Home / ಲೇಖನ / ಇತರೆ / ವಚನ ವಿಚಾರ – ಊರ್ವಶಿ ಮತ್ತು ಹಂದಿ

ವಚನ ವಿಚಾರ – ಊರ್ವಶಿ ಮತ್ತು ಹಂದಿ

ಊರ್ವಸಿ ಕರ್ಪುರವ ತಿಂದು ಎಲ್ಲರಿಗೆ ಮುತ್ತ ಕೊಟ್ಟಡೆ ಮೆಚ್ಚುವರಲ್ಲದೆ
ಹಂದಿ ಕರ್ಪುರವ ತಿಂದು ಎಲ್ಲರಿಗೆ ಮುತ್ತ ಕೊಟ್ಟಡೆ ಮೆಚ್ಚುವರೆ
ಹುಡು ಹುಡು ಎಂದಟ್ಟುವರಲ್ಲದೆ
ನಡೆನುಡಿ ಶುದ್ಧವುಳ್ಳವರು ಪುರಾತನರ ವಚನವ ಓದಿದಡೆ
ಅನುಭಾವವ ಮಾಡಿದಡೆ ಮಚ್ಚುವರಲ್ಲದೆ
ನಡೆನುಡಿ ಶುದ್ಧವಿಲ್ಲದವರು ಪುರಾತನರ ವಚನವ ಓದಿದಡೆ
ಅನುಭಾವವ ಮಾಡಿದಡೆ ಮಚ್ಚುವರೆ
ನಡೆನುಡಿ ಶುದ್ಧವಿಲ್ಲದವರು ಪುರಾತನರ ವಚನವ ಓದಿದಡೆ ಆ ಹಂದಿಗಿಂತ ಕರಕಷ್ಟ
ಎನ್ನಯ್ಯ ಪ್ರಿಯ ಇಮ್ಮಡಿ ನಿಃಕಳಂಕಮಲ್ಲಿಕಾರ್ಜುನಾ

ಮೋಳಿಗೆ ಮಾರಯ್ಯನ ಹೆಂಡತಿ ಮೋಳಿಗೆ ಮಹಾದೇವಿಯ ವಚನ ಇದು. ಪಚ್ಚಕರ್ಪೂರವು ಸುಗಂಧಭರಿತ ನಿಜ. ಊರ್ವಶಿ ಕರ್ಪೂರವನ್ನು ಮೆದ್ದು ಮುದ್ದುಕೊಟ್ಟರೆ ರುಚಿ, ಅದೇ ಹಂದಿ ಕರ್ಪೂರವನ್ನು ಮೆದ್ದು ಮುತ್ತುಕೊಟ್ಟರೆ ಅಸಹ್ಯ. ವಚನಗಳೇನೋ ದೊಡ್ಡ ಮಾತುಗಳು ನಿಜ. ಆದರೆ ನಡೆ, ನುಡಿಗಳಲ್ಲಿ ಪಕ್ವವಾದವರು ಅವನ್ನು ಓದಿ, ಹೇಳಿದರೆ ಹಿತ, ಹಾಗಲ್ಲದವರು ಹೇಳಿದರೆ ಹಂದಿಗಿಂತ ಅಸಹ್ಯ ಈ ಮಾತನ್ನು ಓದುಗರ ಜವಾಬ್ದಾರಿ ಎಂದೂ ವಿವರಿಸಿಕೊಳ್ಳಬಹುದು. ಕನ್ನಡವನ್ನು ಓದಲು ಬಂದ ಮಾತ್ರಕ್ಕೆ ಕನ್ನಡದಲ್ಲಿ ಬರೆದಿರುವುದೆಲ್ಲಾ ಅರ್ಥವಾಗಬೇಕೆಂದಿಲ್ಲ. ಓದುಗರ ಮನಸ್ಸೂ ಪಕ್ವವಾಗಿದ್ದಾಗ ಓದಿದ್ದಕ್ಕೆ ಹೊಸ ಅರ್ಥ ಹೊಳೆದು ಅದನ್ನು ಅವರು ಹೇಳಿದರೆ ಕೇಳುವವರಿಗೂ ಊರ್ವಶಿಯ ಚುಂಬನದಂತೆ ಹಿತವಾಗಿರುತ್ತದೆ.

ನಮ್ಮ ಕಾಲದ ದುರಂತವೆಂದರೆ ಯಾರು ಏನೇ ಹೇಳಿದರೂ ಓದುಗರಿಗೆ ಯಾವ ಜವಾಬ್ದಾರಿಯೂ ಇಲ್ಲ, ಅರ್ಥವತ್ತಾಗಿ ಹೇಳುವುದು ಲೇಖಕರ, ಮಾತನಾಡುವವರ ಜವಾಬ್ದಾರಿ ಎಂದು ಭ್ರಮಿಸಿರುವುದು. ಕೇಳಿದ ಓದಿದ ಮಾತಿನ ಬಗ್ಗೆ ಕಟು ಟಿಪ್ಪಣಿ ಮಾಡುವ ಮೊದಲು ಓದುಗರು ತಾವು ಊರ್ವಶಿಯಂಥವರೇ ಎಂದು ಒಮ್ಮೆ ಪರಿಶೀಲಿಸಿಕೊಳ್ಳುವುದು ಒಳ್ಳೆಯದೇನೋ! ತೀರ ಇಷ್ಟು ಸಂಕುಚಿತ ಅರ್ಥದಲ್ಲಿ ಅಲ್ಲದಿದ್ದರೂ ಸ್ವೀಕರಿಸುವವರ ಯೋಗ್ಯತೆಯನ್ನು ಈ ವಚನ ಎತ್ತಿ ಹೇಳುತ್ತಿರುವುದು ಗಮನಾರ್ಹವೆಂದೇ ತೋರುತ್ತದೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...