Home / ಲೇಖನ / ಇತರೆ / ವಚನ ವಿಚಾರ – ಆಸೆ ರೋಷ

ವಚನ ವಿಚಾರ – ಆಸೆ ರೋಷ

ಆಸೆಯೆಂಬ ಕೂಸನೆತ್ತಲು
ರೋಷವೆಂಬ ತಾಯಿ ಮುಂದೆ ಬಂದಿಪ್ಪಳು
ನೋಡಾ
ಇಂತೆರಡಿಲ್ಲದೆ ಕೂಸನೆತ್ತಬಲ್ಲಡೆ
ಆತನೆ ಲಿಂಗೈಕ್ಯನು
ಗೊಹೇಶ್ವರ

ಅಲ್ಲಮನ ವಚನ. ಮನಸ್ಸಿನಲ್ಲಿ ಹುಟ್ಟುವ ಆಸೆ ಮತ್ತು ರೋಷಗಳಿಗೆ ಇರುವುದು ತಾಯಿ ಮಕ್ಕಳ ಸಂಬಂಧ. ಒಂದನ್ನು ಬಿಟ್ಟು ಒಂದಿರಲಾರವು. ಇವೆರಡೂ ಗುಣಗಳು ಇಲ್ಲವಾದಾಗ ಮನುಷ್ಯ ದೇವರಲ್ಲಿ ಒಂದಾಗಿರುತ್ತಾನೆ. ನಮ್ಮ ದಿನ ನಿತ್ಯದ ಬದುಕಿನಲ್ಲಿ ಮನಸ್ಸಿನ ಕಾರ್ಪಣ್ಯಗಳಿಗೆ ಕಾರಣವನ್ನು ಹುಡುಕುತ್ತ ಹೋದರೆ ಅವಕ್ಕೆಲ್ಲ ಮೂಲವಾಗಿ ಆಸೆ ಅಥವ ರೋಷಗಳೆಂಬ ಭಾವ ಇರುವುದು ತಿಳಿಯುತ್ತದೆ. ಆಸೆ ಮತ್ತು ರೋಷಗಳೆರಡೂ ನಮ್ಮ ಅಹಂಕಾರವನ್ನು ಗಟ್ಟಿಗೊಳಿಸುವ ಗುಣಗಳು.

ನಮ್ಮ ಎಲ್ಲ ಕೋಪಕ್ಕೆ ನಮ್ಮೊಳಗಿನ ಆಸೆಯೇ ಕಾರಣವಲ್ಲವೆ? ನಮ್ಮೊಳಗೆ ನಾವು ಬೆಳೆಸಿಕೊಂಡ ಆಸೆಗೆ ಧಕ್ಕೆ ಬಂದಾಗ ಕೋಪ, ರೋಷಗಳು ಮೂಡುತ್ತವೆ. ಹಾಗೆ ಹುಟ್ಟಿದ ರೋಷ ಅತೃಪ್ತವಾದ ಆಸೆಯನ್ನು ಮತ್ತಷ್ಟು ಗಟ್ಟಿಗೊಳಿಸುತ್ತದೆ. ಆಸೆಯಿಂದ ಕೋಪ, ಕೋಪದಿಂದ ಆಸೆ ಪರಸ್ಪರ ಬೆಳೆಯುತ್ತ ಹೋಗುತ್ತವೆ.

ದೇವರನ್ನು ನಮ್ಮಿಂದ ಬೇರೆಯಾದ ಒಂದು ಶಕ್ತಿ ಎಂದು ಸಾಮಾನ್ಯವಾಗಿ ತಿಳಿಯುತ್ತೇವೆ. ಹಾಗೆ ನಾವು ಬೇರೆ ಎಂಬ ಪ್ರತ್ಯೇಕತೆಯ ಭಾವ ಇರುವುದರಿಂದಲೇ ನನಗೆ ಅದು “ಬೇಕು” ಎಂಬ ಆಸೆ ಮತ್ತು ಸಿಗಲಿಲ್ಲವೆಂಬ ರೋಷ ಹುಟ್ಟುತ್ತವೆ. ಆಸೆ ರೋಷಗಳಿಂದ ನಾವು ನಮ್ಮ ಸುತ್ತಲವರಿಂದಲೂ ನಮ್ಮ ಕಲ್ಪನೆಯ ದೇವರಿಂದಲೂ ಬೇರೆಯಾಗುತ್ತ ದೂರವಾಗುತ್ತ ಹೋಗುತ್ತೇವೆ.

ಆಸೆಬುರುಕರನ್ನೂ ಕೋಪಿಷ್ಠರನ್ನೂ ನಾವು ದೂರವಿಡಲು ಬಯಸುವುದಿಲ್ಲವೇ? ಹಾಗೆಯೇ ದೇವರು ಕೂಡ ಆಸೆ ರೋಷಗಳು ಇರುವ ವ್ಯಕ್ತಿಗಳನ್ನು ದೂರವಿಡುತ್ತಾನೆ. ಆಸೆ ರೋಷಗಳನ್ನು ನೀಗಿಕೊಂಡಾಗ ವಿಶ್ವದ ಶಕ್ತಿಯೊಡನೆ ಐಕ್ಯ ಸಾಧ್ಯವಾಗುತ್ತದೆ ಎಂಬುದು ಅಲ್ಲಮನ ಮಾತು. ದೇವರನ್ನು ನಿರ್ಗುಣ ಅನ್ನುವುದುಂಟಲ್ಲವೆ? ಯಾಕೆಂದರೆ ದೇವರಿಗೆ ಆಸೆಯೂ ಇರಲಾರದು, ರೋಷವೂ ಇರಲಾರದು. ಇವೆರಡೂ ಗುಣಗಳನ್ನು ಇಲ್ಲವಾಗಿಸಿಕೊಂಡು ನಮ್ಮನ್ನು ನಾವು ಮಗುಗೊಳಿಸಿ ಕೊಂಡರೆ ಅದೇ ದೈವತ್ವ.
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಕಿಶೋರ್‍ ಚಂದ್ರ