Home / ಲೇಖನ / ಇತರೆ / ವಚನ ವಿಚಾರ – ಇನಿಯನಿಗೆ ತವಕವಿಲ್ಲ

ವಚನ ವಿಚಾರ – ಇನಿಯನಿಗೆ ತವಕವಿಲ್ಲ

ಇನಿಯಂಗೆ ತವಕವಿಲ್ಲ
ಎನಗೆ ಸೈರಣೆಯಿಲ್ಲ
ಮನದಿಚ್ಛೆಯನರಿವ ಸಖಿಯರಿಲ್ಲ
ಇನ್ನೇವೆನವ್ವಾ
ಮನುಮಥವೈರಿಯ ಅನುಭಾವದಲ್ಲಿ ಎನ್ನ ಮನ ಸಿಲುಕಿ ಬಿಡದು
ಇನ್ನೇನ ಮಾಡುವೆನೆಲೆ ಕರುಣವಿಲ್ಲದ ತಾಯೆ
ದಿನ ವೃಥಾ ಹೋಯಿತ್ತಾಗಿ ಯೌವನ ಬೀಸರವಾಗದ ಮುನ್ನ
ಪಿನಾಕಿಯ ನೆರಹವ್ವಾ ಶಂಭುಜಕ್ಕೇಶ್ವರನ

[ಬೀಸರವಾಗದ ಮುನ್ನ-ವ್ಯರ್ಥವಾಗುವ ಮುನ್ನ]

ಸತ್ಯಕ್ಕನ ವಚನ. ಭಕ್ತಿ ಪ್ರೀತಿಗಳೆರಡೂ ತೀವ್ರವಾಗಿ ಬೆರೆತ ಮಾತು ಇಲ್ಲಿದೆ.
ನನ್ನ ಪ್ರೇಮಿಗೆ ನನ್ನ ಕೂಡಬೇಕೆಂಬ ತವಕ ಇಲ್ಲ, ನನಗೆ ಕಾಯುವ ಸಹನೆ ಇಲ್ಲ, ನನ್ನ ಮನಸ್ಸನ್ನು ತಿಳಿಯುವ ಗೆಳತಿಯರೂ ಇಲ್ಲ. ಏನು ಮಾಡಲಿ, ಸಹಿಸಲಾರೆ, ಅಮ್ಮಾ ನನ್ನ ಮನಸ್ಸು ಮನ್ಮಥವೈರಿಯ ಅನುಭಾವದಲ್ಲಿ ಸಿಕ್ಕಿಕೊಂಡಿದೆ, ನೀನೂ ಕರುಣೆ ಇಲ್ಲದ ತಾಯಿ, ನನ್ನ ದಿನಗಳು ವೃಥಾ ಕಳೆದು ಹೋಗುತ್ತ ನನ್ನ ಯೌವನ ವ್ಯರ್ಥವಾಗುವ ಮೊದಲು ಶಂಭುಜಕ್ಕೇಶ್ವರನೊಡನೆ ನನ್ನನ್ನು ಕೂಡಿಸು.

ಪ್ರೇಮಿಯ ವೈಚಿತ್ರ (ಅವನು ಮನ್ಮಥವೈರಿಯಾದ್ದರಿಂದಲೇ ಅವನಿಗೆ ತವಕವಿಲ್ಲ), ಸಮವಯಸ್ಕ ಗೆಳೆತಿಯರಿಲ್ಲದ ಒಂಟಿತನದ ಭಾರ, ತಾಯಿಯೊಡನೆ ಹೇಳಬಾರದ ಮಾತಾದರೂ ಅವಳಲ್ಲದೆ ಬೇರೆ ಗತಿ ಇಲ್ಲ ಎಂಬ ಅಸಹಾಯಕತೆ, ಶಂಭುಜಕ್ಕೇಶ್ವರನೊಡನೆ ನನ್ನ ಕೂಡಿಸು ಎಂದು ಮಗಳಾಗಿ ಸಂಕೋಚಬಿಟ್ಟು ಕೇಳಲೇಬೇಕೆಂಬ ಭಾವದ ಒತ್ತಡ ಇವೆಲ್ಲ ತೀವ್ರವಾದ ಕಾವ್ಯರೂಪದಲ್ಲಿ ವ್ಯಕ್ತವಾಗಿವೆ.
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...