Home / ಲೇಖನ / ಇತರೆ / ವಚನ ವಿಚಾರ – ಕೊಡುವ ಆಸೆಯೂ ಇಲ್ಲ

ವಚನ ವಿಚಾರ – ಕೊಡುವ ಆಸೆಯೂ ಇಲ್ಲ

ಎನಗೆ ಮನೆ ಇಲ್ಲ
ಎನಗೆ ಧನವಿಲ್ಲ
ಮಾಡುವುದೇನು ನೀಡುವುದೇನು
ಮನೆ ಧನ ಸಕಲಸಂಪದಭ್ಯುದಯವುಳ್ಳ
ನಿಮ್ಮ ಶರಣರ ತಪ್ಪಲಕ್ಕಿಯನಾಯ್ದು ತಂದು
ಎನ್ನೊಡಲ ಹೊರೆವನಾಗಿ
ಅಮರೇಶ್ವರ ಲಿಂಗಕ್ಕೆ ನೀಡುವ ಬಯಕೆ ಎನಗಿಲ್ಲ

[ತಪ್ಪಲಕ್ಕಿ-ಚೆಲ್ಲಿ ಬಿದ್ದ ಅಕ್ಕಿ]

ಆಯ್ದಕ್ಕಿ ಮಾರಯ್ಯನ ವಚನ. ಪಡೆದುಕೊಳ್ಳುವ ಆಸೆಯಂತೆ ಕೊಡುವ ಆಸೆಯೂ ಬಯಕೆಯೇ ಅಲ್ಲವೇ! ಕೊಡುವ ಆಸೆಯೂ ಇಲ್ಲ ಎಂದು ನಿಜವಾದ ವಿ-ರಕ್ತ ಸ್ಥಿತಿಯನ್ನು ಈ ವಚನ ಹೇಳುವಂತಿದೆ. ನನಗೆ ಮನೆ ಇಲ್ಲ, ಧನ ಇಲ್ಲ, ಅವು ಇರುವವರು ಕೊಡುತ್ತಾರೆ, ಕೊಡಲು ಬಯಸುತ್ತಾರೆ. ನಾನು ಅವರ ಮನೆಯಲ್ಲಿ ನೆಲದ ಮೇಲೆ ಬಿದ್ದ ಅಕ್ಕಿಯನ್ನು ಆಯ್ದು ತರುವವನು. ಹಾಗಾಗಿ ಅಮರೇಶ್ವರಲಿಂಗಕ್ಕೆ ಕೊಡುವ ಆಸೆಯೂ ಇಲ್ಲ. ಅಥವಾ ಅಂಥ ಅಕ್ಕಿಯನ್ನು ತನ್ನ ಲಿಂಗಕ್ಕೆ ಅರ್ಪಿಸಲಾರೆ ಅನ್ನುವ ಹಿಂಜರಿಕೆ ಇದೆಯೋ?
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...