Home / ಲೇಖನ / ಇತರೆ / ವಚನ ವಿಚಾರ – ಮನಸ್ಸು ಕೋತಿ

ವಚನ ವಿಚಾರ – ಮನಸ್ಸು ಕೋತಿ

ಇನ್ನೇವೆನಿನ್ನೇವೆನಯ್ಯಾ
ಎನ್ನ ಮನವೆಂಬ ಮರ್ಕಟನ ದಾಳಿ ಘನವಾಯಿತ್ತು
ಎನ್ನ ನಿಂದಲ್ಲಿ ನಿಲಲೀಯದು
ಕ್ಷಣದಲ್ಲಿ ಪಾತಾಳಕ್ಕೆ ಐದುತ್ತಿದೆ
ಕ್ಷಣದಲ್ಲಿ ಆಕಾಶಕ್ಕೆ ಐದುತ್ತಿದೆ
ಕ್ಷಣದಲ್ಲಿ ದಿಗ್ದೆಸೆಗೆ ಐದುತ್ತಿದೆ
ಕೂಡಲಸಂಗಮದೇವಾ

ಈ ಮನವೆಂಬ ಮರ್ಕಟನ ದಾಳಿಯನೆಂದಿಗೆ ನೀಗಿ ಎಂದು ನಿಮ್ಮೊಡಗೂಡುವೆನಯ್ಯಾ

[ಇನ್ನೇವೆನಿನ್ನೇವೆ – ಐದುತ್ತಿದೆ – ಹೊಂದುತ್ತಿದೆ]

ಬಸವಣ್ಣನ ವಚನ. ಮನಸ್ಸು ಕೋತಿ. ನನ್ನ ಮನಸ್ಸು ನನ್ನ ಮೇಲೆ ಮಾಡುವ ದಾಳಿ ಘನವಾದದ್ದು. ಏನು ಮಾಡಲೆಂದು ಹೊಳೆಯುತ್ತಿಲ್ಲ. ಈ ಕ್ಷಣದಲ್ಲಿ ಆಕಾಶಕ್ಕೆ ಮರುಕ್ಷಣಕ್ಕೆ ಪಾತಾಳ, ಕ್ಷಣದಲ್ಲಿ ದಿಕ್ಕುದಿಕ್ಕಿಗೆ ನಿಂದಲ್ಲಿ ನಿಲಲು ಆಗದಿದ್ದರೆ ಕೂಡಲಸಂಗಮನೊಡನೆ ಕೂಡುವುದು ಹೇಗೆ? ಕೋತಿ ಮನಸ್ಸಿನ ದಾಳಿ ಎಂದು ನಿಲ್ಲುತ್ತದೆ. ಈ ಪ್ರಶ್ನೆ ಬಹುಶಃ ನಮ್ಮೆಲ್ಲರದೂ ಹೌದು. ಮನಸ್ಸು ಕೋತಿಯಂತೆ ಅಲ್ಲ, ಮನಸ್ಸೇ ಕೋತಿ. ಹಾಗಿದ್ದ ಮೇಲೆ ಚಪಲತೆಯೇ ಅದರ ಗುಣ. ಅದನ್ನು ಒಂದೆಡೆಯಲ್ಲಿ ಸುಮ್ಮನೆ ಇರುವಂತೆ ಮಾಡುವುದು ಅಸಾಧ್ಯ ಮತ್ತು ಅಸಹಜ.

ಆದ್ದರಿಂದಲೇ ಮನಸ್ಸನ್ನು ನಿಯಂತ್ರಿಸುವ ಎಲ್ಲ ಪ್ರಯತ್ನಗಳೂ ಸಾಧನೆಗಳೂ ವ್ಯರ್ಥ. ಕೋತಿತನದ ಬಗ್ಗೆ “ಅರಿವು” ಇಟ್ಟುಕೊಳ್ಳುವುದೊಂದೇ ನಾವು ಮಾಡಬಹುದಾದ ಕೆಲಸ. ಇಲ್ಲಿ ಇನ್ನೊಂದು ಸೂಕ್ಷ್ಮವನ್ನೂ ಗಮನಿಸಿ, ನಾನು ಬೇರೆ ನನ್ನ ಮನಸ್ಸು ಬೇರೆ, ಏನು ಮಾಡಲಿ ಎಂಬ ತಹತಹ ಇಲ್ಲಿದೆ. ಹಾಗೆ ನೋಡಿದರೆ ನಾನು ಎಂಬುದು ನನ್ನ ಮನಸ್ಸಿಗಿಂತ ಭಿನ್ನ ಅಲ್ಲವೇ ಅಲ್ಲ. “ಮನಸ್ಸಿನಲ್ಲಿ ಯೋಚನೆಗಳು ಮೂಡುತ್ತವೆ” ಎನ್ನುವುದು ತಪ್ಪು, ಯೋಚನೆಗಳ ಮೊತ್ತವೇ ಮನಸ್ಸು ಎಂಬುದು ಸರಿ. ನಾನು ಆಕಾಶದೆತ್ತರ, ನಾನು ಚದರಿ ದಿಕ್ಕಾಪಾಲು ಎಂಬ ಯೋಚನೆಗಳೇ ನನ್ನ ಮನಸ್ಸು. ನಾನು ಮತ್ತು ಮನಸ್ಸು ಬೇರೆ ಬೇರೆ ಎಂದುಕೊಂಡದ್ದರಿಂದಲೇ ಮನಸ್ಸು ನನ್ನ ಮೇಲೆ ದಾಳಿ ಮಾಡುತ್ತಿದೆ ಅನ್ನಿಸುತ್ತದೆ.

