Home / ಲೇಖನ / ಇತರೆ / ವಚನ ವಿಚಾರ – ಅರ್ಧ ಮಂಚ

ವಚನ ವಿಚಾರ – ಅರ್ಧ ಮಂಚ

ಆನೆ ಕುದುರೆ ಭಂಡಾರವಿರ್ದಡೇನೋ
ತಾನುಂಬುದು ಪಡಿಯಕ್ಕಿ
ಒಂದಾವಿನ ಹಾಲು
ಮಲಗುವುದರ್ಧ ಮಂಚ
ಈ ಹುರುಳಿಲ್ಲದ ಸಿರಿಯ ನೆಚ್ಚಿ ಕೆಡಬೇಡ ಮನುಜಾ
ಒಡಲು ಭೂಮಿಯ ಸಂಗ
ಒಡವೆ ತಾನೇನಪ್ಪುದೋ
ಕೈಹಿಡಿದ ಮಡದಿ ಪರರ ಸಂಗ
ಪ್ರಾಣ ವಾಯುವಿನ ಸಂಗ
ಸಾವಿಂಗೆ ಸಂಗಡವಾರೂ ಇಲ್ಲ ಕಾಣಾ
ನಿಃಕಳಂಕ ಮಲ್ಲಿ ಕಾರ್ಜುನಾ

[ಪಡಿ-ಒಂದು ಅಳತೆ, ಒಂದಾವಿನ-ಒಂದು ಹಸುವಿನ]

ಮೋಳಿಗೆ ಮಾರಯ್ಯನ ವಚನ. `ನನ್ನದು’ ಎಂದುಕೊಂಡ ವಸ್ತುಗಳಲ್ಲೇ ಬದುಕಿನ ಸಾರ್ಥಕತೆಯನ್ನು ಕಾಣುವ ಧೋರಣೆ ಸರಿಯಲ್ಲ ಅನ್ನುತ್ತದೆ ಈ ವಚನ. ಆನೆ, ಕುದುರೆ, ಭಂಡಾರ ಅನ್ನುವದರ ಬದಲು ಕಾರು, ಬೈಕು, ಆರಂಕಿಯ ಸಂಬಳ ಎಂದು ಕೊಳ್ಳೋಣ. ಆಗ ನಮ್ಮ ಕಾಲದ ಬಗ್ಗೆ ಕಾಮೆಂಟರಿ ಮಾಡುತ್ತಿರುವಂತೆ ಇದೆ ಅನ್ನಿಸುವುದಿಲ್ಲವೇ? ಅಷ್ಟೆಲ್ಲ ಇದ್ದರೂ ತಿನ್ನುವುದು ಮಾತ್ರ ಒಂದಳತೆ ಅಕ್ಕಿಯ ಅನ್ನ, ಅದೂ ನಮ್ಮ ಹೊಟ್ಟೆ ಹಿಡಿಸುವುವಷ್ಟೇ. ಅರ್ಧಮಂಚ ಅನ್ನುವುದಂತೂ ಅದ್ಭುತವಾದ ರೂಪಕ.

ನನಗೆ ಸುಖಕೊಡುವ ಜೊತೆ ಜೀವಿಯೊಡನೆ ಅರ್ಧ ಮಂಚ ಹಂಚಿಕೊಳ್ಳಬೇಕು. ಇಬ್ಬರೂ ಸ್ವಂತದ ಸುಖವನ್ನೇ ಅಪೇಕ್ಷಿಸುತ್ತಾ ಸುಖ ಸಿಕ್ಕಿದ್ದೂ ಭ್ರಮೆಯೇ ಆಗಬಹುದು. ಹಾಗೆ ಸುಖದ ಸಾಧನ ಅಂದುಕೊಂಡಿರುವ ಮಂಚ ಸಿಕ್ಕಿದ್ದೂ ಅರ್ಧವೇ! ಸುಖಸಾಧನವಾದ ದೇಹ ನನ್ನದು ಅಂದುಕೊಂಡರೆ ಅದೂ ಭೂಮಿಯ ಪಾಲು, ಜೀವಿಸಿದ್ದೇನೆನ್ನುವುದಕ್ಕೆ ಆಡುತ್ತಿರುವ ಉಸಿರು ಕೂಡ ಗಾಳಿಯ ಪಾಲು. ನನ್ನವಳೆಂದುಕೊಂಡ ಹೆಂಡತಿ ನನ್ನ ನಂತರ ಬೇರೆಯವರ ಪಾಲಾಗುವುದಿಲ್ಲವೇ, ಆಗಬಾರದೇ? ಹಾಗಿದ್ದರೆ ನನ್ನ ಜೊತೆಗೆ ಯಾರಿದ್ದಾರೆ, ಏನಿದೆ? ಸಾವು ಒಂದೇ, ಸಂಗಡ ಇರುವವರು ಯಾರೂ ಇಲ್ಲ. ಹತಾಶೆಯೋ, ಅಗಾಧ ಒಂಟಿತನದ ಅನುಭವವೋ, ಇಂಗ್ಲಿಶಿನಲ್ಲಿ ಆಂಗ್ಸ್ಟ್ ಅನ್ನುತ್ತಾರಲ್ಲ ಅದೋ, ಏನಾದರೂ ಕರೆಯಿರಿ. ಕಾಡುವ ಏಕಾಂಗಿತನ ಕೇವಲ ಆಧುನಿಕ ಕಾಲದ್ದೂ ಅಲ್ಲ. ಅದು ಎಲ್ಲ ಕಾಲದ ಮನುಷ್ಯ ಬದುಕಿನ ಸತ್ಯ ಅನ್ನಿಸುತ್ತದೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...