Home / ಲೇಖನ / ಇತರೆ / ವಚನ ವಿಚಾರ – ಇಲ್ಲೇ ಇದ್ದಾರೆ

ವಚನ ವಿಚಾರ – ಇಲ್ಲೇ ಇದ್ದಾರೆ

ಇದಿರೆನ್ನ ಹಳಿವವರು ಮತಿಯ ಬೆಳಗುವರು
ಮನದ ಕಾಳಿಕೆಯ ಕಳೆವವರೆನ್ನ ನಂಟರು
ದುರಾಚಾರದಲ್ಲಿ ನಡೆವವರು ಕನ್ನಡಿ ಎನಗೆ
ಹೇಯೋಪಾದಿಯ ತೋರುವವರು
ಇದು ಕಾರಣ ನಾನನ್ಯ ದೇಶಕ್ಕೆ ಹೋಗೆನು
ಸಕಳೇಶ್ವರದೇವರ ತೋರುವರೊಳರು ಇಲ್ಲಿಯೆ

[ಕಾಳಿಕೆ-ಕಲ್ಮಶ, ತೋರುವರೊಳರು-ತೋರುಬಲ್ಲಸಮರ್ಥರು]

ಸಕಲೇಶಮಾದರಸನ ವಚನ. ಬೇರೆಯ ಊರಿಗೆ ಹೋಗಿ ನೆಲೆಸುವ ಆಸೆಯಾದರೂ ಯಾಕೆ? ಬೇರೆಯ ಜನ, ಬೇರೆಯ ವಾತಾವರಣ, ಬೇರೆಯ ರೀತಿಯ ಬದುಕಿನ ಆಸೆಯಲ್ಲವೇ? ಸಕಲೇಶಮಾದರಸ ಹೇಳುವ ಈ ಮಾತು ಕೇಳಿ. ಎಲ್ಲಿ ಹೋದರೂ ನನ್ನ ಟೀಕಿಸುವವರು, ನಿಂದಿಸುವವರು ಇದ್ದೇ ಇರುತ್ತಾರೆ. ಅವರು ನನ್ನ ಮತಿಯನ್ನು ಬೆಳಗುತ್ತಾರೆ.

ಎಲ್ಲಿ ಹೋದರೂ ನನ್ನ ಆತ್ಮೀಯರಾಗುವ ನಂಟರು ಬೇಕು, ಅವರು ನನ್ನ ಮನಸ್ಸಿನ ಕಲ್ಮಶ (ಕಾಳಿಕೆ)ಯನ್ನು ಕಳೆಯುತ್ತಾರೆ. ಎಲ್ಲಿಗೆ ಹೋದರೂ ದುರಾಚಾರಿಗಳು ಇದ್ದೇ ಇರುತ್ತಾರೆ. ಅವರು ನನ್ನೊಳಗೇ ಇರುವ ಕೆಡುಕಿಗೆ ಕನ್ನಡಿ ಹಿಡಿಯುತ್ತಾರೆ. ಇಲ್ಲಿ ಇರುವ ನಿಂದಕರು, ನೆಂಟರು, ದುಷ್ಟರು ಬೇರೆ ಊರಲ್ಲಿಯೂ ಅವರೇ ಅಲ್ಲವೇ?

ನನ್ನನ್ನು ನನಗೇ ತೋರುವವರು ಇಲ್ಲೇ ಇರುವಾಗ ಅನ್ಯದೇಶಕ್ಕೆ ಹೋಗಲೊಲ್ಲೆ ಎನ್ನುತ್ತಾನೆ ಸಕಳೇಶ ಮಾದರಸ. ಎಲ್ಲಿದ್ದೇವೆ ಅನ್ನುವುದಕ್ಕಿಂತ ನಾವು ಇರುವಲ್ಲಿ ಎಂಥ ಸಂಬಂಧಗಳನ್ನು ಕಟ್ಟಿಕೊಂಡಿದ್ದೇವೆ, ಆ ಸಂಬಂಧಗಳಿಂದ ನಮ್ಮನ್ನು ನಾವು ಹೇಗೆ ಅರಿಯುತ್ತೇವೆ ಅನ್ನುವುದು ಮುಖ್ಯವಲ್ಲವೇ?
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...