ವಚನ ವಿಚಾರ – ಪುರುಷತ್ವ

ವಚನ ವಿಚಾರ – ಪುರುಷತ್ವ

ಆಳುತನದ ಮಾತನೇರಿಸಿ ನುಡಿದಡೆ
ಆಗಳೆ ಕಟ್ಟಿದೆನು ಗಂಡುಗಚ್ಚೆಯ
ತಿಗುರನೇರಿಸಿ ತಿಲಕವನಿಟ್ಟು
ಕೈದುವ ಕೊಂಡು ಕಳನೇರಿದ ಬಳಿಕ
ಕಟ್ಟಿದ ನಿರಿ ಸಡಿಲಿಸಿದಡೆ ಇನ್ನು ನಿಮ್ಮಾಣೆ
ಕಾಣಾ ಚೆನ್ನಮಲ್ಲಿಕಾರ್ಜುನಾ

[ತಿಗುರನೇರಿಸಿ-ಪರಿಮಳ ಲೇಪಿಸಿ, ಕೈದುವ-ಆಯುಧವ, ಕಳ-ಅಖಾಡ]

ಅಕ್ಕ ಮಹಾದೇವಿಯ ವಚನ. ಇಲ್ಲಿ ಆಕೆ ತನ್ನ ಮೇಲೆ ಪುರುಷತ್ವವನ್ನು ಆರೋಪಿಸಿಕೊಂಡಿದ್ದಾಳೆ. ನನ್ನ ಸಾಮರ್ಥ್ಯದ ಬಗ್ಗೆ ಪ್ರಶ್ನಿಸಿದರೆ ಇಗೋ ಗಂಡುಗಚ್ಚೆ ತೊಟ್ಟು, ತಿಗುರನ್ನೇರಿಸಿ(ಪರಿಮಳ? ತಿಲಕ?), ಕೈಯಲ್ಲಿ ಆಯುಧಹಿಡಿದು, ಅಖಾಡ (ಕಳ)ಕ್ಕೆ ಏರಿದೆ, ಇನ್ನು ಕಟ್ಟಿದ ನಿರಿಗೆ ಸಡಲಿಸಿದರೆ ನಿಮ್ಮಾಣೆ ಅನ್ನುತ್ತಾಳೆ.

ಆಧ್ಯಾತ್ಮ ಸಾಧನೆ ಕೇವಲ ಪುರುಷರಿಗೆ ಮಾತ್ರ ಮೀಸಲಾದದ್ದು ಅನ್ನುವ ಧೋರಣೆಗೆ ಪ್ರತಿಕ್ರಿಯೆಯಾಗಿ ಹೀಗೆ ಹೇಳುತ್ತಿದ್ದಾಳೋ ಅಥವಾ ವಚನಗಳಲ್ಲಿ ಸಾಮಾನ್ಯವಾಗಿರುವಂತೆ ಆಧ್ಯಾತ್ಮದ ಸಾಧನೆಯನ್ನು ಪುರುಷರ ದೈವಿಕ ಸಾಮರ್ಥ್ಯ, ಬೇಟೆ, ಹಿಂಸೆಗಳ ಪರಿಭಾಷೆಯನ್ನು ಬಳಸುತ್ತಿದ್ದಾಳೆಯೋ? ಅದು ಹೇಗೇ ಇದ್ದರೂ ಸ್ತ್ರೀ ಸಂವೇದನೆಯ ಉತ್ತುಂಗವೆಂದು ಭಾವಿಸಿರುವ ಅಕ್ಕ ಪುರುಷತ್ವದ ಆರೋಪಣೆಯನ್ನು ಮಾಡಿಕೊಳ್ಳುವುದೂ ಗಜೇಶ ಮಸಣಯ್ಯ, ಉರಿಲಿಂಗದೇವ ತಮ್ಮ ಮೇಲೆ ಸ್ತ್ರೀತ್ವವನ್ನು ಆರೋಪಿಸಿ ಕೊಳ್ಳುವುದೂ ಗಮನಾರ್ಹ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಧರ್ಮ
Next post ಯಾರಿವರು?

ಸಣ್ಣ ಕತೆ

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ಜುಡಾಸ್

    "ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…

cheap jordans|wholesale air max|wholesale jordans|wholesale jewelry|wholesale jerseys