Home / ಲೇಖನ / ಇತರೆ / ವಚನ ವಿಚಾರ – ಸಮತೆ

ವಚನ ವಿಚಾರ – ಸಮತೆ

ಆರೇನೆಂದಡೂ ಓರಂತಿಪ್ಪುದೆ ಸಮತೆ
ಆರು ಜರಿದವರೆನ್ನ ಮನದ ಕಾಳಿಕೆಯ ಕಳೆದರೆಂಬುದೆ ಸಮತೆ
ಆರು ಸ್ತೌತ್ಯವ ಮಾಡಿಹರೆನ್ನ ಜನ್ಮಜನ್ಮದ ಹಗೆಗಳೆಂಬುದೆ ಸಮತೆ
ಇಂತಿದು ಗುರುಕಾರುಣ್ಯ
ಮನವಚನಕಾಯದಲ್ಲಿ ಅವಿತತವಿಲ್ಲದಿರ್ದಡೆ
ಕಪಿಲಸಿದ್ಧಮಲ್ಲಿಕಾರ್ಜುನಾ ನಿನ್ನವರ ನೀನೆಂಬುದೆ ಸಮತೆ.

[ಓರಂತೆ- ಕಾಳಿಕೆ-ಕಲ್ಮಶ, ಸ್ತೌತ್ಯ-ಸ್ತುತಿ, ಅವಿತಥ-ವಂಚನೆ]

ಸಿದ್ಧರಾಮನ ವಚನ. ಯಾರು ಜರಿದರೂ ಅವರು ನನ್ನ ಮನಸ್ಸಿನ ಕಲ್ಮಶ ಕಳೆದರು ಅನ್ನುವುದೇ ಸಮತೆ. ಯಾರಾದರೂ ಹೊಗಳಿದರೆ ಅವರು ನನ್ನ ಜನ್ಮಾಂತರದ ಹಗೆಗಳೆಂದು ತಿಳಿಯುವುದು ಸಮತೆ. ಹೀಗೆ ಇರುವುದು ಗುರುಕರುಣೆಯಿಂದಷ್ಟೆ ಸಾಧ್ಯವಾದೀತು. ನಮ್ಮ ಮನಸ್ಸು, ಮಾತು, ದೇಹದಲ್ಲಿ ಸುಳ್ಳು, ವಂಚನೆ ಇರದಿದ್ದರೆ ದೇವರಿಗೆ ಸೇರಿದವರೆಲ್ಲರನ್ನೂ ದೇವರೆಂದೇ ತಿಳಿಯುವುದು ಸಮತೆ.

ದೇವರು ಎಲ್ಲೆಡೆಯಲ್ಲೂ ಇದ್ದಾನೆ ಎಂಬುದು ಬಲುಮಟ್ಟಿಗೆ ನಾವು ಕಲಿತಮಾತು, ಹೊರತು ನಮ್ಮ ಅನುಭವವಲ್ಲ. ಅದು ಒಂದು ವೇಳೆ ಅನುಭವವೇ ಆದರೆ ಆಗ ನಾನು ಮಾತ್ರವಲ್ಲ ಲೋಕದಲ್ಲಿ ಕಾಣುವುದೆಲ್ಲವೂ ದೇವರೇ ಅನ್ನುವುದು ಅನುಭವವೇ ಆದರೆ ಆಗ ಪ್ರತ್ಯೇಕತೆಗೆ, ಭೇದಭಾವಕ್ಕೆ ಅವಕಾಶವೆಲ್ಲಿ? ಸಿದ್ಧರಾಮನ ಸಮತೆಯ ಕಲ್ಪನೆಯ ಒಂದು ಮುಖ ಇದು.
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...