ವಚನ ವಿಚಾರ – ಇಲ್ಲೇ ಇದ್ದಾರೆ

ವಚನ ವಿಚಾರ – ಇಲ್ಲೇ ಇದ್ದಾರೆ

ಇದಿರೆನ್ನ ಹಳಿವವರು ಮತಿಯ ಬೆಳಗುವರು
ಮನದ ಕಾಳಿಕೆಯ ಕಳೆವವರೆನ್ನ ನಂಟರು
ದುರಾಚಾರದಲ್ಲಿ ನಡೆವವರು ಕನ್ನಡಿ ಎನಗೆ
ಹೇಯೋಪಾದಿಯ ತೋರುವವರು
ಇದು ಕಾರಣ ನಾನನ್ಯ ದೇಶಕ್ಕೆ ಹೋಗೆನು
ಸಕಳೇಶ್ವರದೇವರ ತೋರುವರೊಳರು ಇಲ್ಲಿಯೆ

[ಕಾಳಿಕೆ-ಕಲ್ಮಶ, ತೋರುವರೊಳರು-ತೋರುಬಲ್ಲಸಮರ್ಥರು]

ಸಕಲೇಶಮಾದರಸನ ವಚನ. ಬೇರೆಯ ಊರಿಗೆ ಹೋಗಿ ನೆಲೆಸುವ ಆಸೆಯಾದರೂ ಯಾಕೆ? ಬೇರೆಯ ಜನ, ಬೇರೆಯ ವಾತಾವರಣ, ಬೇರೆಯ ರೀತಿಯ ಬದುಕಿನ ಆಸೆಯಲ್ಲವೇ? ಸಕಲೇಶಮಾದರಸ ಹೇಳುವ ಈ ಮಾತು ಕೇಳಿ. ಎಲ್ಲಿ ಹೋದರೂ ನನ್ನ ಟೀಕಿಸುವವರು, ನಿಂದಿಸುವವರು ಇದ್ದೇ ಇರುತ್ತಾರೆ. ಅವರು ನನ್ನ ಮತಿಯನ್ನು ಬೆಳಗುತ್ತಾರೆ.

ಎಲ್ಲಿ ಹೋದರೂ ನನ್ನ ಆತ್ಮೀಯರಾಗುವ ನಂಟರು ಬೇಕು, ಅವರು ನನ್ನ ಮನಸ್ಸಿನ ಕಲ್ಮಶ (ಕಾಳಿಕೆ)ಯನ್ನು ಕಳೆಯುತ್ತಾರೆ. ಎಲ್ಲಿಗೆ ಹೋದರೂ ದುರಾಚಾರಿಗಳು ಇದ್ದೇ ಇರುತ್ತಾರೆ. ಅವರು ನನ್ನೊಳಗೇ ಇರುವ ಕೆಡುಕಿಗೆ ಕನ್ನಡಿ ಹಿಡಿಯುತ್ತಾರೆ. ಇಲ್ಲಿ ಇರುವ ನಿಂದಕರು, ನೆಂಟರು, ದುಷ್ಟರು ಬೇರೆ ಊರಲ್ಲಿಯೂ ಅವರೇ ಅಲ್ಲವೇ?

ನನ್ನನ್ನು ನನಗೇ ತೋರುವವರು ಇಲ್ಲೇ ಇರುವಾಗ ಅನ್ಯದೇಶಕ್ಕೆ ಹೋಗಲೊಲ್ಲೆ ಎನ್ನುತ್ತಾನೆ ಸಕಳೇಶ ಮಾದರಸ. ಎಲ್ಲಿದ್ದೇವೆ ಅನ್ನುವುದಕ್ಕಿಂತ ನಾವು ಇರುವಲ್ಲಿ ಎಂಥ ಸಂಬಂಧಗಳನ್ನು ಕಟ್ಟಿಕೊಂಡಿದ್ದೇವೆ, ಆ ಸಂಬಂಧಗಳಿಂದ ನಮ್ಮನ್ನು ನಾವು ಹೇಗೆ ಅರಿಯುತ್ತೇವೆ ಅನ್ನುವುದು ಮುಖ್ಯವಲ್ಲವೇ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಣ್ಣು ಮುಚ್ಚಾಟ!
Next post ಉಪದೇಶ

ಸಣ್ಣ ಕತೆ

  • ಮಿಂಚು

    "ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…

  • ಮಲ್ಲೇಶಿಯ ನಲ್ಲೆಯರು

    ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…

  • ಅವಳೇ ಅವಳು

    ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

cheap jordans|wholesale air max|wholesale jordans|wholesale jewelry|wholesale jerseys