Home / ಲೇಖನ / ಇತರೆ / ವಚನ ವಿಚಾರ – ಸುಖ ದುಃಖದ ನಕ್ಷತ್ರ

ವಚನ ವಿಚಾರ – ಸುಖ ದುಃಖದ ನಕ್ಷತ್ರ

ಆಕಾಶದಲ್ಲಿ ತಾರೆಗಳು ಕಾಣಬಾರದೆಂಬ ಯೋಚನೆಯುಳ್ಳಡೆ
ಸೂರ್ಯೋದಯಕ್ಕಯ್ಯಾ
ಆಕಾಶದಲ್ಲಿ ತಾರೆಗಳು ಕಾಣಬೇಕೆಂಬ ಯೋಚನೆಯುಳ್ಳಡೆ
ಸೂರ್ಯಾಸ್ತಮಾನಕ್ಕಯ್ಯಾ
ಕಾಣಬಾರದು ಕಾಣಬಾರದು ಜ್ಞಾನದಲ್ಲಿ ಆನಂದ ಅನಾನಂದವ
ಕಾಣಬಹುದು ಕಾಣಬಹುದು ಅಜ್ಞಾನದಲ್ಲಿ
ಸುಖದುಃಖೋಭಯದ್ವಂದ್ವವ
ಭೋ ಭೋ ಕಪಿಲಸಿದ್ಧಮಲ್ಲಿಕಾರ್ಜುನಾ ಭೋ

ಸಿದ್ಧರಾಮನ ವಚನ. ಇದು ನಿತ್ಯಾನುಭವದ ರೂಪಕವೊಂದನ್ನು ಬಳಸಿಕೊಂಡು ಜ್ಞಾನದ ಸ್ವರೂಪವನ್ನು ಹೇಳುತ್ತದೆ.

ನಕ್ಷತ್ರಗಳು ಕಾಣಬಾರದು ಎಂದಿದ್ದರೆ ಸೂರ್ಯ ಹುಟ್ಟುವವರೆಗೆ ಕಾದಿರಬೇಕು, ನಕ್ಷತ್ರಗಳು ಕಾಣಬೇಕೆಂದಿದ್ದರೆ ಸೂರ್ಯಮುಳುಗುವವರೆಗೆ ಕಾದಿರಬೇಕು. ನಕ್ಷತ್ರ ಕಾಣದೆ ಇರುವುದು ಸುಖ, ಕಾಣುವುದು ಕಷ್ಟ ಎಂದು ಬೇಕಾದರೂ ಅರ್ಥಮಾಡಿಕೊಳ್ಳಬಹುದು ಅಥವಾ ಪಲ್ಲಟಗೊಳಿಸಿಯೂ ತಿಳಿಯಬಹುದು. ಏನೇ ಇದ್ದರೂ ಒಂದು ಸುಖ, ಇನ್ನೊಂದು ದುಃಖದ ಸೂಚಕ.

ಒಂದು ಬೇಕು ಇನ್ನೊಂದು ಬೇಡ ಎನ್ನುವುದಾದರೆ ಅದು ಬರುವವರೆಗೆ, ಅಥವ ಹೋಗುವವರೆಗೆ ಕಾದಿರಬೇಕು. ಜ್ಞಾನವೆನ್ನುವುದು ಸುಖವೂ ಅಲ್ಲ ಸುಖವಲ್ಲದ್ದೂ ಅಲ್ಲ. ಅಜ್ಞಾನವಿದ್ದಾಗ ಮಾತ್ರ ಇವೆರಡೂ ಬೇರೆ ಎಂಬ ದ್ವಂದ್ವವಿರುತ್ತದೆ ಎನ್ನುತ್ತದೆ ವಚನ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...