Home / ಲೇಖನ / ಇತರೆ / ವಚನ ವಿಚಾರ – ಮನಸ್ಸು ಕೋತಿ

ವಚನ ವಿಚಾರ – ಮನಸ್ಸು ಕೋತಿ

ಇನ್ನೇವೆನಿನ್ನೇವೆನಯ್ಯಾ
ಎನ್ನ ಮನವೆಂಬ ಮರ್ಕಟನ ದಾಳಿ ಘನವಾಯಿತ್ತು
ಎನ್ನ ನಿಂದಲ್ಲಿ ನಿಲಲೀಯದು
ಕ್ಷಣದಲ್ಲಿ ಪಾತಾಳಕ್ಕೆ ಐದುತ್ತಿದೆ
ಕ್ಷಣದಲ್ಲಿ ಆಕಾಶಕ್ಕೆ ಐದುತ್ತಿದೆ
ಕ್ಷಣದಲ್ಲಿ ದಿಗ್ದೆಸೆಗೆ ಐದುತ್ತಿದೆ
ಕೂಡಲಸಂಗಮದೇವಾ

ಈ ಮನವೆಂಬ ಮರ್ಕಟನ ದಾಳಿಯನೆಂದಿಗೆ ನೀಗಿ ಎಂದು ನಿಮ್ಮೊಡಗೂಡುವೆನಯ್ಯಾ

[ಇನ್ನೇವೆನಿನ್ನೇವೆ – ಐದುತ್ತಿದೆ – ಹೊಂದುತ್ತಿದೆ]

ಬಸವಣ್ಣನ ವಚನ. ಮನಸ್ಸು ಕೋತಿ. ನನ್ನ ಮನಸ್ಸು ನನ್ನ ಮೇಲೆ ಮಾಡುವ ದಾಳಿ ಘನವಾದದ್ದು. ಏನು ಮಾಡಲೆಂದು ಹೊಳೆಯುತ್ತಿಲ್ಲ. ಈ ಕ್ಷಣದಲ್ಲಿ ಆಕಾಶಕ್ಕೆ ಮರುಕ್ಷಣಕ್ಕೆ ಪಾತಾಳ, ಕ್ಷಣದಲ್ಲಿ ದಿಕ್ಕುದಿಕ್ಕಿಗೆ ನಿಂದಲ್ಲಿ ನಿಲಲು ಆಗದಿದ್ದರೆ ಕೂಡಲಸಂಗಮನೊಡನೆ ಕೂಡುವುದು ಹೇಗೆ? ಕೋತಿ ಮನಸ್ಸಿನ ದಾಳಿ ಎಂದು ನಿಲ್ಲುತ್ತದೆ. ಈ ಪ್ರಶ್ನೆ ಬಹುಶಃ ನಮ್ಮೆಲ್ಲರದೂ ಹೌದು. ಮನಸ್ಸು ಕೋತಿಯಂತೆ ಅಲ್ಲ, ಮನಸ್ಸೇ ಕೋತಿ. ಹಾಗಿದ್ದ ಮೇಲೆ ಚಪಲತೆಯೇ ಅದರ ಗುಣ. ಅದನ್ನು ಒಂದೆಡೆಯಲ್ಲಿ ಸುಮ್ಮನೆ ಇರುವಂತೆ ಮಾಡುವುದು ಅಸಾಧ್ಯ ಮತ್ತು ಅಸಹಜ.

ಆದ್ದರಿಂದಲೇ ಮನಸ್ಸನ್ನು ನಿಯಂತ್ರಿಸುವ ಎಲ್ಲ ಪ್ರಯತ್ನಗಳೂ ಸಾಧನೆಗಳೂ ವ್ಯರ್ಥ. ಕೋತಿತನದ ಬಗ್ಗೆ “ಅರಿವು” ಇಟ್ಟುಕೊಳ್ಳುವುದೊಂದೇ ನಾವು ಮಾಡಬಹುದಾದ ಕೆಲಸ. ಇಲ್ಲಿ ಇನ್ನೊಂದು ಸೂಕ್ಷ್ಮವನ್ನೂ ಗಮನಿಸಿ, ನಾನು ಬೇರೆ ನನ್ನ ಮನಸ್ಸು ಬೇರೆ, ಏನು ಮಾಡಲಿ ಎಂಬ ತಹತಹ ಇಲ್ಲಿದೆ. ಹಾಗೆ ನೋಡಿದರೆ ನಾನು ಎಂಬುದು ನನ್ನ ಮನಸ್ಸಿಗಿಂತ ಭಿನ್ನ ಅಲ್ಲವೇ ಅಲ್ಲ. “ಮನಸ್ಸಿನಲ್ಲಿ ಯೋಚನೆಗಳು ಮೂಡುತ್ತವೆ” ಎನ್ನುವುದು ತಪ್ಪು, ಯೋಚನೆಗಳ ಮೊತ್ತವೇ ಮನಸ್ಸು ಎಂಬುದು ಸರಿ. ನಾನು ಆಕಾಶದೆತ್ತರ, ನಾನು ಚದರಿ ದಿಕ್ಕಾಪಾಲು ಎಂಬ ಯೋಚನೆಗಳೇ ನನ್ನ ಮನಸ್ಸು. ನಾನು ಮತ್ತು ಮನಸ್ಸು ಬೇರೆ ಬೇರೆ ಎಂದುಕೊಂಡದ್ದರಿಂದಲೇ ಮನಸ್ಸು ನನ್ನ ಮೇಲೆ ದಾಳಿ ಮಾಡುತ್ತಿದೆ ಅನ್ನಿಸುತ್ತದೆ.

ನಾನು ಬೇರೆಯಲ್ಲ, ನನ್ನ ಮನಸ್ಸು ಬೇರೆಯಲ್ಲ ಎಂದು ತಿಳಿದಾಗ ಕೋತಿ ಮನಸ್ಸಿನ ದಾಳಿ ನಿಲ್ಲುತ್ತದೆ, ಅದು ಯಾವಾಗ ಎಂಬುದೇ ಪ್ರಶ್ನೆ. ಆದ್ದರಿಂದಲೇ “ದಾಳಿಯ ನಂದಿಗೆ ನೀಗಿ” ಎಂಬ ಮಾತು ಬಂದಿದೆ. ಮನಸ್ಸಿನ ಸ್ವರೂಪದ ಬಗ್ಗೆ ಅರಿವು ಮೂಡಿದ ಕ್ಷಣವೇ ಮನಸ್ಸಿನ ಕೋತಿತನ ಮಾಯವಾಗುತ್ತದೆ, ಕೂಡಲಸಂಗಮ ದೊರೆಯುತ್ತಾನೆ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...