ವಚನ ವಿಚಾರ – ಅರ್ಧ ಮಂಚ

ವಚನ ವಿಚಾರ – ಅರ್ಧ ಮಂಚ

ಆನೆ ಕುದುರೆ ಭಂಡಾರವಿರ್ದಡೇನೋ
ತಾನುಂಬುದು ಪಡಿಯಕ್ಕಿ
ಒಂದಾವಿನ ಹಾಲು
ಮಲಗುವುದರ್ಧ ಮಂಚ
ಈ ಹುರುಳಿಲ್ಲದ ಸಿರಿಯ ನೆಚ್ಚಿ ಕೆಡಬೇಡ ಮನುಜಾ
ಒಡಲು ಭೂಮಿಯ ಸಂಗ
ಒಡವೆ ತಾನೇನಪ್ಪುದೋ
ಕೈಹಿಡಿದ ಮಡದಿ ಪರರ ಸಂಗ
ಪ್ರಾಣ ವಾಯುವಿನ ಸಂಗ
ಸಾವಿಂಗೆ ಸಂಗಡವಾರೂ ಇಲ್ಲ ಕಾಣಾ
ನಿಃಕಳಂಕ ಮಲ್ಲಿ ಕಾರ್ಜುನಾ

[ಪಡಿ-ಒಂದು ಅಳತೆ, ಒಂದಾವಿನ-ಒಂದು ಹಸುವಿನ]

ಮೋಳಿಗೆ ಮಾರಯ್ಯನ ವಚನ. `ನನ್ನದು’ ಎಂದುಕೊಂಡ ವಸ್ತುಗಳಲ್ಲೇ ಬದುಕಿನ ಸಾರ್ಥಕತೆಯನ್ನು ಕಾಣುವ ಧೋರಣೆ ಸರಿಯಲ್ಲ ಅನ್ನುತ್ತದೆ ಈ ವಚನ. ಆನೆ, ಕುದುರೆ, ಭಂಡಾರ ಅನ್ನುವದರ ಬದಲು ಕಾರು, ಬೈಕು, ಆರಂಕಿಯ ಸಂಬಳ ಎಂದು ಕೊಳ್ಳೋಣ. ಆಗ ನಮ್ಮ ಕಾಲದ ಬಗ್ಗೆ ಕಾಮೆಂಟರಿ ಮಾಡುತ್ತಿರುವಂತೆ ಇದೆ ಅನ್ನಿಸುವುದಿಲ್ಲವೇ? ಅಷ್ಟೆಲ್ಲ ಇದ್ದರೂ ತಿನ್ನುವುದು ಮಾತ್ರ ಒಂದಳತೆ ಅಕ್ಕಿಯ ಅನ್ನ, ಅದೂ ನಮ್ಮ ಹೊಟ್ಟೆ ಹಿಡಿಸುವುವಷ್ಟೇ. ಅರ್ಧಮಂಚ ಅನ್ನುವುದಂತೂ ಅದ್ಭುತವಾದ ರೂಪಕ.

ನನಗೆ ಸುಖಕೊಡುವ ಜೊತೆ ಜೀವಿಯೊಡನೆ ಅರ್ಧ ಮಂಚ ಹಂಚಿಕೊಳ್ಳಬೇಕು. ಇಬ್ಬರೂ ಸ್ವಂತದ ಸುಖವನ್ನೇ ಅಪೇಕ್ಷಿಸುತ್ತಾ ಸುಖ ಸಿಕ್ಕಿದ್ದೂ ಭ್ರಮೆಯೇ ಆಗಬಹುದು. ಹಾಗೆ ಸುಖದ ಸಾಧನ ಅಂದುಕೊಂಡಿರುವ ಮಂಚ ಸಿಕ್ಕಿದ್ದೂ ಅರ್ಧವೇ! ಸುಖಸಾಧನವಾದ ದೇಹ ನನ್ನದು ಅಂದುಕೊಂಡರೆ ಅದೂ ಭೂಮಿಯ ಪಾಲು, ಜೀವಿಸಿದ್ದೇನೆನ್ನುವುದಕ್ಕೆ ಆಡುತ್ತಿರುವ ಉಸಿರು ಕೂಡ ಗಾಳಿಯ ಪಾಲು. ನನ್ನವಳೆಂದುಕೊಂಡ ಹೆಂಡತಿ ನನ್ನ ನಂತರ ಬೇರೆಯವರ ಪಾಲಾಗುವುದಿಲ್ಲವೇ, ಆಗಬಾರದೇ? ಹಾಗಿದ್ದರೆ ನನ್ನ ಜೊತೆಗೆ ಯಾರಿದ್ದಾರೆ, ಏನಿದೆ? ಸಾವು ಒಂದೇ, ಸಂಗಡ ಇರುವವರು ಯಾರೂ ಇಲ್ಲ. ಹತಾಶೆಯೋ, ಅಗಾಧ ಒಂಟಿತನದ ಅನುಭವವೋ, ಇಂಗ್ಲಿಶಿನಲ್ಲಿ ಆಂಗ್ಸ್ಟ್ ಅನ್ನುತ್ತಾರಲ್ಲ ಅದೋ, ಏನಾದರೂ ಕರೆಯಿರಿ. ಕಾಡುವ ಏಕಾಂಗಿತನ ಕೇವಲ ಆಧುನಿಕ ಕಾಲದ್ದೂ ಅಲ್ಲ. ಅದು ಎಲ್ಲ ಕಾಲದ ಮನುಷ್ಯ ಬದುಕಿನ ಸತ್ಯ ಅನ್ನಿಸುತ್ತದೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಆಕಳು ಅಂಬಾ! ಅನ್ನುತಿದೆ!
Next post ರಾಜಕಾರಣ

ಸಣ್ಣ ಕತೆ

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…

  • ತನ್ನೊಳಗಣ ಕಿಚ್ಚು

    ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

  • ರಣಹದ್ದುಗಳು

    ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…