Home / ಲೇಖನ / ಇತರೆ / ವಚನ ವಿಚಾರ – ದೇವರ ಹಂಗೇಕೆ

ವಚನ ವಿಚಾರ – ದೇವರ ಹಂಗೇಕೆ

ಆವ ಕಾಯಕವಾದಡೂ ಸ್ವಕಾಯಕವ ಮಾಡಿ
ಗುರು ಲಿಂಗ ಜಂಗಮದ ಮುಂದಿಟ್ಟು
ಒಕ್ಕುದ ಹಾರೈಸಿ
ಮಿಕ್ಕುದ ಕೈಕೊಂಡು
ವ್ಯಾಧಿ ಬಂದಡೆ ನರಳು
ಬೇನೆ ಬಂದಡೆ ಒರಲು
ಜೀವ ಹೋದಡೆ ಸಾಯಿ
ಇದಕ್ಕಾ ದೇವರ ಹಂಗೇಕೆ
ಭಾಪು ಲದ್ದೆಯ ಸೋಮಾ

[ಒಕ್ಕುದ-ಲದ್ದೆ-ಹುಲ್ಲಿನ ಹೊರೆ]

ಲದ್ದೆಯ ಸೋಮನ ವಚನ. ನಮ್ಮ ಪಾಲಿಗೆ ಬಂದ ಕಾಯಕ ಯಾವುದಾದರೂ ಸರಿ. ನಾವೇ ಮಾಡಬೇಕಾದ ನಮ್ಮ ಕೆಲಸವನ್ನು ನಿಷ್ಠೆಯಿಂದ ಮಾಡಬೇಕು. ನಮ್ಮ ಕಾಯಕದಿಂದ ಬಂದ ಫಲವನ್ನು ನಮಗಿಂತ ಹಿರಿಯರಾದವರಿಗೆ (ಗುರು), ಲೋಕಕ್ಕೆ (ಲಿಂಗ), ಪ್ರಜ್ಞಾವಂತರಾದವರಿಗೆ (ಜಂಗಮ) ಅರ್ಪಿಸಬೇಕು. ಉಳಿದದ್ದನ್ನು ನಮ್ಮದೆಂದು ಪಡೆದುಕೊಳ್ಳಬೇಕು. ಮಾಡಬೇಕಾದದ್ದು ಇಷ್ಟೇ. ಇದರಾಚೆಗೆ ರೋಗ ಬಂದರೆ ನರಳಬೇಕು, ನೋವಾದರೆ ಒರಲಬೇಕು, ಜೀವ ಹೋದರೆ ಸಾಯಬೇಕು. ಬದುಕು ಇಷ್ಟು. ಇದರಲ್ಲಿ ದೇವರ ಹಂಗು ಯಾಕೆ ಬೇಕು?

ಒಕ್ಕು ಎಂಬ ಮಾತಿಗೆ ಪ್ರಸಾದ ಮತ್ತು ಶುಭದ ಹಾರೈಕೆ ಎಂಬ ಎರಡು ಅರ್ಥಗಳಿವೆ. ನಮ್ಮ ದುಡಿಮೆಯಿಂದ ದಕ್ಕಿದ್ದೇ ಪ್ರಸಾದ. ನಮ್ಮ ದುಡಿಮೆಯಿಂದ ಹಾರೈಸಬೇಕಾದದ್ದು ಒಳಿತನ್ನೇ. ಈ ದುಡಿಮೆಯ ಗುರಿಯಾದರೋ ಸ್ವಾರ್ಥವಲ್ಲ. ಬದುಕಿಗೆ ದಾರಿ ತೋರುವ ಗುರು, ವಿಶ್ವದ ಚೈತನ್ಯ, ಪ್ರಜ್ಞಾವಂತ ಜೀವಿಗಳು ಇವರೆಲ್ಲರಿಗೆ ನಮ್ಮ ದುಡಿಮೆಯ ಫಲವನ್ನು ಅರ್ಪಿಸಿ, ಉಳಿದದ್ದನ್ನು ನಮ್ಮದು ಎಂದುಕೊಳ್ಳಬೇಕು. ಬದುಕು ಎಂದರೆ ಪಡೆಯುವುದಲ್ಲ, ಕೊಡುವುದು, ಬದುಕು ಇಷ್ಟೇ, ನಿಷ್ಠಾವಂತ ದುಡಿಮೆ, ಆ ದುಡಿಮೆಯ ಮೂಲಕ ಅಹಂಕಾರದ ತ್ಯಾಗ. ಇದರಾಚೆಗೆ ಏನೂ ಇಲ್ಲ. ಸುಮ್ಮನೆ ದೇವರನ್ನು ಯಾಕೆ ಕಟ್ಟಿಕೊಂಡು ಗೋಳಾಡುತ್ತೇವೆ? ಕಾಯಿಲೆ ಆದಾಗ ನರಳಬೇಕು, ಬೇರೆ ವಿಧಿಯಿಲ್ಲ. ನೋವಾದರೆ ಅಯ್ಯೋ ಎಂದು ಚೀರಬೇಕು, ಬೇರೆ ವಿಧಿಯಿಲ್ಲ. ಜೀವ ಹೋದಾಗ ಸಾಯಬೇಕು, ಬೇರೆ ವಿಧಿಯಿಲ್ಲ.

ರೋಗ, ಬೇನೆ, ಸಾವು ಇವೆಲ್ಲ ಅನಿವಾರ್ಯವೇ ಆಗಿರುವಾಗ ಇವೆಲ್ಲದರಿಂದ ಕಾಪಾಡು ದೇವರೇ ಎಂದು ಕೇಳುವುದೇ ಮೂರ್ಖತನವಿದ್ದಿತು. ಕೊಟ್ಟ ಕುದುರೆ ಎಂಬ ಅಲ್ಲಮನ ವಚನವನ್ನು ನೆನೆದುಕೊಂಡರೆ ನಮ್ಮ ಪಾಲಿಗೆ ಬಂದ ನಮ್ಮ ಕೆಲಸ ಮಾಡುವುದಷ್ಟೆ ನಿಜ, ಶುಭದ ಹಾರೈಕೆಯಷ್ಟೇ ನಮಗೆ ಸಾಧ್ಯ, ಈ ದುಡಿಮೆ, ಈ ಹಾರೈಕೆಗಳಷ್ಟೇ ಪ್ರಸಾದ; ದೇವರು ಗೀವರು ಎಂಬುದೆಲ್ಲ ಬರಿಯ ಮಾತು ಎಂದು ಈ ವಚನಕಾರ ಹೇಳುವಂತಿದೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...