Home / ಲೇಖನ / ಇತರೆ / ವಚನ ವಿಚಾರ – ನನ್ನ ಗಂಡ ಮಿಕ್ಕವರಂತಲ್ಲ

ವಚನ ವಿಚಾರ – ನನ್ನ ಗಂಡ ಮಿಕ್ಕವರಂತಲ್ಲ

ಅವರಾರ ಪರಿಯಲ್ಲ ಎಮ್ಮ ನಲ್ಲನು
ವಿಶ್ವವೆಲ್ಲ ಸತಿಯರು
ಸೋಜಿಗದ ಪುರುಷನು
ಅವರವರ ಪರಿಯಲ್ಲೆ ನೆರೆವನು
ಅವರಿಗವರಂತೆ ಸುಖಮಯನು ನೋಡಾ
ಅವರೆಲ್ಲರ ವಂಚಿಸಿ ಎನ್ನನಗಲದ ಪರಿಯ ನೋಡಾ
ಕೆಳದಿ
ನೀನೊಳ್ಳಿದಳಾದಡೆ
ಮಹಾಮಂತ್ರವ ಜಪಿಸು
ನಿನ್ನನಗಲನು
ನಿನ್ನಾಣೆ
ಉರಿಲಿಂಗದೇವ
ತನ್ನಾಣೆ ಕೆಳದಿ

[ನೆರೆವನು-ಕೂಡುವನು, ನೀನೊಳ್ಳಿದಳಾದಡೆ-ನೀನು ಒಳ್ಳೆಯವಳಾಗಿದ್ದರೆ]

ಉರಿಲಿಂಗದೇವನ ವಚನ. ನನ್ನ ಗಂಡ ಮಿಕ್ಕವರ ಗಂಡನಂತೆ ಅಲ್ಲ. ಇಡೀ ವಿಶ್ವವೇ ಅವನ ಹೆಂಡಿರು. ಅವರವರಿಗೆ ಬೇಕಾದಂತೆ ಅವರವರೊಡನೆ ಇರುತ್ತಾನೆ. ಅವರವರಿಗೆ ತಕ್ಕಂತೆ ಸುಖ ಕೊಡುತ್ತಾನೆ. ಆದರೆ ವಿಚಿತ್ರವೆಂದರೆ ಅವನಿಗೆ ನನ್ನ ಮೇಲೆ ತುಂಬ ಪ್ರೀತಿ, ಮಿಕ್ಕವರನ್ನೆಲ್ಲ ವಂಚಿಸಿ ನನ್ನೊಡನೆ ಇದ್ದಾನೆ. ನನ್ನನ್ನು ಬಿಟ್ಟು ಅಗಲುವುದಿಲ್ಲ. ನೀನು ಒಳ್ಳೆಯವಳಾದರೆ ಮಹಾಮಂತ್ರವನ್ನು ಜಪಿಸು. ಅವನು ನಿನ್ನೊಡನೆಯೇ ಇರುವಂತಾಗುತ್ತದೆ, ನಿನ್ನನ್ನು ಬಿಟ್ಟು ಹೋಗದಂತಾಗುತ್ತದೆ.

ದೈವವು ಇಷ್ಟದೈವವಾಗುವ ಪರಿ ಈ ವಚನದಲ್ಲಿದೆ. ರಾಸಲೀಲೆಯಾಡುವಾಗ ಕೃಷ್ಣ ಎಲ್ಲ ಗೋಪಿಕೆಯರೊಡನೆಯೂ ಇರುತ್ತಿದ್ದನಂತಲ್ಲ, ಹಾಗೆಯೇ ಇದು. ಇಡೀ ವಿಶ್ವಕ್ಕೆ ದೈವವಾದವನು, ನನ್ನೊಬ್ಬಳ ಸ್ವಂತವಾಗುವ ವೈಚಿತ್ರ್ಯ ಅಚ್ಚರಿಗೆ ಕಾರಣವಾಗಿದೆ. ಇದು ಅವನನ್ನು ಪತಿಯಾಗಿ ಪಡೆಯಬಯಸುವ ಎಲ್ಲರಿಗೂ ಸಾಧ್ಯ ಅನ್ನುತ್ತದೆ ಉರಿಲಿಂಗದೇವನ ಈ ವಚನ.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...