Home / ಲೇಖನ / ಇತರೆ / ವಚನ ವಿಚಾರ – ನನ್ನ ಗಂಡ ಮಿಕ್ಕವರಂತಲ್ಲ

ವಚನ ವಿಚಾರ – ನನ್ನ ಗಂಡ ಮಿಕ್ಕವರಂತಲ್ಲ

ಅವರಾರ ಪರಿಯಲ್ಲ ಎಮ್ಮ ನಲ್ಲನು
ವಿಶ್ವವೆಲ್ಲ ಸತಿಯರು
ಸೋಜಿಗದ ಪುರುಷನು
ಅವರವರ ಪರಿಯಲ್ಲೆ ನೆರೆವನು
ಅವರಿಗವರಂತೆ ಸುಖಮಯನು ನೋಡಾ
ಅವರೆಲ್ಲರ ವಂಚಿಸಿ ಎನ್ನನಗಲದ ಪರಿಯ ನೋಡಾ
ಕೆಳದಿ
ನೀನೊಳ್ಳಿದಳಾದಡೆ
ಮಹಾಮಂತ್ರವ ಜಪಿಸು
ನಿನ್ನನಗಲನು
ನಿನ್ನಾಣೆ
ಉರಿಲಿಂಗದೇವ
ತನ್ನಾಣೆ ಕೆಳದಿ

[ನೆರೆವನು-ಕೂಡುವನು, ನೀನೊಳ್ಳಿದಳಾದಡೆ-ನೀನು ಒಳ್ಳೆಯವಳಾಗಿದ್ದರೆ]

ಉರಿಲಿಂಗದೇವನ ವಚನ. ನನ್ನ ಗಂಡ ಮಿಕ್ಕವರ ಗಂಡನಂತೆ ಅಲ್ಲ. ಇಡೀ ವಿಶ್ವವೇ ಅವನ ಹೆಂಡಿರು. ಅವರವರಿಗೆ ಬೇಕಾದಂತೆ ಅವರವರೊಡನೆ ಇರುತ್ತಾನೆ. ಅವರವರಿಗೆ ತಕ್ಕಂತೆ ಸುಖ ಕೊಡುತ್ತಾನೆ. ಆದರೆ ವಿಚಿತ್ರವೆಂದರೆ ಅವನಿಗೆ ನನ್ನ ಮೇಲೆ ತುಂಬ ಪ್ರೀತಿ, ಮಿಕ್ಕವರನ್ನೆಲ್ಲ ವಂಚಿಸಿ ನನ್ನೊಡನೆ ಇದ್ದಾನೆ. ನನ್ನನ್ನು ಬಿಟ್ಟು ಅಗಲುವುದಿಲ್ಲ. ನೀನು ಒಳ್ಳೆಯವಳಾದರೆ ಮಹಾಮಂತ್ರವನ್ನು ಜಪಿಸು. ಅವನು ನಿನ್ನೊಡನೆಯೇ ಇರುವಂತಾಗುತ್ತದೆ, ನಿನ್ನನ್ನು ಬಿಟ್ಟು ಹೋಗದಂತಾಗುತ್ತದೆ.

ದೈವವು ಇಷ್ಟದೈವವಾಗುವ ಪರಿ ಈ ವಚನದಲ್ಲಿದೆ. ರಾಸಲೀಲೆಯಾಡುವಾಗ ಕೃಷ್ಣ ಎಲ್ಲ ಗೋಪಿಕೆಯರೊಡನೆಯೂ ಇರುತ್ತಿದ್ದನಂತಲ್ಲ, ಹಾಗೆಯೇ ಇದು. ಇಡೀ ವಿಶ್ವಕ್ಕೆ ದೈವವಾದವನು, ನನ್ನೊಬ್ಬಳ ಸ್ವಂತವಾಗುವ ವೈಚಿತ್ರ್ಯ ಅಚ್ಚರಿಗೆ ಕಾರಣವಾಗಿದೆ. ಇದು ಅವನನ್ನು ಪತಿಯಾಗಿ ಪಡೆಯಬಯಸುವ ಎಲ್ಲರಿಗೂ ಸಾಧ್ಯ ಅನ್ನುತ್ತದೆ ಉರಿಲಿಂಗದೇವನ ಈ ವಚನ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...