Home / ಲೇಖನ / ಇತರೆ / ವಚನ ವಿಚಾರ – ಮನಸ್ಸು ಕೋತಿ

ವಚನ ವಿಚಾರ – ಮನಸ್ಸು ಕೋತಿ

ಇನ್ನೇವೆನಿನ್ನೇವೆನಯ್ಯಾ
ಎನ್ನ ಮನವೆಂಬ ಮರ್ಕಟನ ದಾಳಿ ಘನವಾಯಿತ್ತು
ಎನ್ನ ನಿಂದಲ್ಲಿ ನಿಲಲೀಯದು
ಕ್ಷಣದಲ್ಲಿ ಪಾತಾಳಕ್ಕೆ ಐದುತ್ತಿದೆ
ಕ್ಷಣದಲ್ಲಿ ಆಕಾಶಕ್ಕೆ ಐದುತ್ತಿದೆ
ಕ್ಷಣದಲ್ಲಿ ದಿಗ್ದೆಸೆಗೆ ಐದುತ್ತಿದೆ
ಕೂಡಲಸಂಗಮದೇವಾ

ಈ ಮನವೆಂಬ ಮರ್ಕಟನ ದಾಳಿಯನೆಂದಿಗೆ ನೀಗಿ ಎಂದು ನಿಮ್ಮೊಡಗೂಡುವೆನಯ್ಯಾ

[ಇನ್ನೇವೆನಿನ್ನೇವೆ – ಐದುತ್ತಿದೆ – ಹೊಂದುತ್ತಿದೆ]

ಬಸವಣ್ಣನ ವಚನ. ಮನಸ್ಸು ಕೋತಿ. ನನ್ನ ಮನಸ್ಸು ನನ್ನ ಮೇಲೆ ಮಾಡುವ ದಾಳಿ ಘನವಾದದ್ದು. ಏನು ಮಾಡಲೆಂದು ಹೊಳೆಯುತ್ತಿಲ್ಲ. ಈ ಕ್ಷಣದಲ್ಲಿ ಆಕಾಶಕ್ಕೆ ಮರುಕ್ಷಣಕ್ಕೆ ಪಾತಾಳ, ಕ್ಷಣದಲ್ಲಿ ದಿಕ್ಕುದಿಕ್ಕಿಗೆ ನಿಂದಲ್ಲಿ ನಿಲಲು ಆಗದಿದ್ದರೆ ಕೂಡಲಸಂಗಮನೊಡನೆ ಕೂಡುವುದು ಹೇಗೆ? ಕೋತಿ ಮನಸ್ಸಿನ ದಾಳಿ ಎಂದು ನಿಲ್ಲುತ್ತದೆ. ಈ ಪ್ರಶ್ನೆ ಬಹುಶಃ ನಮ್ಮೆಲ್ಲರದೂ ಹೌದು. ಮನಸ್ಸು ಕೋತಿಯಂತೆ ಅಲ್ಲ, ಮನಸ್ಸೇ ಕೋತಿ. ಹಾಗಿದ್ದ ಮೇಲೆ ಚಪಲತೆಯೇ ಅದರ ಗುಣ. ಅದನ್ನು ಒಂದೆಡೆಯಲ್ಲಿ ಸುಮ್ಮನೆ ಇರುವಂತೆ ಮಾಡುವುದು ಅಸಾಧ್ಯ ಮತ್ತು ಅಸಹಜ.

ಆದ್ದರಿಂದಲೇ ಮನಸ್ಸನ್ನು ನಿಯಂತ್ರಿಸುವ ಎಲ್ಲ ಪ್ರಯತ್ನಗಳೂ ಸಾಧನೆಗಳೂ ವ್ಯರ್ಥ. ಕೋತಿತನದ ಬಗ್ಗೆ “ಅರಿವು” ಇಟ್ಟುಕೊಳ್ಳುವುದೊಂದೇ ನಾವು ಮಾಡಬಹುದಾದ ಕೆಲಸ. ಇಲ್ಲಿ ಇನ್ನೊಂದು ಸೂಕ್ಷ್ಮವನ್ನೂ ಗಮನಿಸಿ, ನಾನು ಬೇರೆ ನನ್ನ ಮನಸ್ಸು ಬೇರೆ, ಏನು ಮಾಡಲಿ ಎಂಬ ತಹತಹ ಇಲ್ಲಿದೆ. ಹಾಗೆ ನೋಡಿದರೆ ನಾನು ಎಂಬುದು ನನ್ನ ಮನಸ್ಸಿಗಿಂತ ಭಿನ್ನ ಅಲ್ಲವೇ ಅಲ್ಲ. “ಮನಸ್ಸಿನಲ್ಲಿ ಯೋಚನೆಗಳು ಮೂಡುತ್ತವೆ” ಎನ್ನುವುದು ತಪ್ಪು, ಯೋಚನೆಗಳ ಮೊತ್ತವೇ ಮನಸ್ಸು ಎಂಬುದು ಸರಿ. ನಾನು ಆಕಾಶದೆತ್ತರ, ನಾನು ಚದರಿ ದಿಕ್ಕಾಪಾಲು ಎಂಬ ಯೋಚನೆಗಳೇ ನನ್ನ ಮನಸ್ಸು. ನಾನು ಮತ್ತು ಮನಸ್ಸು ಬೇರೆ ಬೇರೆ ಎಂದುಕೊಂಡದ್ದರಿಂದಲೇ ಮನಸ್ಸು ನನ್ನ ಮೇಲೆ ದಾಳಿ ಮಾಡುತ್ತಿದೆ ಅನ್ನಿಸುತ್ತದೆ.

ನಾನು ಬೇರೆಯಲ್ಲ, ನನ್ನ ಮನಸ್ಸು ಬೇರೆಯಲ್ಲ ಎಂದು ತಿಳಿದಾಗ ಕೋತಿ ಮನಸ್ಸಿನ ದಾಳಿ ನಿಲ್ಲುತ್ತದೆ, ಅದು ಯಾವಾಗ ಎಂಬುದೇ ಪ್ರಶ್ನೆ. ಆದ್ದರಿಂದಲೇ “ದಾಳಿಯ ನಂದಿಗೆ ನೀಗಿ” ಎಂಬ ಮಾತು ಬಂದಿದೆ. ಮನಸ್ಸಿನ ಸ್ವರೂಪದ ಬಗ್ಗೆ ಅರಿವು ಮೂಡಿದ ಕ್ಷಣವೇ ಮನಸ್ಸಿನ ಕೋತಿತನ ಮಾಯವಾಗುತ್ತದೆ, ಕೂಡಲಸಂಗಮ ದೊರೆಯುತ್ತಾನೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...