Home / ಲೇಖನ / ಇತರೆ / ವಚನ ವಿಚಾರ – ಮನಸ್ಸು ಕೋತಿ

ವಚನ ವಿಚಾರ – ಮನಸ್ಸು ಕೋತಿ

ಇನ್ನೇವೆನಿನ್ನೇವೆನಯ್ಯಾ
ಎನ್ನ ಮನವೆಂಬ ಮರ್ಕಟನ ದಾಳಿ ಘನವಾಯಿತ್ತು
ಎನ್ನ ನಿಂದಲ್ಲಿ ನಿಲಲೀಯದು
ಕ್ಷಣದಲ್ಲಿ ಪಾತಾಳಕ್ಕೆ ಐದುತ್ತಿದೆ
ಕ್ಷಣದಲ್ಲಿ ಆಕಾಶಕ್ಕೆ ಐದುತ್ತಿದೆ
ಕ್ಷಣದಲ್ಲಿ ದಿಗ್ದೆಸೆಗೆ ಐದುತ್ತಿದೆ
ಕೂಡಲಸಂಗಮದೇವಾ

ಈ ಮನವೆಂಬ ಮರ್ಕಟನ ದಾಳಿಯನೆಂದಿಗೆ ನೀಗಿ ಎಂದು ನಿಮ್ಮೊಡಗೂಡುವೆನಯ್ಯಾ

[ಇನ್ನೇವೆನಿನ್ನೇವೆ – ಐದುತ್ತಿದೆ – ಹೊಂದುತ್ತಿದೆ]

ಬಸವಣ್ಣನ ವಚನ. ಮನಸ್ಸು ಕೋತಿ. ನನ್ನ ಮನಸ್ಸು ನನ್ನ ಮೇಲೆ ಮಾಡುವ ದಾಳಿ ಘನವಾದದ್ದು. ಏನು ಮಾಡಲೆಂದು ಹೊಳೆಯುತ್ತಿಲ್ಲ. ಈ ಕ್ಷಣದಲ್ಲಿ ಆಕಾಶಕ್ಕೆ ಮರುಕ್ಷಣಕ್ಕೆ ಪಾತಾಳ, ಕ್ಷಣದಲ್ಲಿ ದಿಕ್ಕುದಿಕ್ಕಿಗೆ ನಿಂದಲ್ಲಿ ನಿಲಲು ಆಗದಿದ್ದರೆ ಕೂಡಲಸಂಗಮನೊಡನೆ ಕೂಡುವುದು ಹೇಗೆ? ಕೋತಿ ಮನಸ್ಸಿನ ದಾಳಿ ಎಂದು ನಿಲ್ಲುತ್ತದೆ. ಈ ಪ್ರಶ್ನೆ ಬಹುಶಃ ನಮ್ಮೆಲ್ಲರದೂ ಹೌದು. ಮನಸ್ಸು ಕೋತಿಯಂತೆ ಅಲ್ಲ, ಮನಸ್ಸೇ ಕೋತಿ. ಹಾಗಿದ್ದ ಮೇಲೆ ಚಪಲತೆಯೇ ಅದರ ಗುಣ. ಅದನ್ನು ಒಂದೆಡೆಯಲ್ಲಿ ಸುಮ್ಮನೆ ಇರುವಂತೆ ಮಾಡುವುದು ಅಸಾಧ್ಯ ಮತ್ತು ಅಸಹಜ.

ಆದ್ದರಿಂದಲೇ ಮನಸ್ಸನ್ನು ನಿಯಂತ್ರಿಸುವ ಎಲ್ಲ ಪ್ರಯತ್ನಗಳೂ ಸಾಧನೆಗಳೂ ವ್ಯರ್ಥ. ಕೋತಿತನದ ಬಗ್ಗೆ “ಅರಿವು” ಇಟ್ಟುಕೊಳ್ಳುವುದೊಂದೇ ನಾವು ಮಾಡಬಹುದಾದ ಕೆಲಸ. ಇಲ್ಲಿ ಇನ್ನೊಂದು ಸೂಕ್ಷ್ಮವನ್ನೂ ಗಮನಿಸಿ, ನಾನು ಬೇರೆ ನನ್ನ ಮನಸ್ಸು ಬೇರೆ, ಏನು ಮಾಡಲಿ ಎಂಬ ತಹತಹ ಇಲ್ಲಿದೆ. ಹಾಗೆ ನೋಡಿದರೆ ನಾನು ಎಂಬುದು ನನ್ನ ಮನಸ್ಸಿಗಿಂತ ಭಿನ್ನ ಅಲ್ಲವೇ ಅಲ್ಲ. “ಮನಸ್ಸಿನಲ್ಲಿ ಯೋಚನೆಗಳು ಮೂಡುತ್ತವೆ” ಎನ್ನುವುದು ತಪ್ಪು, ಯೋಚನೆಗಳ ಮೊತ್ತವೇ ಮನಸ್ಸು ಎಂಬುದು ಸರಿ. ನಾನು ಆಕಾಶದೆತ್ತರ, ನಾನು ಚದರಿ ದಿಕ್ಕಾಪಾಲು ಎಂಬ ಯೋಚನೆಗಳೇ ನನ್ನ ಮನಸ್ಸು. ನಾನು ಮತ್ತು ಮನಸ್ಸು ಬೇರೆ ಬೇರೆ ಎಂದುಕೊಂಡದ್ದರಿಂದಲೇ ಮನಸ್ಸು ನನ್ನ ಮೇಲೆ ದಾಳಿ ಮಾಡುತ್ತಿದೆ ಅನ್ನಿಸುತ್ತದೆ.

ನಾನು ಬೇರೆಯಲ್ಲ, ನನ್ನ ಮನಸ್ಸು ಬೇರೆಯಲ್ಲ ಎಂದು ತಿಳಿದಾಗ ಕೋತಿ ಮನಸ್ಸಿನ ದಾಳಿ ನಿಲ್ಲುತ್ತದೆ, ಅದು ಯಾವಾಗ ಎಂಬುದೇ ಪ್ರಶ್ನೆ. ಆದ್ದರಿಂದಲೇ “ದಾಳಿಯ ನಂದಿಗೆ ನೀಗಿ” ಎಂಬ ಮಾತು ಬಂದಿದೆ. ಮನಸ್ಸಿನ ಸ್ವರೂಪದ ಬಗ್ಗೆ ಅರಿವು ಮೂಡಿದ ಕ್ಷಣವೇ ಮನಸ್ಸಿನ ಕೋತಿತನ ಮಾಯವಾಗುತ್ತದೆ, ಕೂಡಲಸಂಗಮ ದೊರೆಯುತ್ತಾನೆ.
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...