ವಚನ ವಿಚಾರ – ದೇವರ ಹಂಗೇಕೆ

ವಚನ ವಿಚಾರ – ದೇವರ ಹಂಗೇಕೆ

ಆವ ಕಾಯಕವಾದಡೂ ಸ್ವಕಾಯಕವ ಮಾಡಿ
ಗುರು ಲಿಂಗ ಜಂಗಮದ ಮುಂದಿಟ್ಟು
ಒಕ್ಕುದ ಹಾರೈಸಿ
ಮಿಕ್ಕುದ ಕೈಕೊಂಡು
ವ್ಯಾಧಿ ಬಂದಡೆ ನರಳು
ಬೇನೆ ಬಂದಡೆ ಒರಲು
ಜೀವ ಹೋದಡೆ ಸಾಯಿ
ಇದಕ್ಕಾ ದೇವರ ಹಂಗೇಕೆ
ಭಾಪು ಲದ್ದೆಯ ಸೋಮಾ

[ಒಕ್ಕುದ-ಲದ್ದೆ-ಹುಲ್ಲಿನ ಹೊರೆ]

ಲದ್ದೆಯ ಸೋಮನ ವಚನ. ನಮ್ಮ ಪಾಲಿಗೆ ಬಂದ ಕಾಯಕ ಯಾವುದಾದರೂ ಸರಿ. ನಾವೇ ಮಾಡಬೇಕಾದ ನಮ್ಮ ಕೆಲಸವನ್ನು ನಿಷ್ಠೆಯಿಂದ ಮಾಡಬೇಕು. ನಮ್ಮ ಕಾಯಕದಿಂದ ಬಂದ ಫಲವನ್ನು ನಮಗಿಂತ ಹಿರಿಯರಾದವರಿಗೆ (ಗುರು), ಲೋಕಕ್ಕೆ (ಲಿಂಗ), ಪ್ರಜ್ಞಾವಂತರಾದವರಿಗೆ (ಜಂಗಮ) ಅರ್ಪಿಸಬೇಕು. ಉಳಿದದ್ದನ್ನು ನಮ್ಮದೆಂದು ಪಡೆದುಕೊಳ್ಳಬೇಕು. ಮಾಡಬೇಕಾದದ್ದು ಇಷ್ಟೇ. ಇದರಾಚೆಗೆ ರೋಗ ಬಂದರೆ ನರಳಬೇಕು, ನೋವಾದರೆ ಒರಲಬೇಕು, ಜೀವ ಹೋದರೆ ಸಾಯಬೇಕು. ಬದುಕು ಇಷ್ಟು. ಇದರಲ್ಲಿ ದೇವರ ಹಂಗು ಯಾಕೆ ಬೇಕು?

ಒಕ್ಕು ಎಂಬ ಮಾತಿಗೆ ಪ್ರಸಾದ ಮತ್ತು ಶುಭದ ಹಾರೈಕೆ ಎಂಬ ಎರಡು ಅರ್ಥಗಳಿವೆ. ನಮ್ಮ ದುಡಿಮೆಯಿಂದ ದಕ್ಕಿದ್ದೇ ಪ್ರಸಾದ. ನಮ್ಮ ದುಡಿಮೆಯಿಂದ ಹಾರೈಸಬೇಕಾದದ್ದು ಒಳಿತನ್ನೇ. ಈ ದುಡಿಮೆಯ ಗುರಿಯಾದರೋ ಸ್ವಾರ್ಥವಲ್ಲ. ಬದುಕಿಗೆ ದಾರಿ ತೋರುವ ಗುರು, ವಿಶ್ವದ ಚೈತನ್ಯ, ಪ್ರಜ್ಞಾವಂತ ಜೀವಿಗಳು ಇವರೆಲ್ಲರಿಗೆ ನಮ್ಮ ದುಡಿಮೆಯ ಫಲವನ್ನು ಅರ್ಪಿಸಿ, ಉಳಿದದ್ದನ್ನು ನಮ್ಮದು ಎಂದುಕೊಳ್ಳಬೇಕು. ಬದುಕು ಎಂದರೆ ಪಡೆಯುವುದಲ್ಲ, ಕೊಡುವುದು, ಬದುಕು ಇಷ್ಟೇ, ನಿಷ್ಠಾವಂತ ದುಡಿಮೆ, ಆ ದುಡಿಮೆಯ ಮೂಲಕ ಅಹಂಕಾರದ ತ್ಯಾಗ. ಇದರಾಚೆಗೆ ಏನೂ ಇಲ್ಲ. ಸುಮ್ಮನೆ ದೇವರನ್ನು ಯಾಕೆ ಕಟ್ಟಿಕೊಂಡು ಗೋಳಾಡುತ್ತೇವೆ? ಕಾಯಿಲೆ ಆದಾಗ ನರಳಬೇಕು, ಬೇರೆ ವಿಧಿಯಿಲ್ಲ. ನೋವಾದರೆ ಅಯ್ಯೋ ಎಂದು ಚೀರಬೇಕು, ಬೇರೆ ವಿಧಿಯಿಲ್ಲ. ಜೀವ ಹೋದಾಗ ಸಾಯಬೇಕು, ಬೇರೆ ವಿಧಿಯಿಲ್ಲ.

ರೋಗ, ಬೇನೆ, ಸಾವು ಇವೆಲ್ಲ ಅನಿವಾರ್ಯವೇ ಆಗಿರುವಾಗ ಇವೆಲ್ಲದರಿಂದ ಕಾಪಾಡು ದೇವರೇ ಎಂದು ಕೇಳುವುದೇ ಮೂರ್ಖತನವಿದ್ದಿತು. ಕೊಟ್ಟ ಕುದುರೆ ಎಂಬ ಅಲ್ಲಮನ ವಚನವನ್ನು ನೆನೆದುಕೊಂಡರೆ ನಮ್ಮ ಪಾಲಿಗೆ ಬಂದ ನಮ್ಮ ಕೆಲಸ ಮಾಡುವುದಷ್ಟೆ ನಿಜ, ಶುಭದ ಹಾರೈಕೆಯಷ್ಟೇ ನಮಗೆ ಸಾಧ್ಯ, ಈ ದುಡಿಮೆ, ಈ ಹಾರೈಕೆಗಳಷ್ಟೇ ಪ್ರಸಾದ; ದೇವರು ಗೀವರು ಎಂಬುದೆಲ್ಲ ಬರಿಯ ಮಾತು ಎಂದು ಈ ವಚನಕಾರ ಹೇಳುವಂತಿದೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸೀತಾದೇವಿಯ ಅಗ್ನಿಪ್ರವೇಶ
Next post ಶೂನ್ಯ

ಸಣ್ಣ ಕತೆ

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

  • ಮಿಂಚಿನ ದೀಪ

    ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…

  • ನಾಗನ ವರಿಸಿದ ಬಿಂಬಾಲಿ…

    ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ… Read more…

  • ಒಲವೆ ನಮ್ಮ ಬದುಕು

    "The best of you is he who behaves best towards the members of his family" (The Holy Prophet) ವಾರದ ಸಂತೆ.… Read more…