Home / ಲೇಖನ / ಇತರೆ / ವಚನ ವಿಚಾರ – ಇದು ಯಾರ ಮೈ?

ವಚನ ವಿಚಾರ – ಇದು ಯಾರ ಮೈ?

ಎನ್ನೊಡಲಾದಡೆ ಎನ್ನಿಚ್ಚೆಯಲ್ಲಿರದೆ
ನಿನ್ನೊಡಲಾದಡೆ ನಿನ್ನಿಚ್ಛೆಯಲ್ಲಿರದೆ
ಅದು ಎನ್ನೊಡಲೂ ಅಲ್ಲ
ನಿನ್ನೊಡಲೂ ಅಲ್ಲ
ಅದು ನೀ ಮಾಡಿದ ಜಗದ ಬಿನ್ನಾಣದೊಡಲು
ಕಾಣಾ
ರಾಮನಾಥ

ಜೇಡರ ದಾಸಿಮಯ್ಯನ ವಚನ. ಇದು ನನ್ನ ಮೈಯಾದರೆ ನನ್ನ ಮಾತು ಕೇಳಬೇಕು, ಕೇಳುತ್ತಿಲ್ಲ. ದೇವರೇ, ಇದು ನಿನ್ನ ಮೈಯಾದರೆ ನಿನ್ನ ಮಾತು ಕೇಳುತ್ತಿರಬೇಕು. ಕೇಳುತ್ತಿಲ್ಲವಲ್ಲಾ? ಇದು ನನ್ನ ಒಡಲೂ ಅಲ್ಲ, ನಿನ್ನ ಒಡಲೂ ಅಲ್ಲ, ಈ ಲೋಕದ ಬಿನ್ನಾಣಕ್ಕೆ ಸಿಕ್ಕಿಬಿದ್ದ ಒಡಲು.

ಜೇಡರ ದಾಸಿಮಯ್ಯನ ಈ ಮಾತು ನಮ್ಮ ವ್ಯಕ್ತಿತ್ವಗಳು ಆದರ್ಶಗಳಿಂದ ಅಲ್ಲ, ನಮ್ಮ ಸುತ್ತಲ ವಾಸ್ತವ ಪರಿಸರದಿಂದ ರೂಪುಗೊಳ್ಳುತ್ತದೆ ಅನ್ನುವ ನಿಲುವಿನಿಂದ ಮೂಡಿದಂತಿದೆ. ಬಿನ್ನಾಣ ಎಂಬ ಮಾತಿಗೆ ತೋರಿಕೆಯ ವೈಭವ, ಆಕರ್ಷಣೆ ಇತ್ಯಾದಿ ಅರ್ಥಗಳೊಂದಿಗೆ ಅದು ವಿಜ್ಞಾನ ಎಂಬ ಮಾತಿನ ತದ್ಭವವೂ ಹೌದು.

ಈ ಲೋಕದ ವ್ಯವಹಾರದ ವಿಜ್ಞಾನ ನಮ್ಮ ನಮ್ಮ ವ್ಯಕ್ತಿತ್ವಗಳನ್ನು ತಿದ್ದುತ್ತದೆ, ನಮ್ಮ ಇಚ್ಛೆ ಅಂದುಕೊಳ್ಳುವುದೂ, ದೇವರ ಕಲ್ಪನೆಯೂ ನಮಗೆ ದೊರೆತ ಜಗತ್ತಿನ ಸಂಪರ್ಕದಿಂದಲೇ ಮೂಡಿದ್ದಲ್ಲವೇ? ಹಾಗಿದ್ದರೆ ನಾವು ಹೀಗೇಕೆ ಅನ್ನುವುದಕ್ಕೆ ನಮ್ಮ ಸುತ್ತಲ ಜಗತ್ತೇ ಕಾರಣ ಎಂದೆನ್ನಬಹುದೇ?

ಆಗದೇನೋ. ಯಾಕೆಂದರೆ ಜಗತ್ತಿನ ಇಚ್ಛೆಯಂತೆ ನಡೆಯಬೇಕೆನ್ನುವ ಬಲವಂತ, ದೇವರ ಆದರ್ಶದಂತೆ ಇರಲಾಗದ ಯಾತನೆ ಇವುಗಳ ಇಬ್ಬಂದಿಯೇ ದಾಸಿಮಯ್ಯನಿಗೆ ಮುಖ್ಯವಾದಂತೆ ತೋರುತ್ತದೆ. ಇವೆಲ್ಲದರ ಮೂಲದಲ್ಲಿರುವುದು ಕೂಡ ನಾನು ಅನ್ನುವ ಕಲ್ಪನೆಯನ್ನು ವಿವರಿಸಿಕೊಳ್ಳಲಾಗದ ತೊಳಲಾಟವೇ ಇರಬಹುದು.
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...