Home / ಲೇಖನ / ಇತರೆ / ವಚನ ವಿಚಾರ – ಇನಿಯನಿಗೆ ತವಕವಿಲ್ಲ

ವಚನ ವಿಚಾರ – ಇನಿಯನಿಗೆ ತವಕವಿಲ್ಲ

ಇನಿಯಂಗೆ ತವಕವಿಲ್ಲ
ಎನಗೆ ಸೈರಣೆಯಿಲ್ಲ
ಮನದಿಚ್ಛೆಯನರಿವ ಸಖಿಯರಿಲ್ಲ
ಇನ್ನೇವೆನವ್ವಾ
ಮನುಮಥವೈರಿಯ ಅನುಭಾವದಲ್ಲಿ ಎನ್ನ ಮನ ಸಿಲುಕಿ ಬಿಡದು
ಇನ್ನೇನ ಮಾಡುವೆನೆಲೆ ಕರುಣವಿಲ್ಲದ ತಾಯೆ
ದಿನ ವೃಥಾ ಹೋಯಿತ್ತಾಗಿ ಯೌವನ ಬೀಸರವಾಗದ ಮುನ್ನ
ಪಿನಾಕಿಯ ನೆರಹವ್ವಾ ಶಂಭುಜಕ್ಕೇಶ್ವರನ

[ಬೀಸರವಾಗದ ಮುನ್ನ-ವ್ಯರ್ಥವಾಗುವ ಮುನ್ನ]

ಸತ್ಯಕ್ಕನ ವಚನ. ಭಕ್ತಿ ಪ್ರೀತಿಗಳೆರಡೂ ತೀವ್ರವಾಗಿ ಬೆರೆತ ಮಾತು ಇಲ್ಲಿದೆ.
ನನ್ನ ಪ್ರೇಮಿಗೆ ನನ್ನ ಕೂಡಬೇಕೆಂಬ ತವಕ ಇಲ್ಲ, ನನಗೆ ಕಾಯುವ ಸಹನೆ ಇಲ್ಲ, ನನ್ನ ಮನಸ್ಸನ್ನು ತಿಳಿಯುವ ಗೆಳತಿಯರೂ ಇಲ್ಲ. ಏನು ಮಾಡಲಿ, ಸಹಿಸಲಾರೆ, ಅಮ್ಮಾ ನನ್ನ ಮನಸ್ಸು ಮನ್ಮಥವೈರಿಯ ಅನುಭಾವದಲ್ಲಿ ಸಿಕ್ಕಿಕೊಂಡಿದೆ, ನೀನೂ ಕರುಣೆ ಇಲ್ಲದ ತಾಯಿ, ನನ್ನ ದಿನಗಳು ವೃಥಾ ಕಳೆದು ಹೋಗುತ್ತ ನನ್ನ ಯೌವನ ವ್ಯರ್ಥವಾಗುವ ಮೊದಲು ಶಂಭುಜಕ್ಕೇಶ್ವರನೊಡನೆ ನನ್ನನ್ನು ಕೂಡಿಸು.

ಪ್ರೇಮಿಯ ವೈಚಿತ್ರ (ಅವನು ಮನ್ಮಥವೈರಿಯಾದ್ದರಿಂದಲೇ ಅವನಿಗೆ ತವಕವಿಲ್ಲ), ಸಮವಯಸ್ಕ ಗೆಳೆತಿಯರಿಲ್ಲದ ಒಂಟಿತನದ ಭಾರ, ತಾಯಿಯೊಡನೆ ಹೇಳಬಾರದ ಮಾತಾದರೂ ಅವಳಲ್ಲದೆ ಬೇರೆ ಗತಿ ಇಲ್ಲ ಎಂಬ ಅಸಹಾಯಕತೆ, ಶಂಭುಜಕ್ಕೇಶ್ವರನೊಡನೆ ನನ್ನ ಕೂಡಿಸು ಎಂದು ಮಗಳಾಗಿ ಸಂಕೋಚಬಿಟ್ಟು ಕೇಳಲೇಬೇಕೆಂಬ ಭಾವದ ಒತ್ತಡ ಇವೆಲ್ಲ ತೀವ್ರವಾದ ಕಾವ್ಯರೂಪದಲ್ಲಿ ವ್ಯಕ್ತವಾಗಿವೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...