Home / ಲೇಖನ / ಇತರೆ / ವಚನ ವಿಚಾರ – ಇನಿಯನಿಗೆ ತವಕವಿಲ್ಲ

ವಚನ ವಿಚಾರ – ಇನಿಯನಿಗೆ ತವಕವಿಲ್ಲ

ಇನಿಯಂಗೆ ತವಕವಿಲ್ಲ
ಎನಗೆ ಸೈರಣೆಯಿಲ್ಲ
ಮನದಿಚ್ಛೆಯನರಿವ ಸಖಿಯರಿಲ್ಲ
ಇನ್ನೇವೆನವ್ವಾ
ಮನುಮಥವೈರಿಯ ಅನುಭಾವದಲ್ಲಿ ಎನ್ನ ಮನ ಸಿಲುಕಿ ಬಿಡದು
ಇನ್ನೇನ ಮಾಡುವೆನೆಲೆ ಕರುಣವಿಲ್ಲದ ತಾಯೆ
ದಿನ ವೃಥಾ ಹೋಯಿತ್ತಾಗಿ ಯೌವನ ಬೀಸರವಾಗದ ಮುನ್ನ
ಪಿನಾಕಿಯ ನೆರಹವ್ವಾ ಶಂಭುಜಕ್ಕೇಶ್ವರನ

[ಬೀಸರವಾಗದ ಮುನ್ನ-ವ್ಯರ್ಥವಾಗುವ ಮುನ್ನ]

ಸತ್ಯಕ್ಕನ ವಚನ. ಭಕ್ತಿ ಪ್ರೀತಿಗಳೆರಡೂ ತೀವ್ರವಾಗಿ ಬೆರೆತ ಮಾತು ಇಲ್ಲಿದೆ.
ನನ್ನ ಪ್ರೇಮಿಗೆ ನನ್ನ ಕೂಡಬೇಕೆಂಬ ತವಕ ಇಲ್ಲ, ನನಗೆ ಕಾಯುವ ಸಹನೆ ಇಲ್ಲ, ನನ್ನ ಮನಸ್ಸನ್ನು ತಿಳಿಯುವ ಗೆಳತಿಯರೂ ಇಲ್ಲ. ಏನು ಮಾಡಲಿ, ಸಹಿಸಲಾರೆ, ಅಮ್ಮಾ ನನ್ನ ಮನಸ್ಸು ಮನ್ಮಥವೈರಿಯ ಅನುಭಾವದಲ್ಲಿ ಸಿಕ್ಕಿಕೊಂಡಿದೆ, ನೀನೂ ಕರುಣೆ ಇಲ್ಲದ ತಾಯಿ, ನನ್ನ ದಿನಗಳು ವೃಥಾ ಕಳೆದು ಹೋಗುತ್ತ ನನ್ನ ಯೌವನ ವ್ಯರ್ಥವಾಗುವ ಮೊದಲು ಶಂಭುಜಕ್ಕೇಶ್ವರನೊಡನೆ ನನ್ನನ್ನು ಕೂಡಿಸು.

ಪ್ರೇಮಿಯ ವೈಚಿತ್ರ (ಅವನು ಮನ್ಮಥವೈರಿಯಾದ್ದರಿಂದಲೇ ಅವನಿಗೆ ತವಕವಿಲ್ಲ), ಸಮವಯಸ್ಕ ಗೆಳೆತಿಯರಿಲ್ಲದ ಒಂಟಿತನದ ಭಾರ, ತಾಯಿಯೊಡನೆ ಹೇಳಬಾರದ ಮಾತಾದರೂ ಅವಳಲ್ಲದೆ ಬೇರೆ ಗತಿ ಇಲ್ಲ ಎಂಬ ಅಸಹಾಯಕತೆ, ಶಂಭುಜಕ್ಕೇಶ್ವರನೊಡನೆ ನನ್ನ ಕೂಡಿಸು ಎಂದು ಮಗಳಾಗಿ ಸಂಕೋಚಬಿಟ್ಟು ಕೇಳಲೇಬೇಕೆಂಬ ಭಾವದ ಒತ್ತಡ ಇವೆಲ್ಲ ತೀವ್ರವಾದ ಕಾವ್ಯರೂಪದಲ್ಲಿ ವ್ಯಕ್ತವಾಗಿವೆ.
*****

Tagged:

Leave a Reply

Your email address will not be published. Required fields are marked *

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...

ಕಾಲ ಹನ್ನೆರಡನೆ ಶತಮಾನ. ದೇಶ ಜಪಾನ್. ಅರಸನ ಹೆಸರು ಅಂತೋಕು. ವಯಸ್ಸು ಕೇವಲ ಏಳು ಸಂವತ್ಸರಗಳು. ಅಂತೋಕು ಹೈಕೆ ಎಂಬ ಸಾಮುರಾಯ ದಳದ ನಾಮ ಮಾತ್ರ ಮುಂದಾಳುವಾಗಿದ್ದು ನಿಜವಾದ ಅಧಿಕಾರ ಇವನ ಅಜ್ಜಮ್ಮನ ಕೈಯಲ್ಲಿತ್ತು. ಅಜ್ಜಮ್ಮನ ಹೆಸರು ನೀ ಎಂದು. ನೀಯ ಜವಾಬ್ದಾರಿ ಗುರುತರವಾಗಿತ್ತು ಎಂದು...

ಶೇಖರನಿಗೆ ಇನ್ನೂ ಎರಡು ದಿನಗಳ ‘ವಾರ’ ಕಡಿಮೆ ಬಿದ್ದಿತ್ತು. ಎಲ್ಲಿಯೂ ಹುಟ್ಟುವಂತೆ ತೋರಲಿಲ್ಲ. ಶ್ರೀಮಾನ್ ಪದ್ಮನಾಭ ಹೆಬ್ಬಾರರ ಮನೆಯಲ್ಲಿ ಕೇಳಬೇಕೆಂದು ನಾಲ್ಕಾರು ಸಲ ಯೋಚಿಸಿದ. ಆದರೆ ಅವರು ಭಿಕ್ಷುಕರನ್ನೂ, ವರ್ಗಣಿ ಕೇಳುವವರನ್ನೂ ವಾರದ ಮಾಣಿಗಳನ್ನೂ ಅಂಗಳಕ್ಕೂ ಬರಗೊ...

ಸರ್‍ಕಸ್ಸು ಮುಗಿದರೂ ಅವನು ಅಲ್ಲಿಯೇ ಕುಳಿತಿದ್ದ. ಎಲ್ಲಾ ಎದ್ದು ಹೋಗಿದ್ದರು. ಎರಡನೇ ಷೋ ಆರಂಭವಾಗಲು ಕೆಲವೇ ಸಮಯ ಉಳಿದಿತ್ತು. ಅವನ ಕಣ್ಣುಗಳು ಏನನ್ನೋ ಹುಡುಕುತ್ತಿದ್ದವು. ಆ ಸರ್‍ಕಸ್ಸಿನ ಹುಡುಗಿ ಪ್ರವೇಶಿಸಿ ಓಡಿ ಬಂದು ಎರಡು ಬಾರಿ ಲಾಗಾ ಹಾಕಿ ಇವನ ಮುಂದೆಯೇ ನಿಂತಂತಾಯಿತು. ಆಕೆಯ...

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...