Home / ಲೇಖನ / ಇತರೆ / ವಚನ ವಿಚಾರ – ನನ್ನ ಗಂಡ ಮಿಕ್ಕವರಂತಲ್ಲ

ವಚನ ವಿಚಾರ – ನನ್ನ ಗಂಡ ಮಿಕ್ಕವರಂತಲ್ಲ

ಅವರಾರ ಪರಿಯಲ್ಲ ಎಮ್ಮ ನಲ್ಲನು
ವಿಶ್ವವೆಲ್ಲ ಸತಿಯರು
ಸೋಜಿಗದ ಪುರುಷನು
ಅವರವರ ಪರಿಯಲ್ಲೆ ನೆರೆವನು
ಅವರಿಗವರಂತೆ ಸುಖಮಯನು ನೋಡಾ
ಅವರೆಲ್ಲರ ವಂಚಿಸಿ ಎನ್ನನಗಲದ ಪರಿಯ ನೋಡಾ
ಕೆಳದಿ
ನೀನೊಳ್ಳಿದಳಾದಡೆ
ಮಹಾಮಂತ್ರವ ಜಪಿಸು
ನಿನ್ನನಗಲನು
ನಿನ್ನಾಣೆ
ಉರಿಲಿಂಗದೇವ
ತನ್ನಾಣೆ ಕೆಳದಿ

[ನೆರೆವನು-ಕೂಡುವನು, ನೀನೊಳ್ಳಿದಳಾದಡೆ-ನೀನು ಒಳ್ಳೆಯವಳಾಗಿದ್ದರೆ]

ಉರಿಲಿಂಗದೇವನ ವಚನ. ನನ್ನ ಗಂಡ ಮಿಕ್ಕವರ ಗಂಡನಂತೆ ಅಲ್ಲ. ಇಡೀ ವಿಶ್ವವೇ ಅವನ ಹೆಂಡಿರು. ಅವರವರಿಗೆ ಬೇಕಾದಂತೆ ಅವರವರೊಡನೆ ಇರುತ್ತಾನೆ. ಅವರವರಿಗೆ ತಕ್ಕಂತೆ ಸುಖ ಕೊಡುತ್ತಾನೆ. ಆದರೆ ವಿಚಿತ್ರವೆಂದರೆ ಅವನಿಗೆ ನನ್ನ ಮೇಲೆ ತುಂಬ ಪ್ರೀತಿ, ಮಿಕ್ಕವರನ್ನೆಲ್ಲ ವಂಚಿಸಿ ನನ್ನೊಡನೆ ಇದ್ದಾನೆ. ನನ್ನನ್ನು ಬಿಟ್ಟು ಅಗಲುವುದಿಲ್ಲ. ನೀನು ಒಳ್ಳೆಯವಳಾದರೆ ಮಹಾಮಂತ್ರವನ್ನು ಜಪಿಸು. ಅವನು ನಿನ್ನೊಡನೆಯೇ ಇರುವಂತಾಗುತ್ತದೆ, ನಿನ್ನನ್ನು ಬಿಟ್ಟು ಹೋಗದಂತಾಗುತ್ತದೆ.

ದೈವವು ಇಷ್ಟದೈವವಾಗುವ ಪರಿ ಈ ವಚನದಲ್ಲಿದೆ. ರಾಸಲೀಲೆಯಾಡುವಾಗ ಕೃಷ್ಣ ಎಲ್ಲ ಗೋಪಿಕೆಯರೊಡನೆಯೂ ಇರುತ್ತಿದ್ದನಂತಲ್ಲ, ಹಾಗೆಯೇ ಇದು. ಇಡೀ ವಿಶ್ವಕ್ಕೆ ದೈವವಾದವನು, ನನ್ನೊಬ್ಬಳ ಸ್ವಂತವಾಗುವ ವೈಚಿತ್ರ್ಯ ಅಚ್ಚರಿಗೆ ಕಾರಣವಾಗಿದೆ. ಇದು ಅವನನ್ನು ಪತಿಯಾಗಿ ಪಡೆಯಬಯಸುವ ಎಲ್ಲರಿಗೂ ಸಾಧ್ಯ ಅನ್ನುತ್ತದೆ ಉರಿಲಿಂಗದೇವನ ಈ ವಚನ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...