Home / ಲೇಖನ / ಇತರೆ / ವಚನ ವಿಚಾರ – ಯಾರೂ ಇಲ್ಲವೆಂದು

ವಚನ ವಿಚಾರ – ಯಾರೂ ಇಲ್ಲವೆಂದು

ಆರೂ ಇಲ್ಲವೆಂದು ಆಳಿಗೊಳಲುಬೇಡ ಕಂಡೆಯಾ
ಏನ ಮಾಡಿದಡೂ ಆನಂಜುವಳಲ್ಲ
ತರಗೆಲೆಯ ಮೆಲಿದು ಆನಿಹೆನು
ಸರಿಯ ಮೇಲೊರಗಿ ಆನಿಹೆನು
ಚೆನ್ನಮಲ್ಲಿಕಾರ್ಜುನಯ್ಯಾ
ಕರ ಕೇಡನೊಡ್ಡಿದಡೆ ಒಡಲನು ಪ್ರಾಣವನು ನಿಮಗರ್ಪಿಸಿ ಶುದ್ಧಳಹೆನು

[ಆರೂ-ಯಾರೂ, ಆಳಿಗೊಳಲುಬೇಡ-ದುಃಖಗೊಳ್ಳಬೇಡ, ಆನಂಜುವಳಲ್ಲ-ನಾನು ಹೆದರುವವಳಲ್ಲ, ಆನಿಹೆನು-ನಾನಿರುವೆನು, ಸರಿ-ಕತ್ತಿಯ ಅಲಗು, ಕರ ಕೇಡು-ಅತಿಯಾದ ಕಷ್ಟ]

ಅಕ್ಕ ಮಹಾದೇವಿಯ ವಚನ. ಈ ವಚನವನ್ನು ಯಾರಿಗೆ ಹೇಳುತ್ತಿರಬಹುದು? ತನಗೆ ತಾನೇ, ಅಥವಾ ತನ್ನನ್ನು ಪರೀಕ್ಷಿಸಲು ಬಯಸಿದ ಮತ್ತೊಬ್ಬರಿಗೆ, ಅಥವ ಚನ್ನಮಲ್ಲಿಕಾರ್ಜುನನಿಗೇ ಹೇಳುತ್ತಿದ್ದಾಳೆಯೋ ಏನೋ. ಮೂರನೆಯ ಸಾಧ್ಯತೆ ಸೂಕ್ತವೆನಿಸುತ್ತದೆ.

ನನಗೆ ಯಾರೂ ಇಲ್ಲ, ಅನಾಥಳು ಎಂದು ನಿರ್ಲಕ್ಷ್ಯ ಮಾಡಬೇಡ, ನಾನು ತರಗೆಲೆಗಳನ್ನು ತಿಂದುಕೊಂಡಿದ್ದೇನೆ. (ಮರದ ಎಲೆಗಳನ್ನೇ ತಿಂದುಕೊಂಡು ತಪಸ್ಸು ಮಾಡುವ ಕ್ರಮವೂ ಇತ್ತೆಂದು ತೋರುತ್ತದೆ. ಗಿರಿಜೆಯು ಶಿವನ ಕುರಿತು ತಪಸ್ಸು ಮಾಡಿದಾಗ ಕೆಲವು ಕಾಲ ಎಲೆಗಳನ್ನೇ ತಿಂದು ಇದ್ದಳೆಂಬ ಕಥೆ ಇದೆ). ಚೂಪಾದ ಕತ್ತಿಯ ಮೇಲೆ ಒರಗಿದ್ದೇನೆ. ಚನ್ನಮಲ್ಲಿಕಾರ್ಜುನನನ್ನು ಬಯಸಿ ನನಗೆ ನಾನೇ ಹೀಗೆ ದಂಡನೆ ಕೊಟ್ಟುಕೊಳ್ಳುತ್ತಿರುವಾಗ ಇನ್ನೇನು ಆಗಲು ಸಾಧ್ಯ. ಚನ್ನಮಲ್ಲಿಕಾರ್ಜುನ ಇನ್ನೂ ಅತಿ ಕೆಡುಕನ್ನೇನಾದರೂ ಒಡ್ಡಿದರೆ ದೇಹ, ಪ್ರಾಣ ಎರಡನ್ನೂ ಅವನಿಗೇ ಅರ್ಪಿಸಿಬಿಡುತ್ತೇನೆ.

ನನಗೆ ಇರುವುದು ಚೆನ್ನಮಲ್ಲಿಕಾರ್ಜುನ ಮಾತ್ರ ಅವನೇ ನನನ್ನು ಯಾರೂ ಇಲ್ಲವೆಂದು ನಿರ್ಲಕ್ಷ್ಯ ಮಾಡಿದರೆ ಅದೇ ಪರಮ ಕೇಡು. ಹಾಗೆ ಮಾಡಿಯಾನೇ ಎಂಬ ಆತಂಕದ ದನಿಯೂ ಇಲ್ಲಿ ಕೇಳುವುದೇ? ಹಾಗಾಗುವುದಾದರೆ ಪ್ರಾಣ, ದೇಹ ಎರಡೂ ಅವನಿಗೇ ಅರ್ಪಣೆಯಾಗಲಿ ಅನ್ನುವಾಗ ಹತಾಶೆ ಇದೆಯೋ, ಗಟ್ಟಿ ಮನಸ್ಸು ಇದೆಯೋ?
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...