Home / ಲೇಖನ / ಇತರೆ / ವಚನ ವಿಚಾರ – ಊರ್ವಶಿ ಮತ್ತು ಹಂದಿ

ವಚನ ವಿಚಾರ – ಊರ್ವಶಿ ಮತ್ತು ಹಂದಿ

ಊರ್ವಸಿ ಕರ್ಪುರವ ತಿಂದು ಎಲ್ಲರಿಗೆ ಮುತ್ತ ಕೊಟ್ಟಡೆ ಮೆಚ್ಚುವರಲ್ಲದೆ
ಹಂದಿ ಕರ್ಪುರವ ತಿಂದು ಎಲ್ಲರಿಗೆ ಮುತ್ತ ಕೊಟ್ಟಡೆ ಮೆಚ್ಚುವರೆ
ಹುಡು ಹುಡು ಎಂದಟ್ಟುವರಲ್ಲದೆ
ನಡೆನುಡಿ ಶುದ್ಧವುಳ್ಳವರು ಪುರಾತನರ ವಚನವ ಓದಿದಡೆ
ಅನುಭಾವವ ಮಾಡಿದಡೆ ಮಚ್ಚುವರಲ್ಲದೆ
ನಡೆನುಡಿ ಶುದ್ಧವಿಲ್ಲದವರು ಪುರಾತನರ ವಚನವ ಓದಿದಡೆ
ಅನುಭಾವವ ಮಾಡಿದಡೆ ಮಚ್ಚುವರೆ
ನಡೆನುಡಿ ಶುದ್ಧವಿಲ್ಲದವರು ಪುರಾತನರ ವಚನವ ಓದಿದಡೆ ಆ ಹಂದಿಗಿಂತ ಕರಕಷ್ಟ
ಎನ್ನಯ್ಯ ಪ್ರಿಯ ಇಮ್ಮಡಿ ನಿಃಕಳಂಕಮಲ್ಲಿಕಾರ್ಜುನಾ

ಮೋಳಿಗೆ ಮಾರಯ್ಯನ ಹೆಂಡತಿ ಮೋಳಿಗೆ ಮಹಾದೇವಿಯ ವಚನ ಇದು. ಪಚ್ಚಕರ್ಪೂರವು ಸುಗಂಧಭರಿತ ನಿಜ. ಊರ್ವಶಿ ಕರ್ಪೂರವನ್ನು ಮೆದ್ದು ಮುದ್ದುಕೊಟ್ಟರೆ ರುಚಿ, ಅದೇ ಹಂದಿ ಕರ್ಪೂರವನ್ನು ಮೆದ್ದು ಮುತ್ತುಕೊಟ್ಟರೆ ಅಸಹ್ಯ. ವಚನಗಳೇನೋ ದೊಡ್ಡ ಮಾತುಗಳು ನಿಜ. ಆದರೆ ನಡೆ, ನುಡಿಗಳಲ್ಲಿ ಪಕ್ವವಾದವರು ಅವನ್ನು ಓದಿ, ಹೇಳಿದರೆ ಹಿತ, ಹಾಗಲ್ಲದವರು ಹೇಳಿದರೆ ಹಂದಿಗಿಂತ ಅಸಹ್ಯ ಈ ಮಾತನ್ನು ಓದುಗರ ಜವಾಬ್ದಾರಿ ಎಂದೂ ವಿವರಿಸಿಕೊಳ್ಳಬಹುದು. ಕನ್ನಡವನ್ನು ಓದಲು ಬಂದ ಮಾತ್ರಕ್ಕೆ ಕನ್ನಡದಲ್ಲಿ ಬರೆದಿರುವುದೆಲ್ಲಾ ಅರ್ಥವಾಗಬೇಕೆಂದಿಲ್ಲ. ಓದುಗರ ಮನಸ್ಸೂ ಪಕ್ವವಾಗಿದ್ದಾಗ ಓದಿದ್ದಕ್ಕೆ ಹೊಸ ಅರ್ಥ ಹೊಳೆದು ಅದನ್ನು ಅವರು ಹೇಳಿದರೆ ಕೇಳುವವರಿಗೂ ಊರ್ವಶಿಯ ಚುಂಬನದಂತೆ ಹಿತವಾಗಿರುತ್ತದೆ.

ನಮ್ಮ ಕಾಲದ ದುರಂತವೆಂದರೆ ಯಾರು ಏನೇ ಹೇಳಿದರೂ ಓದುಗರಿಗೆ ಯಾವ ಜವಾಬ್ದಾರಿಯೂ ಇಲ್ಲ, ಅರ್ಥವತ್ತಾಗಿ ಹೇಳುವುದು ಲೇಖಕರ, ಮಾತನಾಡುವವರ ಜವಾಬ್ದಾರಿ ಎಂದು ಭ್ರಮಿಸಿರುವುದು. ಕೇಳಿದ ಓದಿದ ಮಾತಿನ ಬಗ್ಗೆ ಕಟು ಟಿಪ್ಪಣಿ ಮಾಡುವ ಮೊದಲು ಓದುಗರು ತಾವು ಊರ್ವಶಿಯಂಥವರೇ ಎಂದು ಒಮ್ಮೆ ಪರಿಶೀಲಿಸಿಕೊಳ್ಳುವುದು ಒಳ್ಳೆಯದೇನೋ! ತೀರ ಇಷ್ಟು ಸಂಕುಚಿತ ಅರ್ಥದಲ್ಲಿ ಅಲ್ಲದಿದ್ದರೂ ಸ್ವೀಕರಿಸುವವರ ಯೋಗ್ಯತೆಯನ್ನು ಈ ವಚನ ಎತ್ತಿ ಹೇಳುತ್ತಿರುವುದು ಗಮನಾರ್ಹವೆಂದೇ ತೋರುತ್ತದೆ.
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...