Home / ಲೇಖನ / ಇತರೆ / ವಚನ ವಿಚಾರ – ನೀನು ನಾನು

ವಚನ ವಿಚಾರ – ನೀನು ನಾನು

ಎನ್ನ ನಾನರಿಯದಲ್ಲಿ ಎಲ್ಲಿರ್ದೆ ಹೇಳಯ್ಯಾ
ಚಿನ್ನದೊಳಗಣ ಬಣ್ಣದಂತೆ ಎನ್ನೊಳಗಿರ್ದೆ
ಅಯ್ಯಾ ಎನ್ನೊಳಗೆ ಇನಿತಿರ್ದು ಮೈ ದೋರದ ಭೇದವ
ನಿಮ್ಮಲ್ಲಿ ಕಂಡೆ ಕಾಣಾ ಚೆನ್ನಮಲ್ಲಿಕಾರ್ಜುನಾ

[ಇನಿತಿರ್ದು-ಇಷ್ಟು ಇದ್ದು, ಹೀಗೆ ಇದ್ದು]

ಅಕ್ಕಮಹಾದೇವಿಯ ವಚನ. ನಾನು ಯಾರು ಎಂದು ನನಗೇ ಗೊತ್ತಾಗುವ ಮೊದಲು ನೀನು ಎಲ್ಲಿದ್ದೆ? ಇದ್ದರೂ ಇದ್ದಿರಬಹುದು, ಬಂಗಾರದೊಳಗೆ ಅಡಗಿರುವ ಬಣ್ಣದ ಹಾಗೆ. ಹಾಗೆ ನನ್ನೊಡನೆ ಬೇರ್ಪಡಿಸಲಾಗದಂತೆ ಇದ್ದೂ ಕೂಡ ಯಾಕೆ ನನಗೆ ಮೈದೋರದೆ ಹೋದೆ? ನನ್ನೊಳಗಿದ್ದೂ ನನ್ನಿಂದ ಬೇರೆಯಾಗಿಯೇ, ಕೈಗೆ ಸಿಗದೆ, ಕಣ್ಣಿಗೆ ಕಾಣದೆ ಇರುವ ಭೇದವನ್ನು ಮಾತ್ರ ಕಂಡೆ ಅನ್ನುತ್ತಾಳೆ. ಇರುವ ಒಂದು ಎರಡಾಗಿ ಮತ್ತೆ ಒಂದೇ ಆಗಲಾರದ ಉಮ್ಮಳವನ್ನು ಈ ವಚನ ಹೇಳುತ್ತದೆ.

ಈ ವಚನದಲ್ಲಿ ಗಮನಕ್ಕೆ ತಕ್ಕ ಎರಡು ಸಂಗತಿಗಳಿವೆ: ಮೊದಲನೆಯದು `ನಾನು’ ಎಂಬ ಅರಿವು ಮೂಡುವವರೆಗೆ `ನೀನು’ ಎಂಬ ಮಾತಿಗೆ ಅರ್ಥವೇ ಇಲ್ಲ. ನಾನು ಮತ್ತು ನೀನು ಅನ್ನುವ ಭೇದ ಸೃಷ್ಟಿಯಾಗದಿದ್ದರೆ `ಅರ್ಥ’ ಅನ್ನುವ ಮಾತಿಗೂ ಅರ್ಥವಿಲ್ಲ. ನಿನ್ನಿಂದ ನಾನು ಬೇರೆ, ನನ್ನಿಂದ ನೀನು ಬೇರೆ ಅನ್ನುವುದರಿಂದಲೇ ಅಲ್ಲವೇ ನಮ್ಮ ನಮ್ಮ `ವ್ಯಕ್ತಿತ್ವ’ ಸ್ಪುಟಗೊಳ್ಳುವುದು! ಹಾಗೆ `ನಾನು’ ಬೇರೆ ಎಂಬ ಅರಿವು ಮೂಡುವವರೆಗೆ ನೀನು ಎಲ್ಲಿದ್ದೆ ಅನ್ನುವ ಪ್ರಶ್ನೆ ಅಕ್ಕನದು.

ಇನ್ನೊಂದು ಸಂಗತಿ ಎಂದರೆ ನೀನು ಹಾಗೆ ಬೇರೆ ಅಲ್ಲವೇ ಅಲ್ಲ, ಬಂಗಾರದಿಂದ ಬಣ್ಣವನ್ನು ಬೇರ್ಪಡಿಸಲು ಆಗದಂತೆ ನೀನು ನನ್ನೊಳಗಿನವನೇ ಅನ್ನುವ ಅರಿವು. ಆದರೆ ತೊಡಕೆಂದರೆ ನನ್ನೊಳಗೆ ಇದ್ದರೂ ಹಾಗೆ ಇರುವಾತ ಬೇರೆಯಾಗಿ ಕಣ್ಣಿಗೆ ಕಾಣಿಸಿಕೊಳ್ಳದಿದ್ದರೆ ಕೂಡುವ ಮಾತೆಲ್ಲಿಂದ ಬಂದಿತು! ಹಾಗೆ ನನ್ನೊಳಗೆ ಇರುವವನನ್ನು ಕಾಣುವುದಕ್ಕೆ `ನಾನು’ ಪ್ರತ್ಯೇಕಗೊಂಡು ಇಲ್ಲವಾಗಬೇಕೋ ಏನೋ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...