Home / ಲೇಖನ / ಇತರೆ / ವಚನ ವಿಚಾರ – ಆಸೆ ರೋಷ

ವಚನ ವಿಚಾರ – ಆಸೆ ರೋಷ

ಆಸೆಯೆಂಬ ಕೂಸನೆತ್ತಲು
ರೋಷವೆಂಬ ತಾಯಿ ಮುಂದೆ ಬಂದಿಪ್ಪಳು
ನೋಡಾ
ಇಂತೆರಡಿಲ್ಲದೆ ಕೂಸನೆತ್ತಬಲ್ಲಡೆ
ಆತನೆ ಲಿಂಗೈಕ್ಯನು
ಗೊಹೇಶ್ವರ

ಅಲ್ಲಮನ ವಚನ. ಮನಸ್ಸಿನಲ್ಲಿ ಹುಟ್ಟುವ ಆಸೆ ಮತ್ತು ರೋಷಗಳಿಗೆ ಇರುವುದು ತಾಯಿ ಮಕ್ಕಳ ಸಂಬಂಧ. ಒಂದನ್ನು ಬಿಟ್ಟು ಒಂದಿರಲಾರವು. ಇವೆರಡೂ ಗುಣಗಳು ಇಲ್ಲವಾದಾಗ ಮನುಷ್ಯ ದೇವರಲ್ಲಿ ಒಂದಾಗಿರುತ್ತಾನೆ. ನಮ್ಮ ದಿನ ನಿತ್ಯದ ಬದುಕಿನಲ್ಲಿ ಮನಸ್ಸಿನ ಕಾರ್ಪಣ್ಯಗಳಿಗೆ ಕಾರಣವನ್ನು ಹುಡುಕುತ್ತ ಹೋದರೆ ಅವಕ್ಕೆಲ್ಲ ಮೂಲವಾಗಿ ಆಸೆ ಅಥವ ರೋಷಗಳೆಂಬ ಭಾವ ಇರುವುದು ತಿಳಿಯುತ್ತದೆ. ಆಸೆ ಮತ್ತು ರೋಷಗಳೆರಡೂ ನಮ್ಮ ಅಹಂಕಾರವನ್ನು ಗಟ್ಟಿಗೊಳಿಸುವ ಗುಣಗಳು.

ನಮ್ಮ ಎಲ್ಲ ಕೋಪಕ್ಕೆ ನಮ್ಮೊಳಗಿನ ಆಸೆಯೇ ಕಾರಣವಲ್ಲವೆ? ನಮ್ಮೊಳಗೆ ನಾವು ಬೆಳೆಸಿಕೊಂಡ ಆಸೆಗೆ ಧಕ್ಕೆ ಬಂದಾಗ ಕೋಪ, ರೋಷಗಳು ಮೂಡುತ್ತವೆ. ಹಾಗೆ ಹುಟ್ಟಿದ ರೋಷ ಅತೃಪ್ತವಾದ ಆಸೆಯನ್ನು ಮತ್ತಷ್ಟು ಗಟ್ಟಿಗೊಳಿಸುತ್ತದೆ. ಆಸೆಯಿಂದ ಕೋಪ, ಕೋಪದಿಂದ ಆಸೆ ಪರಸ್ಪರ ಬೆಳೆಯುತ್ತ ಹೋಗುತ್ತವೆ.

ದೇವರನ್ನು ನಮ್ಮಿಂದ ಬೇರೆಯಾದ ಒಂದು ಶಕ್ತಿ ಎಂದು ಸಾಮಾನ್ಯವಾಗಿ ತಿಳಿಯುತ್ತೇವೆ. ಹಾಗೆ ನಾವು ಬೇರೆ ಎಂಬ ಪ್ರತ್ಯೇಕತೆಯ ಭಾವ ಇರುವುದರಿಂದಲೇ ನನಗೆ ಅದು “ಬೇಕು” ಎಂಬ ಆಸೆ ಮತ್ತು ಸಿಗಲಿಲ್ಲವೆಂಬ ರೋಷ ಹುಟ್ಟುತ್ತವೆ. ಆಸೆ ರೋಷಗಳಿಂದ ನಾವು ನಮ್ಮ ಸುತ್ತಲವರಿಂದಲೂ ನಮ್ಮ ಕಲ್ಪನೆಯ ದೇವರಿಂದಲೂ ಬೇರೆಯಾಗುತ್ತ ದೂರವಾಗುತ್ತ ಹೋಗುತ್ತೇವೆ.

ಆಸೆಬುರುಕರನ್ನೂ ಕೋಪಿಷ್ಠರನ್ನೂ ನಾವು ದೂರವಿಡಲು ಬಯಸುವುದಿಲ್ಲವೇ? ಹಾಗೆಯೇ ದೇವರು ಕೂಡ ಆಸೆ ರೋಷಗಳು ಇರುವ ವ್ಯಕ್ತಿಗಳನ್ನು ದೂರವಿಡುತ್ತಾನೆ. ಆಸೆ ರೋಷಗಳನ್ನು ನೀಗಿಕೊಂಡಾಗ ವಿಶ್ವದ ಶಕ್ತಿಯೊಡನೆ ಐಕ್ಯ ಸಾಧ್ಯವಾಗುತ್ತದೆ ಎಂಬುದು ಅಲ್ಲಮನ ಮಾತು. ದೇವರನ್ನು ನಿರ್ಗುಣ ಅನ್ನುವುದುಂಟಲ್ಲವೆ? ಯಾಕೆಂದರೆ ದೇವರಿಗೆ ಆಸೆಯೂ ಇರಲಾರದು, ರೋಷವೂ ಇರಲಾರದು. ಇವೆರಡೂ ಗುಣಗಳನ್ನು ಇಲ್ಲವಾಗಿಸಿಕೊಂಡು ನಮ್ಮನ್ನು ನಾವು ಮಗುಗೊಳಿಸಿ ಕೊಂಡರೆ ಅದೇ ದೈವತ್ವ.
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...