Home / ಲೇಖನ / ಇತರೆ / ವಚನ ವಿಚಾರ – ಯಾರೂ ಇಲ್ಲವೆಂದು

ವಚನ ವಿಚಾರ – ಯಾರೂ ಇಲ್ಲವೆಂದು

ಆರೂ ಇಲ್ಲವೆಂದು ಆಳಿಗೊಳಲುಬೇಡ ಕಂಡೆಯಾ
ಏನ ಮಾಡಿದಡೂ ಆನಂಜುವಳಲ್ಲ
ತರಗೆಲೆಯ ಮೆಲಿದು ಆನಿಹೆನು
ಸರಿಯ ಮೇಲೊರಗಿ ಆನಿಹೆನು
ಚೆನ್ನಮಲ್ಲಿಕಾರ್ಜುನಯ್ಯಾ
ಕರ ಕೇಡನೊಡ್ಡಿದಡೆ ಒಡಲನು ಪ್ರಾಣವನು ನಿಮಗರ್ಪಿಸಿ ಶುದ್ಧಳಹೆನು

[ಆರೂ-ಯಾರೂ, ಆಳಿಗೊಳಲುಬೇಡ-ದುಃಖಗೊಳ್ಳಬೇಡ, ಆನಂಜುವಳಲ್ಲ-ನಾನು ಹೆದರುವವಳಲ್ಲ, ಆನಿಹೆನು-ನಾನಿರುವೆನು, ಸರಿ-ಕತ್ತಿಯ ಅಲಗು, ಕರ ಕೇಡು-ಅತಿಯಾದ ಕಷ್ಟ]

ಅಕ್ಕ ಮಹಾದೇವಿಯ ವಚನ. ಈ ವಚನವನ್ನು ಯಾರಿಗೆ ಹೇಳುತ್ತಿರಬಹುದು? ತನಗೆ ತಾನೇ, ಅಥವಾ ತನ್ನನ್ನು ಪರೀಕ್ಷಿಸಲು ಬಯಸಿದ ಮತ್ತೊಬ್ಬರಿಗೆ, ಅಥವ ಚನ್ನಮಲ್ಲಿಕಾರ್ಜುನನಿಗೇ ಹೇಳುತ್ತಿದ್ದಾಳೆಯೋ ಏನೋ. ಮೂರನೆಯ ಸಾಧ್ಯತೆ ಸೂಕ್ತವೆನಿಸುತ್ತದೆ.

ನನಗೆ ಯಾರೂ ಇಲ್ಲ, ಅನಾಥಳು ಎಂದು ನಿರ್ಲಕ್ಷ್ಯ ಮಾಡಬೇಡ, ನಾನು ತರಗೆಲೆಗಳನ್ನು ತಿಂದುಕೊಂಡಿದ್ದೇನೆ. (ಮರದ ಎಲೆಗಳನ್ನೇ ತಿಂದುಕೊಂಡು ತಪಸ್ಸು ಮಾಡುವ ಕ್ರಮವೂ ಇತ್ತೆಂದು ತೋರುತ್ತದೆ. ಗಿರಿಜೆಯು ಶಿವನ ಕುರಿತು ತಪಸ್ಸು ಮಾಡಿದಾಗ ಕೆಲವು ಕಾಲ ಎಲೆಗಳನ್ನೇ ತಿಂದು ಇದ್ದಳೆಂಬ ಕಥೆ ಇದೆ). ಚೂಪಾದ ಕತ್ತಿಯ ಮೇಲೆ ಒರಗಿದ್ದೇನೆ. ಚನ್ನಮಲ್ಲಿಕಾರ್ಜುನನನ್ನು ಬಯಸಿ ನನಗೆ ನಾನೇ ಹೀಗೆ ದಂಡನೆ ಕೊಟ್ಟುಕೊಳ್ಳುತ್ತಿರುವಾಗ ಇನ್ನೇನು ಆಗಲು ಸಾಧ್ಯ. ಚನ್ನಮಲ್ಲಿಕಾರ್ಜುನ ಇನ್ನೂ ಅತಿ ಕೆಡುಕನ್ನೇನಾದರೂ ಒಡ್ಡಿದರೆ ದೇಹ, ಪ್ರಾಣ ಎರಡನ್ನೂ ಅವನಿಗೇ ಅರ್ಪಿಸಿಬಿಡುತ್ತೇನೆ.

ನನಗೆ ಇರುವುದು ಚೆನ್ನಮಲ್ಲಿಕಾರ್ಜುನ ಮಾತ್ರ ಅವನೇ ನನನ್ನು ಯಾರೂ ಇಲ್ಲವೆಂದು ನಿರ್ಲಕ್ಷ್ಯ ಮಾಡಿದರೆ ಅದೇ ಪರಮ ಕೇಡು. ಹಾಗೆ ಮಾಡಿಯಾನೇ ಎಂಬ ಆತಂಕದ ದನಿಯೂ ಇಲ್ಲಿ ಕೇಳುವುದೇ? ಹಾಗಾಗುವುದಾದರೆ ಪ್ರಾಣ, ದೇಹ ಎರಡೂ ಅವನಿಗೇ ಅರ್ಪಣೆಯಾಗಲಿ ಅನ್ನುವಾಗ ಹತಾಶೆ ಇದೆಯೋ, ಗಟ್ಟಿ ಮನಸ್ಸು ಇದೆಯೋ?
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...