Home / ಲೇಖನ / ಇತರೆ / ವಚನ ವಿಚಾರ – ಇನಿಯನಿಗೆ ತವಕವಿಲ್ಲ

ವಚನ ವಿಚಾರ – ಇನಿಯನಿಗೆ ತವಕವಿಲ್ಲ

ಇನಿಯಂಗೆ ತವಕವಿಲ್ಲ
ಎನಗೆ ಸೈರಣೆಯಿಲ್ಲ
ಮನದಿಚ್ಛೆಯನರಿವ ಸಖಿಯರಿಲ್ಲ
ಇನ್ನೇವೆನವ್ವಾ
ಮನುಮಥವೈರಿಯ ಅನುಭಾವದಲ್ಲಿ ಎನ್ನ ಮನ ಸಿಲುಕಿ ಬಿಡದು
ಇನ್ನೇನ ಮಾಡುವೆನೆಲೆ ಕರುಣವಿಲ್ಲದ ತಾಯೆ
ದಿನ ವೃಥಾ ಹೋಯಿತ್ತಾಗಿ ಯೌವನ ಬೀಸರವಾಗದ ಮುನ್ನ
ಪಿನಾಕಿಯ ನೆರಹವ್ವಾ ಶಂಭುಜಕ್ಕೇಶ್ವರನ

[ಬೀಸರವಾಗದ ಮುನ್ನ-ವ್ಯರ್ಥವಾಗುವ ಮುನ್ನ]

ಸತ್ಯಕ್ಕನ ವಚನ. ಭಕ್ತಿ ಪ್ರೀತಿಗಳೆರಡೂ ತೀವ್ರವಾಗಿ ಬೆರೆತ ಮಾತು ಇಲ್ಲಿದೆ.
ನನ್ನ ಪ್ರೇಮಿಗೆ ನನ್ನ ಕೂಡಬೇಕೆಂಬ ತವಕ ಇಲ್ಲ, ನನಗೆ ಕಾಯುವ ಸಹನೆ ಇಲ್ಲ, ನನ್ನ ಮನಸ್ಸನ್ನು ತಿಳಿಯುವ ಗೆಳತಿಯರೂ ಇಲ್ಲ. ಏನು ಮಾಡಲಿ, ಸಹಿಸಲಾರೆ, ಅಮ್ಮಾ ನನ್ನ ಮನಸ್ಸು ಮನ್ಮಥವೈರಿಯ ಅನುಭಾವದಲ್ಲಿ ಸಿಕ್ಕಿಕೊಂಡಿದೆ, ನೀನೂ ಕರುಣೆ ಇಲ್ಲದ ತಾಯಿ, ನನ್ನ ದಿನಗಳು ವೃಥಾ ಕಳೆದು ಹೋಗುತ್ತ ನನ್ನ ಯೌವನ ವ್ಯರ್ಥವಾಗುವ ಮೊದಲು ಶಂಭುಜಕ್ಕೇಶ್ವರನೊಡನೆ ನನ್ನನ್ನು ಕೂಡಿಸು.

ಪ್ರೇಮಿಯ ವೈಚಿತ್ರ (ಅವನು ಮನ್ಮಥವೈರಿಯಾದ್ದರಿಂದಲೇ ಅವನಿಗೆ ತವಕವಿಲ್ಲ), ಸಮವಯಸ್ಕ ಗೆಳೆತಿಯರಿಲ್ಲದ ಒಂಟಿತನದ ಭಾರ, ತಾಯಿಯೊಡನೆ ಹೇಳಬಾರದ ಮಾತಾದರೂ ಅವಳಲ್ಲದೆ ಬೇರೆ ಗತಿ ಇಲ್ಲ ಎಂಬ ಅಸಹಾಯಕತೆ, ಶಂಭುಜಕ್ಕೇಶ್ವರನೊಡನೆ ನನ್ನ ಕೂಡಿಸು ಎಂದು ಮಗಳಾಗಿ ಸಂಕೋಚಬಿಟ್ಟು ಕೇಳಲೇಬೇಕೆಂಬ ಭಾವದ ಒತ್ತಡ ಇವೆಲ್ಲ ತೀವ್ರವಾದ ಕಾವ್ಯರೂಪದಲ್ಲಿ ವ್ಯಕ್ತವಾಗಿವೆ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...