Home / ಲೇಖನ / ಇತರೆ / ವಚನ ವಿಚಾರ – ಆಸೆ ರೋಷ

ವಚನ ವಿಚಾರ – ಆಸೆ ರೋಷ

ಆಸೆಯೆಂಬ ಕೂಸನೆತ್ತಲು
ರೋಷವೆಂಬ ತಾಯಿ ಮುಂದೆ ಬಂದಿಪ್ಪಳು
ನೋಡಾ
ಇಂತೆರಡಿಲ್ಲದೆ ಕೂಸನೆತ್ತಬಲ್ಲಡೆ
ಆತನೆ ಲಿಂಗೈಕ್ಯನು
ಗೊಹೇಶ್ವರ

ಅಲ್ಲಮನ ವಚನ. ಮನಸ್ಸಿನಲ್ಲಿ ಹುಟ್ಟುವ ಆಸೆ ಮತ್ತು ರೋಷಗಳಿಗೆ ಇರುವುದು ತಾಯಿ ಮಕ್ಕಳ ಸಂಬಂಧ. ಒಂದನ್ನು ಬಿಟ್ಟು ಒಂದಿರಲಾರವು. ಇವೆರಡೂ ಗುಣಗಳು ಇಲ್ಲವಾದಾಗ ಮನುಷ್ಯ ದೇವರಲ್ಲಿ ಒಂದಾಗಿರುತ್ತಾನೆ. ನಮ್ಮ ದಿನ ನಿತ್ಯದ ಬದುಕಿನಲ್ಲಿ ಮನಸ್ಸಿನ ಕಾರ್ಪಣ್ಯಗಳಿಗೆ ಕಾರಣವನ್ನು ಹುಡುಕುತ್ತ ಹೋದರೆ ಅವಕ್ಕೆಲ್ಲ ಮೂಲವಾಗಿ ಆಸೆ ಅಥವ ರೋಷಗಳೆಂಬ ಭಾವ ಇರುವುದು ತಿಳಿಯುತ್ತದೆ. ಆಸೆ ಮತ್ತು ರೋಷಗಳೆರಡೂ ನಮ್ಮ ಅಹಂಕಾರವನ್ನು ಗಟ್ಟಿಗೊಳಿಸುವ ಗುಣಗಳು.

ನಮ್ಮ ಎಲ್ಲ ಕೋಪಕ್ಕೆ ನಮ್ಮೊಳಗಿನ ಆಸೆಯೇ ಕಾರಣವಲ್ಲವೆ? ನಮ್ಮೊಳಗೆ ನಾವು ಬೆಳೆಸಿಕೊಂಡ ಆಸೆಗೆ ಧಕ್ಕೆ ಬಂದಾಗ ಕೋಪ, ರೋಷಗಳು ಮೂಡುತ್ತವೆ. ಹಾಗೆ ಹುಟ್ಟಿದ ರೋಷ ಅತೃಪ್ತವಾದ ಆಸೆಯನ್ನು ಮತ್ತಷ್ಟು ಗಟ್ಟಿಗೊಳಿಸುತ್ತದೆ. ಆಸೆಯಿಂದ ಕೋಪ, ಕೋಪದಿಂದ ಆಸೆ ಪರಸ್ಪರ ಬೆಳೆಯುತ್ತ ಹೋಗುತ್ತವೆ.

ದೇವರನ್ನು ನಮ್ಮಿಂದ ಬೇರೆಯಾದ ಒಂದು ಶಕ್ತಿ ಎಂದು ಸಾಮಾನ್ಯವಾಗಿ ತಿಳಿಯುತ್ತೇವೆ. ಹಾಗೆ ನಾವು ಬೇರೆ ಎಂಬ ಪ್ರತ್ಯೇಕತೆಯ ಭಾವ ಇರುವುದರಿಂದಲೇ ನನಗೆ ಅದು “ಬೇಕು” ಎಂಬ ಆಸೆ ಮತ್ತು ಸಿಗಲಿಲ್ಲವೆಂಬ ರೋಷ ಹುಟ್ಟುತ್ತವೆ. ಆಸೆ ರೋಷಗಳಿಂದ ನಾವು ನಮ್ಮ ಸುತ್ತಲವರಿಂದಲೂ ನಮ್ಮ ಕಲ್ಪನೆಯ ದೇವರಿಂದಲೂ ಬೇರೆಯಾಗುತ್ತ ದೂರವಾಗುತ್ತ ಹೋಗುತ್ತೇವೆ.

ಆಸೆಬುರುಕರನ್ನೂ ಕೋಪಿಷ್ಠರನ್ನೂ ನಾವು ದೂರವಿಡಲು ಬಯಸುವುದಿಲ್ಲವೇ? ಹಾಗೆಯೇ ದೇವರು ಕೂಡ ಆಸೆ ರೋಷಗಳು ಇರುವ ವ್ಯಕ್ತಿಗಳನ್ನು ದೂರವಿಡುತ್ತಾನೆ. ಆಸೆ ರೋಷಗಳನ್ನು ನೀಗಿಕೊಂಡಾಗ ವಿಶ್ವದ ಶಕ್ತಿಯೊಡನೆ ಐಕ್ಯ ಸಾಧ್ಯವಾಗುತ್ತದೆ ಎಂಬುದು ಅಲ್ಲಮನ ಮಾತು. ದೇವರನ್ನು ನಿರ್ಗುಣ ಅನ್ನುವುದುಂಟಲ್ಲವೆ? ಯಾಕೆಂದರೆ ದೇವರಿಗೆ ಆಸೆಯೂ ಇರಲಾರದು, ರೋಷವೂ ಇರಲಾರದು. ಇವೆರಡೂ ಗುಣಗಳನ್ನು ಇಲ್ಲವಾಗಿಸಿಕೊಂಡು ನಮ್ಮನ್ನು ನಾವು ಮಗುಗೊಳಿಸಿ ಕೊಂಡರೆ ಅದೇ ದೈವತ್ವ.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...