ವಚನ ವಿಚಾರ – ದೇವರ ಹಂಗೇಕೆ

ವಚನ ವಿಚಾರ – ದೇವರ ಹಂಗೇಕೆ

ಆವ ಕಾಯಕವಾದಡೂ ಸ್ವಕಾಯಕವ ಮಾಡಿ
ಗುರು ಲಿಂಗ ಜಂಗಮದ ಮುಂದಿಟ್ಟು
ಒಕ್ಕುದ ಹಾರೈಸಿ
ಮಿಕ್ಕುದ ಕೈಕೊಂಡು
ವ್ಯಾಧಿ ಬಂದಡೆ ನರಳು
ಬೇನೆ ಬಂದಡೆ ಒರಲು
ಜೀವ ಹೋದಡೆ ಸಾಯಿ
ಇದಕ್ಕಾ ದೇವರ ಹಂಗೇಕೆ
ಭಾಪು ಲದ್ದೆಯ ಸೋಮಾ

[ಒಕ್ಕುದ-ಲದ್ದೆ-ಹುಲ್ಲಿನ ಹೊರೆ]

ಲದ್ದೆಯ ಸೋಮನ ವಚನ. ನಮ್ಮ ಪಾಲಿಗೆ ಬಂದ ಕಾಯಕ ಯಾವುದಾದರೂ ಸರಿ. ನಾವೇ ಮಾಡಬೇಕಾದ ನಮ್ಮ ಕೆಲಸವನ್ನು ನಿಷ್ಠೆಯಿಂದ ಮಾಡಬೇಕು. ನಮ್ಮ ಕಾಯಕದಿಂದ ಬಂದ ಫಲವನ್ನು ನಮಗಿಂತ ಹಿರಿಯರಾದವರಿಗೆ (ಗುರು), ಲೋಕಕ್ಕೆ (ಲಿಂಗ), ಪ್ರಜ್ಞಾವಂತರಾದವರಿಗೆ (ಜಂಗಮ) ಅರ್ಪಿಸಬೇಕು. ಉಳಿದದ್ದನ್ನು ನಮ್ಮದೆಂದು ಪಡೆದುಕೊಳ್ಳಬೇಕು. ಮಾಡಬೇಕಾದದ್ದು ಇಷ್ಟೇ. ಇದರಾಚೆಗೆ ರೋಗ ಬಂದರೆ ನರಳಬೇಕು, ನೋವಾದರೆ ಒರಲಬೇಕು, ಜೀವ ಹೋದರೆ ಸಾಯಬೇಕು. ಬದುಕು ಇಷ್ಟು. ಇದರಲ್ಲಿ ದೇವರ ಹಂಗು ಯಾಕೆ ಬೇಕು?

ಒಕ್ಕು ಎಂಬ ಮಾತಿಗೆ ಪ್ರಸಾದ ಮತ್ತು ಶುಭದ ಹಾರೈಕೆ ಎಂಬ ಎರಡು ಅರ್ಥಗಳಿವೆ. ನಮ್ಮ ದುಡಿಮೆಯಿಂದ ದಕ್ಕಿದ್ದೇ ಪ್ರಸಾದ. ನಮ್ಮ ದುಡಿಮೆಯಿಂದ ಹಾರೈಸಬೇಕಾದದ್ದು ಒಳಿತನ್ನೇ. ಈ ದುಡಿಮೆಯ ಗುರಿಯಾದರೋ ಸ್ವಾರ್ಥವಲ್ಲ. ಬದುಕಿಗೆ ದಾರಿ ತೋರುವ ಗುರು, ವಿಶ್ವದ ಚೈತನ್ಯ, ಪ್ರಜ್ಞಾವಂತ ಜೀವಿಗಳು ಇವರೆಲ್ಲರಿಗೆ ನಮ್ಮ ದುಡಿಮೆಯ ಫಲವನ್ನು ಅರ್ಪಿಸಿ, ಉಳಿದದ್ದನ್ನು ನಮ್ಮದು ಎಂದುಕೊಳ್ಳಬೇಕು. ಬದುಕು ಎಂದರೆ ಪಡೆಯುವುದಲ್ಲ, ಕೊಡುವುದು, ಬದುಕು ಇಷ್ಟೇ, ನಿಷ್ಠಾವಂತ ದುಡಿಮೆ, ಆ ದುಡಿಮೆಯ ಮೂಲಕ ಅಹಂಕಾರದ ತ್ಯಾಗ. ಇದರಾಚೆಗೆ ಏನೂ ಇಲ್ಲ. ಸುಮ್ಮನೆ ದೇವರನ್ನು ಯಾಕೆ ಕಟ್ಟಿಕೊಂಡು ಗೋಳಾಡುತ್ತೇವೆ? ಕಾಯಿಲೆ ಆದಾಗ ನರಳಬೇಕು, ಬೇರೆ ವಿಧಿಯಿಲ್ಲ. ನೋವಾದರೆ ಅಯ್ಯೋ ಎಂದು ಚೀರಬೇಕು, ಬೇರೆ ವಿಧಿಯಿಲ್ಲ. ಜೀವ ಹೋದಾಗ ಸಾಯಬೇಕು, ಬೇರೆ ವಿಧಿಯಿಲ್ಲ.

ರೋಗ, ಬೇನೆ, ಸಾವು ಇವೆಲ್ಲ ಅನಿವಾರ್ಯವೇ ಆಗಿರುವಾಗ ಇವೆಲ್ಲದರಿಂದ ಕಾಪಾಡು ದೇವರೇ ಎಂದು ಕೇಳುವುದೇ ಮೂರ್ಖತನವಿದ್ದಿತು. ಕೊಟ್ಟ ಕುದುರೆ ಎಂಬ ಅಲ್ಲಮನ ವಚನವನ್ನು ನೆನೆದುಕೊಂಡರೆ ನಮ್ಮ ಪಾಲಿಗೆ ಬಂದ ನಮ್ಮ ಕೆಲಸ ಮಾಡುವುದಷ್ಟೆ ನಿಜ, ಶುಭದ ಹಾರೈಕೆಯಷ್ಟೇ ನಮಗೆ ಸಾಧ್ಯ, ಈ ದುಡಿಮೆ, ಈ ಹಾರೈಕೆಗಳಷ್ಟೇ ಪ್ರಸಾದ; ದೇವರು ಗೀವರು ಎಂಬುದೆಲ್ಲ ಬರಿಯ ಮಾತು ಎಂದು ಈ ವಚನಕಾರ ಹೇಳುವಂತಿದೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸೀತಾದೇವಿಯ ಅಗ್ನಿಪ್ರವೇಶ
Next post ಶೂನ್ಯ

ಸಣ್ಣ ಕತೆ

  • ಜುಡಾಸ್

    "ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

  • ಬಾಗಿಲು ತೆರೆದಿತ್ತು

    ಆ ಮನೆಯ ಮುಂದಿನ ಬಾಗಿಲು ಯಾವಾಗಲೂ ಇಕ್ಕಿರುವುದು! ನನ್ನ ಓದುವ ಕೋಣೆಯ ಕಿಡಿಕೆಯೊಳಗಿಂದ ಆ ಮನೆಯ ಬಾಗಿಲು ಕಾಣುವುದು. ನಾನು ಕಿಡಿಕೆಯೊಳಗಿಂದ ಎಷ್ಟೋ ಸಲ ಅತ್ತ ಕಡೆ… Read more…

  • ದೇವರೇ ಪಾರುಮಾಡಿದಿ ಕಂಡಿಯಾ

    "Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…