Home / ಲೇಖನ / ಇತರೆ / ವಚನ ವಿಚಾರ – ಇಲ್ಲೇ ಇದ್ದಾರೆ

ವಚನ ವಿಚಾರ – ಇಲ್ಲೇ ಇದ್ದಾರೆ

ಇದಿರೆನ್ನ ಹಳಿವವರು ಮತಿಯ ಬೆಳಗುವರು
ಮನದ ಕಾಳಿಕೆಯ ಕಳೆವವರೆನ್ನ ನಂಟರು
ದುರಾಚಾರದಲ್ಲಿ ನಡೆವವರು ಕನ್ನಡಿ ಎನಗೆ
ಹೇಯೋಪಾದಿಯ ತೋರುವವರು
ಇದು ಕಾರಣ ನಾನನ್ಯ ದೇಶಕ್ಕೆ ಹೋಗೆನು
ಸಕಳೇಶ್ವರದೇವರ ತೋರುವರೊಳರು ಇಲ್ಲಿಯೆ

[ಕಾಳಿಕೆ-ಕಲ್ಮಶ, ತೋರುವರೊಳರು-ತೋರುಬಲ್ಲಸಮರ್ಥರು]

ಸಕಲೇಶಮಾದರಸನ ವಚನ. ಬೇರೆಯ ಊರಿಗೆ ಹೋಗಿ ನೆಲೆಸುವ ಆಸೆಯಾದರೂ ಯಾಕೆ? ಬೇರೆಯ ಜನ, ಬೇರೆಯ ವಾತಾವರಣ, ಬೇರೆಯ ರೀತಿಯ ಬದುಕಿನ ಆಸೆಯಲ್ಲವೇ? ಸಕಲೇಶಮಾದರಸ ಹೇಳುವ ಈ ಮಾತು ಕೇಳಿ. ಎಲ್ಲಿ ಹೋದರೂ ನನ್ನ ಟೀಕಿಸುವವರು, ನಿಂದಿಸುವವರು ಇದ್ದೇ ಇರುತ್ತಾರೆ. ಅವರು ನನ್ನ ಮತಿಯನ್ನು ಬೆಳಗುತ್ತಾರೆ.

ಎಲ್ಲಿ ಹೋದರೂ ನನ್ನ ಆತ್ಮೀಯರಾಗುವ ನಂಟರು ಬೇಕು, ಅವರು ನನ್ನ ಮನಸ್ಸಿನ ಕಲ್ಮಶ (ಕಾಳಿಕೆ)ಯನ್ನು ಕಳೆಯುತ್ತಾರೆ. ಎಲ್ಲಿಗೆ ಹೋದರೂ ದುರಾಚಾರಿಗಳು ಇದ್ದೇ ಇರುತ್ತಾರೆ. ಅವರು ನನ್ನೊಳಗೇ ಇರುವ ಕೆಡುಕಿಗೆ ಕನ್ನಡಿ ಹಿಡಿಯುತ್ತಾರೆ. ಇಲ್ಲಿ ಇರುವ ನಿಂದಕರು, ನೆಂಟರು, ದುಷ್ಟರು ಬೇರೆ ಊರಲ್ಲಿಯೂ ಅವರೇ ಅಲ್ಲವೇ?

ನನ್ನನ್ನು ನನಗೇ ತೋರುವವರು ಇಲ್ಲೇ ಇರುವಾಗ ಅನ್ಯದೇಶಕ್ಕೆ ಹೋಗಲೊಲ್ಲೆ ಎನ್ನುತ್ತಾನೆ ಸಕಳೇಶ ಮಾದರಸ. ಎಲ್ಲಿದ್ದೇವೆ ಅನ್ನುವುದಕ್ಕಿಂತ ನಾವು ಇರುವಲ್ಲಿ ಎಂಥ ಸಂಬಂಧಗಳನ್ನು ಕಟ್ಟಿಕೊಂಡಿದ್ದೇವೆ, ಆ ಸಂಬಂಧಗಳಿಂದ ನಮ್ಮನ್ನು ನಾವು ಹೇಗೆ ಅರಿಯುತ್ತೇವೆ ಅನ್ನುವುದು ಮುಖ್ಯವಲ್ಲವೇ?
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...