Home / ಲೇಖನ / ಇತರೆ / ವಚನ ವಿಚಾರ – ಇಲ್ಲೇ ಇದ್ದಾರೆ

ವಚನ ವಿಚಾರ – ಇಲ್ಲೇ ಇದ್ದಾರೆ

ಇದಿರೆನ್ನ ಹಳಿವವರು ಮತಿಯ ಬೆಳಗುವರು
ಮನದ ಕಾಳಿಕೆಯ ಕಳೆವವರೆನ್ನ ನಂಟರು
ದುರಾಚಾರದಲ್ಲಿ ನಡೆವವರು ಕನ್ನಡಿ ಎನಗೆ
ಹೇಯೋಪಾದಿಯ ತೋರುವವರು
ಇದು ಕಾರಣ ನಾನನ್ಯ ದೇಶಕ್ಕೆ ಹೋಗೆನು
ಸಕಳೇಶ್ವರದೇವರ ತೋರುವರೊಳರು ಇಲ್ಲಿಯೆ

[ಕಾಳಿಕೆ-ಕಲ್ಮಶ, ತೋರುವರೊಳರು-ತೋರುಬಲ್ಲಸಮರ್ಥರು]

ಸಕಲೇಶಮಾದರಸನ ವಚನ. ಬೇರೆಯ ಊರಿಗೆ ಹೋಗಿ ನೆಲೆಸುವ ಆಸೆಯಾದರೂ ಯಾಕೆ? ಬೇರೆಯ ಜನ, ಬೇರೆಯ ವಾತಾವರಣ, ಬೇರೆಯ ರೀತಿಯ ಬದುಕಿನ ಆಸೆಯಲ್ಲವೇ? ಸಕಲೇಶಮಾದರಸ ಹೇಳುವ ಈ ಮಾತು ಕೇಳಿ. ಎಲ್ಲಿ ಹೋದರೂ ನನ್ನ ಟೀಕಿಸುವವರು, ನಿಂದಿಸುವವರು ಇದ್ದೇ ಇರುತ್ತಾರೆ. ಅವರು ನನ್ನ ಮತಿಯನ್ನು ಬೆಳಗುತ್ತಾರೆ.

ಎಲ್ಲಿ ಹೋದರೂ ನನ್ನ ಆತ್ಮೀಯರಾಗುವ ನಂಟರು ಬೇಕು, ಅವರು ನನ್ನ ಮನಸ್ಸಿನ ಕಲ್ಮಶ (ಕಾಳಿಕೆ)ಯನ್ನು ಕಳೆಯುತ್ತಾರೆ. ಎಲ್ಲಿಗೆ ಹೋದರೂ ದುರಾಚಾರಿಗಳು ಇದ್ದೇ ಇರುತ್ತಾರೆ. ಅವರು ನನ್ನೊಳಗೇ ಇರುವ ಕೆಡುಕಿಗೆ ಕನ್ನಡಿ ಹಿಡಿಯುತ್ತಾರೆ. ಇಲ್ಲಿ ಇರುವ ನಿಂದಕರು, ನೆಂಟರು, ದುಷ್ಟರು ಬೇರೆ ಊರಲ್ಲಿಯೂ ಅವರೇ ಅಲ್ಲವೇ?

ನನ್ನನ್ನು ನನಗೇ ತೋರುವವರು ಇಲ್ಲೇ ಇರುವಾಗ ಅನ್ಯದೇಶಕ್ಕೆ ಹೋಗಲೊಲ್ಲೆ ಎನ್ನುತ್ತಾನೆ ಸಕಳೇಶ ಮಾದರಸ. ಎಲ್ಲಿದ್ದೇವೆ ಅನ್ನುವುದಕ್ಕಿಂತ ನಾವು ಇರುವಲ್ಲಿ ಎಂಥ ಸಂಬಂಧಗಳನ್ನು ಕಟ್ಟಿಕೊಂಡಿದ್ದೇವೆ, ಆ ಸಂಬಂಧಗಳಿಂದ ನಮ್ಮನ್ನು ನಾವು ಹೇಗೆ ಅರಿಯುತ್ತೇವೆ ಅನ್ನುವುದು ಮುಖ್ಯವಲ್ಲವೇ?
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...