Home / ಲೇಖನ / ಇತರೆ / ವಚನ ವಿಚಾರ – ಇಬ್ಬರಿಗೂ ಒಂದೇ ಬಾಣ

ವಚನ ವಿಚಾರ – ಇಬ್ಬರಿಗೂ ಒಂದೇ ಬಾಣ

ಇಬ್ಬರಿಗೊಂದಂಬ ತೊಡುವೆ ಗಡ ಕಾಮಾ
ಅರಿದರಿದು
ಬಿಲುಗಾರನಹೆಯೋ
ಎಸೆದಿಬ್ಬರು ಒಂದನೀ ಹರು ಗಡ
ಇದು ಹೊಸತು
ಚೋದ್ಯವೀ ಸರಳ ಪರಿ ನೋಡಾ
ಎನಗೆಯೂ ಉರಿಲಿಂಗದೇವಗೆಯೂ ತೊಟ್ಟೆಸು
ನಾವಿಬ್ಬರೊಂದಾಗೆ ಬಿಲ್ಲಾಳಹೆ
ಎಸೆಯಲೋ ಕಾಮ

[ಚೋದ್ಯ-ಆಶ್ಚರ್ಯ, ಹರು – ತೆಗೆದುಕೊ, ಸೆರೆಹಿಡಿ, ಸರಳ ಪರಿ-ಬಾಣದ ಪರಿ]

ಉರಿಲಿಂಗದೇವನ ವಚನ. ಮನ್ಮಥ ಬಲು ದೊಡ್ಡ ಬಿಲ್ಲಾಳು. ನನಗೂ ನನ್ನ ನಲ್ಲನಾದ ದೇವರಿಗೂ ಇಬ್ಬರಿಗೂ ಒಂದೇ ಬಾಣದಲ್ಲಿ ಹೊಡೆಯುವುದಕ್ಕೆ ಸಾಧ್ಯವಾದರೆ ಮಾತ್ರ ನೀನು ನಿಜವಾದ ಬಿಲ್ಲಾಳು. ನಮ್ಮಿಬ್ಬರಿಗೂ ನಾಟುವಂತೆ ಒಂದೇ ಬಾಣವನ್ನು ತೊಟ್ಟು ಎಸೆದರೆ ಆಗ ನಾನೂ ಅವನೂ ಒಂದೇ ಆಗಿಬಿಡುತ್ತೇವೆ. ಆಗ ಮಾತ್ರ ನೀನು ಬಿಲ್ಲಾಳು ಆಗುವೆ ಎಂದು ಉರಿಲಿಂಗದೇವ ಕಾಮನಿಗೆ ಸವಾಲೆಸೆದಿದ್ದಾನೆ.

ಉತ್ಕಟವಾದ ದೈವಭಕ್ತಿಯು ಕಾಮದಷ್ಟೇ ತೀವ್ರವಾದ ಭಾವ, ಇರಬಹುದು. ಆದರೆ ಅದು ಭಕ್ತ / ಭಕ್ತೆಗೆ ಮಾತ್ರ, ಕಣ್ಣಿಗೆ ಕಾಣದ ನಲ್ಲ ದೇವರಿಗೂ ಆ ಭಾವ ಬರಬೇಡವೇ! ಅಂತೆಯೇ ತಪಸ್ಸಿನಲ್ಲಿ ತೊಡಗಿದ್ದ ಶಿವನ ಮೇಲೆ ಬಾಣ ಎಸೆದ ಕಾಮ ನನ್ನನ್ನೂ ನನ್ನ ದೈವವನ್ನೂ ಒಂದಾಗಿಸುವಂತೆ ಬಾಣತೊಡಲಿ ಎಂಬ ಕೋರಿಕೆ. ಹಾಗೆ ಒಂದುವೇಳೆ ಬಾಣ ತೊಟ್ಟರೆ ಕೊನೆಗೆ ಕಾಮನೇ ಸುಟ್ಟುಹೋಗ ಬೇಕಲ್ಲವೇ! ಕಾಮದ ಮೂಲಕವೇ ಕಾಮದ ನಿರಾಕರಣೆಯನ್ನೂ ಮಾಡುವ ಪರಿ ಹೊಸತಾಗಿದೆ.
*****

Tagged:

Leave a Reply

Your email address will not be published. Required fields are marked *

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...