಯಾಸಿ, ವಿರಕ್ತ, ಅಂದುಕೊಳ್ಳುವುದು ಸುಲಭ. ಸಿಗದಿರುವಾಗ ಬೇಡ ಅನ್ನುವುದು ಕಷ್ಟವಲ್ಲವೇ ಅಲ್ಲ. ಆದರೆ ಯಾವುದು ಬೇಡ ಅನ್ನುತ್ತೇನೋ ಅದು ನಿಜವಾಗಿಯೂ ಎದುರಿಗೆ ಬಂದಾಗ ಪರಿಹರಿಸಲು ಆಗದೆ ತಳಮಳಕ್ಕೆ ಒಳಗಾಗುತ್ತೇನೆ. ನನ್ನ ಮನಸ್ಸಿಗೆ ನಿಸ್ಪೃಹತೆಯ ದೆಸೆಯನ್ನು ಯಾವಾಗ ಕೊಡುತ್ತೀಯೆ ದೇವರೇ ಎಂದು ವಚನಕಾರ ಬೇಡುತ್ತಿದ್ದಾನೆ.

ನಮ್ಮ ನಮ್ಮ ವ್ಯಕ್ತಿತ್ವದ ಬಗ್ಗೆ ಆಕರ್ಷಕ ಕಲ್ಪನೆಗಳನ್ನಿಟ್ಟುಕೊಂಡು ಭ್ರಮೆಗೆ ಒಳಗಾಗುವುದು ಸುಲಭ. ಆದರೆ ದಿಟಕ್ಕೂ ನಮಗೆದುರಾಗುವ ಪ್ರಲೋಭನೆಗಳನ್ನು ಗೆಲಲ್ಲಾಗದು ಎಂಬ ಮನುಷ್ಯ ಸಹಜವಾದ ದೌರ್ಬಲ್ಯವನ್ನು ಪ್ರಾಮಾಣಿಕವಾಗಿ ಒಪ್ಪಿಕೊಳ್ಳುತ್ತಿದ್ದಾನೆ ಸಕಳೇಶ ಮಾದರಸ.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...