ವಚನ ವಿಚಾರ – ಇದು ಯಾರ ಮೈ?

ವಚನ ವಿಚಾರ – ಇದು ಯಾರ ಮೈ?

ಎನ್ನೊಡಲಾದಡೆ ಎನ್ನಿಚ್ಚೆಯಲ್ಲಿರದೆ
ನಿನ್ನೊಡಲಾದಡೆ ನಿನ್ನಿಚ್ಛೆಯಲ್ಲಿರದೆ
ಅದು ಎನ್ನೊಡಲೂ ಅಲ್ಲ
ನಿನ್ನೊಡಲೂ ಅಲ್ಲ
ಅದು ನೀ ಮಾಡಿದ ಜಗದ ಬಿನ್ನಾಣದೊಡಲು
ಕಾಣಾ
ರಾಮನಾಥ

ಜೇಡರ ದಾಸಿಮಯ್ಯನ ವಚನ. ಇದು ನನ್ನ ಮೈಯಾದರೆ ನನ್ನ ಮಾತು ಕೇಳಬೇಕು, ಕೇಳುತ್ತಿಲ್ಲ. ದೇವರೇ, ಇದು ನಿನ್ನ ಮೈಯಾದರೆ ನಿನ್ನ ಮಾತು ಕೇಳುತ್ತಿರಬೇಕು. ಕೇಳುತ್ತಿಲ್ಲವಲ್ಲಾ? ಇದು ನನ್ನ ಒಡಲೂ ಅಲ್ಲ, ನಿನ್ನ ಒಡಲೂ ಅಲ್ಲ, ಈ ಲೋಕದ ಬಿನ್ನಾಣಕ್ಕೆ ಸಿಕ್ಕಿಬಿದ್ದ ಒಡಲು.

ಜೇಡರ ದಾಸಿಮಯ್ಯನ ಈ ಮಾತು ನಮ್ಮ ವ್ಯಕ್ತಿತ್ವಗಳು ಆದರ್ಶಗಳಿಂದ ಅಲ್ಲ, ನಮ್ಮ ಸುತ್ತಲ ವಾಸ್ತವ ಪರಿಸರದಿಂದ ರೂಪುಗೊಳ್ಳುತ್ತದೆ ಅನ್ನುವ ನಿಲುವಿನಿಂದ ಮೂಡಿದಂತಿದೆ. ಬಿನ್ನಾಣ ಎಂಬ ಮಾತಿಗೆ ತೋರಿಕೆಯ ವೈಭವ, ಆಕರ್ಷಣೆ ಇತ್ಯಾದಿ ಅರ್ಥಗಳೊಂದಿಗೆ ಅದು ವಿಜ್ಞಾನ ಎಂಬ ಮಾತಿನ ತದ್ಭವವೂ ಹೌದು.

ಈ ಲೋಕದ ವ್ಯವಹಾರದ ವಿಜ್ಞಾನ ನಮ್ಮ ನಮ್ಮ ವ್ಯಕ್ತಿತ್ವಗಳನ್ನು ತಿದ್ದುತ್ತದೆ, ನಮ್ಮ ಇಚ್ಛೆ ಅಂದುಕೊಳ್ಳುವುದೂ, ದೇವರ ಕಲ್ಪನೆಯೂ ನಮಗೆ ದೊರೆತ ಜಗತ್ತಿನ ಸಂಪರ್ಕದಿಂದಲೇ ಮೂಡಿದ್ದಲ್ಲವೇ? ಹಾಗಿದ್ದರೆ ನಾವು ಹೀಗೇಕೆ ಅನ್ನುವುದಕ್ಕೆ ನಮ್ಮ ಸುತ್ತಲ ಜಗತ್ತೇ ಕಾರಣ ಎಂದೆನ್ನಬಹುದೇ?

ಆಗದೇನೋ. ಯಾಕೆಂದರೆ ಜಗತ್ತಿನ ಇಚ್ಛೆಯಂತೆ ನಡೆಯಬೇಕೆನ್ನುವ ಬಲವಂತ, ದೇವರ ಆದರ್ಶದಂತೆ ಇರಲಾಗದ ಯಾತನೆ ಇವುಗಳ ಇಬ್ಬಂದಿಯೇ ದಾಸಿಮಯ್ಯನಿಗೆ ಮುಖ್ಯವಾದಂತೆ ತೋರುತ್ತದೆ. ಇವೆಲ್ಲದರ ಮೂಲದಲ್ಲಿರುವುದು ಕೂಡ ನಾನು ಅನ್ನುವ ಕಲ್ಪನೆಯನ್ನು ವಿವರಿಸಿಕೊಳ್ಳಲಾಗದ ತೊಳಲಾಟವೇ ಇರಬಹುದು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಶಂತನು ಸತ್ಯವತಿಯರ ಪ್ರೇಮ ಪ್ರಸಂಗ
Next post ದೇವರ ನೆಲೆ

ಸಣ್ಣ ಕತೆ

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

  • ಕನಸುಗಳಿಗೆ ದಡಗಳಿರುದಿಲ್ಲ

    ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು.… Read more…

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…

cheap jordans|wholesale air max|wholesale jordans|wholesale jewelry|wholesale jerseys