Home / ಲೇಖನ / ಇತರೆ / ವಚನ ವಿಚಾರ – ಇದು ಯಾರ ಮೈ?

ವಚನ ವಿಚಾರ – ಇದು ಯಾರ ಮೈ?

ಎನ್ನೊಡಲಾದಡೆ ಎನ್ನಿಚ್ಚೆಯಲ್ಲಿರದೆ
ನಿನ್ನೊಡಲಾದಡೆ ನಿನ್ನಿಚ್ಛೆಯಲ್ಲಿರದೆ
ಅದು ಎನ್ನೊಡಲೂ ಅಲ್ಲ
ನಿನ್ನೊಡಲೂ ಅಲ್ಲ
ಅದು ನೀ ಮಾಡಿದ ಜಗದ ಬಿನ್ನಾಣದೊಡಲು
ಕಾಣಾ
ರಾಮನಾಥ

ಜೇಡರ ದಾಸಿಮಯ್ಯನ ವಚನ. ಇದು ನನ್ನ ಮೈಯಾದರೆ ನನ್ನ ಮಾತು ಕೇಳಬೇಕು, ಕೇಳುತ್ತಿಲ್ಲ. ದೇವರೇ, ಇದು ನಿನ್ನ ಮೈಯಾದರೆ ನಿನ್ನ ಮಾತು ಕೇಳುತ್ತಿರಬೇಕು. ಕೇಳುತ್ತಿಲ್ಲವಲ್ಲಾ? ಇದು ನನ್ನ ಒಡಲೂ ಅಲ್ಲ, ನಿನ್ನ ಒಡಲೂ ಅಲ್ಲ, ಈ ಲೋಕದ ಬಿನ್ನಾಣಕ್ಕೆ ಸಿಕ್ಕಿಬಿದ್ದ ಒಡಲು.

ಜೇಡರ ದಾಸಿಮಯ್ಯನ ಈ ಮಾತು ನಮ್ಮ ವ್ಯಕ್ತಿತ್ವಗಳು ಆದರ್ಶಗಳಿಂದ ಅಲ್ಲ, ನಮ್ಮ ಸುತ್ತಲ ವಾಸ್ತವ ಪರಿಸರದಿಂದ ರೂಪುಗೊಳ್ಳುತ್ತದೆ ಅನ್ನುವ ನಿಲುವಿನಿಂದ ಮೂಡಿದಂತಿದೆ. ಬಿನ್ನಾಣ ಎಂಬ ಮಾತಿಗೆ ತೋರಿಕೆಯ ವೈಭವ, ಆಕರ್ಷಣೆ ಇತ್ಯಾದಿ ಅರ್ಥಗಳೊಂದಿಗೆ ಅದು ವಿಜ್ಞಾನ ಎಂಬ ಮಾತಿನ ತದ್ಭವವೂ ಹೌದು.

ಈ ಲೋಕದ ವ್ಯವಹಾರದ ವಿಜ್ಞಾನ ನಮ್ಮ ನಮ್ಮ ವ್ಯಕ್ತಿತ್ವಗಳನ್ನು ತಿದ್ದುತ್ತದೆ, ನಮ್ಮ ಇಚ್ಛೆ ಅಂದುಕೊಳ್ಳುವುದೂ, ದೇವರ ಕಲ್ಪನೆಯೂ ನಮಗೆ ದೊರೆತ ಜಗತ್ತಿನ ಸಂಪರ್ಕದಿಂದಲೇ ಮೂಡಿದ್ದಲ್ಲವೇ? ಹಾಗಿದ್ದರೆ ನಾವು ಹೀಗೇಕೆ ಅನ್ನುವುದಕ್ಕೆ ನಮ್ಮ ಸುತ್ತಲ ಜಗತ್ತೇ ಕಾರಣ ಎಂದೆನ್ನಬಹುದೇ?

ಆಗದೇನೋ. ಯಾಕೆಂದರೆ ಜಗತ್ತಿನ ಇಚ್ಛೆಯಂತೆ ನಡೆಯಬೇಕೆನ್ನುವ ಬಲವಂತ, ದೇವರ ಆದರ್ಶದಂತೆ ಇರಲಾಗದ ಯಾತನೆ ಇವುಗಳ ಇಬ್ಬಂದಿಯೇ ದಾಸಿಮಯ್ಯನಿಗೆ ಮುಖ್ಯವಾದಂತೆ ತೋರುತ್ತದೆ. ಇವೆಲ್ಲದರ ಮೂಲದಲ್ಲಿರುವುದು ಕೂಡ ನಾನು ಅನ್ನುವ ಕಲ್ಪನೆಯನ್ನು ವಿವರಿಸಿಕೊಳ್ಳಲಾಗದ ತೊಳಲಾಟವೇ ಇರಬಹುದು.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...