ನಾನು ಬೇರೆಯಲ್ಲ, ನನ್ನ ಮನಸ್ಸು ಬೇರೆಯಲ್ಲ ಎಂದು ತಿಳಿದಾಗ ಕೋತಿ ಮನಸ್ಸಿನ ದಾಳಿ ನಿಲ್ಲುತ್ತದೆ, ಅದು ಯಾವಾಗ ಎಂಬುದೇ ಪ್ರಶ್ನೆ. ಆದ್ದರಿಂದಲೇ “ದಾಳಿಯ ನಂದಿಗೆ ನೀಗಿ” ಎಂಬ ಮಾತು ಬಂದಿದೆ. ಮನಸ್ಸಿನ ಸ್ವರೂಪದ ಬಗ್ಗೆ ಅರಿವು ಮೂಡಿದ ಕ್ಷಣವೇ ಮನಸ್ಸಿನ ಕೋತಿತನ ಮಾಯವಾಗುತ್ತದೆ, ಕೂಡಲಸಂಗಮ ದೊರೆಯುತ್ತಾನೆ.
*****

Tagged:

Leave a Reply

Your email address will not be published. Required fields are marked *

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...

ಕಾಲ ಹನ್ನೆರಡನೆ ಶತಮಾನ. ದೇಶ ಜಪಾನ್. ಅರಸನ ಹೆಸರು ಅಂತೋಕು. ವಯಸ್ಸು ಕೇವಲ ಏಳು ಸಂವತ್ಸರಗಳು. ಅಂತೋಕು ಹೈಕೆ ಎಂಬ ಸಾಮುರಾಯ ದಳದ ನಾಮ ಮಾತ್ರ ಮುಂದಾಳುವಾಗಿದ್ದು ನಿಜವಾದ ಅಧಿಕಾರ ಇವನ ಅಜ್ಜಮ್ಮನ ಕೈಯಲ್ಲಿತ್ತು. ಅಜ್ಜಮ್ಮನ ಹೆಸರು ನೀ ಎಂದು. ನೀಯ ಜವಾಬ್ದಾರಿ ಗುರುತರವಾಗಿತ್ತು ಎಂದು...

ಶೇಖರನಿಗೆ ಇನ್ನೂ ಎರಡು ದಿನಗಳ ‘ವಾರ’ ಕಡಿಮೆ ಬಿದ್ದಿತ್ತು. ಎಲ್ಲಿಯೂ ಹುಟ್ಟುವಂತೆ ತೋರಲಿಲ್ಲ. ಶ್ರೀಮಾನ್ ಪದ್ಮನಾಭ ಹೆಬ್ಬಾರರ ಮನೆಯಲ್ಲಿ ಕೇಳಬೇಕೆಂದು ನಾಲ್ಕಾರು ಸಲ ಯೋಚಿಸಿದ. ಆದರೆ ಅವರು ಭಿಕ್ಷುಕರನ್ನೂ, ವರ್ಗಣಿ ಕೇಳುವವರನ್ನೂ ವಾರದ ಮಾಣಿಗಳನ್ನೂ ಅಂಗಳಕ್ಕೂ ಬರಗೊ...

ಸರ್‍ಕಸ್ಸು ಮುಗಿದರೂ ಅವನು ಅಲ್ಲಿಯೇ ಕುಳಿತಿದ್ದ. ಎಲ್ಲಾ ಎದ್ದು ಹೋಗಿದ್ದರು. ಎರಡನೇ ಷೋ ಆರಂಭವಾಗಲು ಕೆಲವೇ ಸಮಯ ಉಳಿದಿತ್ತು. ಅವನ ಕಣ್ಣುಗಳು ಏನನ್ನೋ ಹುಡುಕುತ್ತಿದ್ದವು. ಆ ಸರ್‍ಕಸ್ಸಿನ ಹುಡುಗಿ ಪ್ರವೇಶಿಸಿ ಓಡಿ ಬಂದು ಎರಡು ಬಾರಿ ಲಾಗಾ ಹಾಕಿ ಇವನ ಮುಂದೆಯೇ ನಿಂತಂತಾಯಿತು. ಆಕೆಯ...

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...