ವಚನ ವಿಚಾರ – ನಿಜವೇ?

ವಚನ ವಿಚಾರ – ನಿಜವೇ?

ಅರ್ಥ ಸನ್ಯಾಸಿ ಬ್ರಹ್ಮಚಾರಿ ಆನಯ್ಯ
ದೊರೆಕೊಳ್ಳದಿರ್ದಡೆ ಒಲ್ಲೆನೆಂಬೆನು
ದಿಟಕ್ಕೆ ಬಂದರೆ ಪರಿಹರಿಸಲರಿಯೆನು
ಎನಗೆ ನಿಸ್ಪೃಹದ ದೆಸೆಯನೆಂದಿಂಗೀವೆಯಯ್ಯಾ
ಸಕಳೇಶ್ವರದೇವಾ

[ನಿಸ್ಪೃಹ-ಆಸೆ ಇರದ; ತೃಪ್ತ; ಸಮಚಿತ್ತ]

ಸಕಳೇಶಮಾದರಸನ ವಚನ. ನಿಸ್ಪೃಹತೆಯ ಪ್ರಶ್ನೆಯನ್ನು ನಮ್ಮ ಮುಂದೆ ಒಡ್ಡುತ್ತದೆ ಈ ವಚನ. ದುಡ್ಡಿಲ್ಲದಿದ್ದಾಗ, ಹೆಣ್ಣು ದೊರೆಯದಿದ್ದಾಗ ಸನ್ಯಾಸಿ, ವಿರಕ್ತ, ಅಂದುಕೊಳ್ಳುವುದು ಸುಲಭ. ಸಿಗದಿರುವಾಗ ಬೇಡ ಅನ್ನುವುದು ಕಷ್ಟವಲ್ಲವೇ ಅಲ್ಲ. ಆದರೆ ಯಾವುದು ಬೇಡ ಅನ್ನುತ್ತೇನೋ ಅದು ನಿಜವಾಗಿಯೂ ಎದುರಿಗೆ ಬಂದಾಗ ಪರಿಹರಿಸಲು ಆಗದೆ ತಳಮಳಕ್ಕೆ ಒಳಗಾಗುತ್ತೇನೆ. ನನ್ನ ಮನಸ್ಸಿಗೆ ನಿಸ್ಪೃಹತೆಯ ದೆಸೆಯನ್ನು ಯಾವಾಗ ಕೊಡುತ್ತೀಯೆ ದೇವರೇ ಎಂದು ವಚನಕಾರ ಬೇಡುತ್ತಿದ್ದಾನೆ.

ನಮ್ಮ ನಮ್ಮ ವ್ಯಕ್ತಿತ್ವದ ಬಗ್ಗೆ ಆಕರ್ಷಕ ಕಲ್ಪನೆಗಳನ್ನಿಟ್ಟುಕೊಂಡು ಭ್ರಮೆಗೆ ಒಳಗಾಗುವುದು ಸುಲಭ. ಆದರೆ ದಿಟಕ್ಕೂ ನಮಗೆದುರಾಗುವ ಪ್ರಲೋಭನೆಗಳನ್ನು ಗೆಲಲ್ಲಾಗದು ಎಂಬ ಮನುಷ್ಯ ಸಹಜವಾದ ದೌರ್ಬಲ್ಯವನ್ನು ಪ್ರಾಮಾಣಿಕವಾಗಿ ಒಪ್ಪಿಕೊಳ್ಳುತ್ತಿದ್ದಾನೆ ಸಕಳೇಶ ಮಾದರಸ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಚಿತ್ರದ ಅಂಗಡಿ
Next post ಜೀವನ್ಮುಕ್ತರು

ಸಣ್ಣ ಕತೆ

  • ಇರುವುದೆಲ್ಲವ ಬಿಟ್ಟು

    ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

  • ಕಳ್ಳನ ಹೃದಯಸ್ಪಂದನ

    ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…