Home / ಲೇಖನ / ಇತರೆ / ವಚನ ವಿಚಾರ – ಸುಮ್ಮನೆ ದುಃಖ

ವಚನ ವಿಚಾರ – ಸುಮ್ಮನೆ ದುಃಖ

ಆರಕ್ಕೆಯ ಸಿರಿಗೆ ಆರಕ್ಕೆ ಚಿಂತಿಸುವರು
ಆರಕ್ಕೆಯ ಬಡತನಕ್ಕೆ ಆರಕ್ಕೆ ಮರುಗುವರು
ಇದಾರಕ್ಕೆ ಆರಕ್ಕೆ
ಇದೇನಕ್ಕೆ ಏನಕ್ಕೆ
ಮಾಯದ ಬೇಳುವೆ ಹುರುಳಿಲ್ಲ
ಕೊಂದು ಕೂಗಿತ್ತು ನೋಡಾ ಗುಹೇಶ್ವರ

[ಆರಕ್ಕೆ-ಬೇಳುವೆ, ಆಶ್ಚರ್ಯ, ಗೊಂದಲ, ಮರುಳು]

ಅಲ್ಲಮನ ವಚನ. ಯಾರಿಗೋ ಸಂಪತ್ತು ಬಂದರೆ ಯಾರೋ ಯಾತಕ್ಕೋ ಚಿಂತಿಸುತ್ತಾರೆ. ಯಾರಿಗೋ ಬಡತನ ಬಂದರೆ ಯಾಕೋ ಸುಮ್ಮನೆ ಮರುಗುತ್ತಾರೆ. ಇದು ಯಾಕೆ, ಇದು ಏಕೆ, ಇದೇ ಮಾಯೆ. ಎಲ್ಲರನ್ನೂ ಕಾಡಿಸುವ ಮಾಯೆ. ಜಗತ್ತಿನ ಅತಿ ಶ್ರೀಮಂತರ ಬಗ್ಗೆ ತಿಳಿಯುವ ಅಸೆ, ಅವರನ್ನು ಕುರಿತು ಕಾಮೆಂಟ್ ಮಾಡುವ ಚಪಲ. ಯಾರಿಗೋ ದುಃಖ ಒದಗಿದರೆ ಅವರಿಗಾಗಿ ಅಯ್ಯೋ ಅನ್ನುತ್ತಿದ್ದೇವೆ ನಾವು ಎಂಬುದು ಎಲ್ಲರಿಗೂ ತಿಳಿಯಲಿ ಎಂಬ ಚಪಲ. ಇತರರ ಶ್ರೀಮಂತಿಕೆ, ಇತರರ ದುಃಖ ಇವುಗಳೇ ನಮ್ಮ ಮನಸ್ಸಿನ ಲೋಕದ ಬಹುಪಾಲು ತುಂಬಿಕೊಂಡಿರುವುದೇ ಒಂದು ವಿಚಿತ್ರ. ಹಾಗಾಗಬಾರದಿತ್ತು ಅಯ್ಯೋ ಅನ್ನುವ ಸಹಾನುಭೂತಿಗೆ ಅರ್ಥವಿಲ್ಲ. ಹಾಗೆಯೇ ಇನ್ನೊಬ್ಬರ ಹಿರಿಮೆ ಕಂಡು ಕೊಂಡಾಡುವುದೋ ಕರುಬುವುದೋ, ಅದಕ್ಕೂ ಅರ್ಥವಿಲ್ಲ. ಆದರೆ ಈ ಅರ್ಥವಿಲ್ಲದ ಚಿಂತೆಗಳೇ ನಮ್ಮನ್ನು ಆಕ್ರಮಿಸಿಕೊಳ್ಳುವುದೇಕೆ?

ಅಲ್ಲಮನಂತೆಯೇ ಬಸವ ಕೂಡ “ನೆರೆಮನೆಯವರ ದುಃಖಕ್ಕೆ ಅಳುವವರ ಮೆಚ್ಚ ಕೂಡಲಸಂಗಮ” ಎಂದಿರುವುದುಂಟು. ನಾವು ಯಾವುದನ್ನು ತೀರ ಸರಳವಾಗಿ ಮರುಕ ಮತ್ತು ಸಂತೋಷ ಅನ್ನುತ್ತೇವೋ ಅವೆಲ್ಲ ಎಷ್ಟು ಅರ್ಥಹೀನ ಅನ್ನುವುದನ್ನು ಈ ವಚನ ಹೇಳುತ್ತಿದೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...