Home / ಲೇಖನ / ಇತರೆ / ವಚನ ವಿಚಾರ – ಇಲ್ಲೇ ಇದ್ದಾರೆ

ವಚನ ವಿಚಾರ – ಇಲ್ಲೇ ಇದ್ದಾರೆ

ಇದಿರೆನ್ನ ಹಳಿವವರು ಮತಿಯ ಬೆಳಗುವರು
ಮನದ ಕಾಳಿಕೆಯ ಕಳೆವವರೆನ್ನ ನಂಟರು
ದುರಾಚಾರದಲ್ಲಿ ನಡೆವವರು ಕನ್ನಡಿ ಎನಗೆ
ಹೇಯೋಪಾದಿಯ ತೋರುವವರು
ಇದು ಕಾರಣ ನಾನನ್ಯ ದೇಶಕ್ಕೆ ಹೋಗೆನು
ಸಕಳೇಶ್ವರದೇವರ ತೋರುವರೊಳರು ಇಲ್ಲಿಯೆ

[ಕಾಳಿಕೆ-ಕಲ್ಮಶ, ತೋರುವರೊಳರು-ತೋರುಬಲ್ಲಸಮರ್ಥರು]

ಸಕಲೇಶಮಾದರಸನ ವಚನ. ಬೇರೆಯ ಊರಿಗೆ ಹೋಗಿ ನೆಲೆಸುವ ಆಸೆಯಾದರೂ ಯಾಕೆ? ಬೇರೆಯ ಜನ, ಬೇರೆಯ ವಾತಾವರಣ, ಬೇರೆಯ ರೀತಿಯ ಬದುಕಿನ ಆಸೆಯಲ್ಲವೇ? ಸಕಲೇಶಮಾದರಸ ಹೇಳುವ ಈ ಮಾತು ಕೇಳಿ. ಎಲ್ಲಿ ಹೋದರೂ ನನ್ನ ಟೀಕಿಸುವವರು, ನಿಂದಿಸುವವರು ಇದ್ದೇ ಇರುತ್ತಾರೆ. ಅವರು ನನ್ನ ಮತಿಯನ್ನು ಬೆಳಗುತ್ತಾರೆ.

ಎಲ್ಲಿ ಹೋದರೂ ನನ್ನ ಆತ್ಮೀಯರಾಗುವ ನಂಟರು ಬೇಕು, ಅವರು ನನ್ನ ಮನಸ್ಸಿನ ಕಲ್ಮಶ (ಕಾಳಿಕೆ)ಯನ್ನು ಕಳೆಯುತ್ತಾರೆ. ಎಲ್ಲಿಗೆ ಹೋದರೂ ದುರಾಚಾರಿಗಳು ಇದ್ದೇ ಇರುತ್ತಾರೆ. ಅವರು ನನ್ನೊಳಗೇ ಇರುವ ಕೆಡುಕಿಗೆ ಕನ್ನಡಿ ಹಿಡಿಯುತ್ತಾರೆ. ಇಲ್ಲಿ ಇರುವ ನಿಂದಕರು, ನೆಂಟರು, ದುಷ್ಟರು ಬೇರೆ ಊರಲ್ಲಿಯೂ ಅವರೇ ಅಲ್ಲವೇ?

ನನ್ನನ್ನು ನನಗೇ ತೋರುವವರು ಇಲ್ಲೇ ಇರುವಾಗ ಅನ್ಯದೇಶಕ್ಕೆ ಹೋಗಲೊಲ್ಲೆ ಎನ್ನುತ್ತಾನೆ ಸಕಳೇಶ ಮಾದರಸ. ಎಲ್ಲಿದ್ದೇವೆ ಅನ್ನುವುದಕ್ಕಿಂತ ನಾವು ಇರುವಲ್ಲಿ ಎಂಥ ಸಂಬಂಧಗಳನ್ನು ಕಟ್ಟಿಕೊಂಡಿದ್ದೇವೆ, ಆ ಸಂಬಂಧಗಳಿಂದ ನಮ್ಮನ್ನು ನಾವು ಹೇಗೆ ಅರಿಯುತ್ತೇವೆ ಅನ್ನುವುದು ಮುಖ್ಯವಲ್ಲವೇ?
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಕಿಶೋರ್‍ ಚಂದ್ರ