Home / ಲೇಖನ / ಇತರೆ / ವಚನ ವಿಚಾರ – ನೀನು ನಾನು

ವಚನ ವಿಚಾರ – ನೀನು ನಾನು

ಎನ್ನ ನಾನರಿಯದಲ್ಲಿ ಎಲ್ಲಿರ್ದೆ ಹೇಳಯ್ಯಾ
ಚಿನ್ನದೊಳಗಣ ಬಣ್ಣದಂತೆ ಎನ್ನೊಳಗಿರ್ದೆ
ಅಯ್ಯಾ ಎನ್ನೊಳಗೆ ಇನಿತಿರ್ದು ಮೈ ದೋರದ ಭೇದವ
ನಿಮ್ಮಲ್ಲಿ ಕಂಡೆ ಕಾಣಾ ಚೆನ್ನಮಲ್ಲಿಕಾರ್ಜುನಾ

[ಇನಿತಿರ್ದು-ಇಷ್ಟು ಇದ್ದು, ಹೀಗೆ ಇದ್ದು]

ಅಕ್ಕಮಹಾದೇವಿಯ ವಚನ. ನಾನು ಯಾರು ಎಂದು ನನಗೇ ಗೊತ್ತಾಗುವ ಮೊದಲು ನೀನು ಎಲ್ಲಿದ್ದೆ? ಇದ್ದರೂ ಇದ್ದಿರಬಹುದು, ಬಂಗಾರದೊಳಗೆ ಅಡಗಿರುವ ಬಣ್ಣದ ಹಾಗೆ. ಹಾಗೆ ನನ್ನೊಡನೆ ಬೇರ್ಪಡಿಸಲಾಗದಂತೆ ಇದ್ದೂ ಕೂಡ ಯಾಕೆ ನನಗೆ ಮೈದೋರದೆ ಹೋದೆ? ನನ್ನೊಳಗಿದ್ದೂ ನನ್ನಿಂದ ಬೇರೆಯಾಗಿಯೇ, ಕೈಗೆ ಸಿಗದೆ, ಕಣ್ಣಿಗೆ ಕಾಣದೆ ಇರುವ ಭೇದವನ್ನು ಮಾತ್ರ ಕಂಡೆ ಅನ್ನುತ್ತಾಳೆ. ಇರುವ ಒಂದು ಎರಡಾಗಿ ಮತ್ತೆ ಒಂದೇ ಆಗಲಾರದ ಉಮ್ಮಳವನ್ನು ಈ ವಚನ ಹೇಳುತ್ತದೆ.

ಈ ವಚನದಲ್ಲಿ ಗಮನಕ್ಕೆ ತಕ್ಕ ಎರಡು ಸಂಗತಿಗಳಿವೆ: ಮೊದಲನೆಯದು `ನಾನು’ ಎಂಬ ಅರಿವು ಮೂಡುವವರೆಗೆ `ನೀನು’ ಎಂಬ ಮಾತಿಗೆ ಅರ್ಥವೇ ಇಲ್ಲ. ನಾನು ಮತ್ತು ನೀನು ಅನ್ನುವ ಭೇದ ಸೃಷ್ಟಿಯಾಗದಿದ್ದರೆ `ಅರ್ಥ’ ಅನ್ನುವ ಮಾತಿಗೂ ಅರ್ಥವಿಲ್ಲ. ನಿನ್ನಿಂದ ನಾನು ಬೇರೆ, ನನ್ನಿಂದ ನೀನು ಬೇರೆ ಅನ್ನುವುದರಿಂದಲೇ ಅಲ್ಲವೇ ನಮ್ಮ ನಮ್ಮ `ವ್ಯಕ್ತಿತ್ವ’ ಸ್ಪುಟಗೊಳ್ಳುವುದು! ಹಾಗೆ `ನಾನು’ ಬೇರೆ ಎಂಬ ಅರಿವು ಮೂಡುವವರೆಗೆ ನೀನು ಎಲ್ಲಿದ್ದೆ ಅನ್ನುವ ಪ್ರಶ್ನೆ ಅಕ್ಕನದು.

ಇನ್ನೊಂದು ಸಂಗತಿ ಎಂದರೆ ನೀನು ಹಾಗೆ ಬೇರೆ ಅಲ್ಲವೇ ಅಲ್ಲ, ಬಂಗಾರದಿಂದ ಬಣ್ಣವನ್ನು ಬೇರ್ಪಡಿಸಲು ಆಗದಂತೆ ನೀನು ನನ್ನೊಳಗಿನವನೇ ಅನ್ನುವ ಅರಿವು. ಆದರೆ ತೊಡಕೆಂದರೆ ನನ್ನೊಳಗೆ ಇದ್ದರೂ ಹಾಗೆ ಇರುವಾತ ಬೇರೆಯಾಗಿ ಕಣ್ಣಿಗೆ ಕಾಣಿಸಿಕೊಳ್ಳದಿದ್ದರೆ ಕೂಡುವ ಮಾತೆಲ್ಲಿಂದ ಬಂದಿತು! ಹಾಗೆ ನನ್ನೊಳಗೆ ಇರುವವನನ್ನು ಕಾಣುವುದಕ್ಕೆ `ನಾನು’ ಪ್ರತ್ಯೇಕಗೊಂಡು ಇಲ್ಲವಾಗಬೇಕೋ ಏನೋ.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...