Home / ಲೇಖನ / ಇತರೆ / ವಚನ ವಿಚಾರ – ಇದು ಯಾರ ಮೈ?

ವಚನ ವಿಚಾರ – ಇದು ಯಾರ ಮೈ?

ಎನ್ನೊಡಲಾದಡೆ ಎನ್ನಿಚ್ಚೆಯಲ್ಲಿರದೆ
ನಿನ್ನೊಡಲಾದಡೆ ನಿನ್ನಿಚ್ಛೆಯಲ್ಲಿರದೆ
ಅದು ಎನ್ನೊಡಲೂ ಅಲ್ಲ
ನಿನ್ನೊಡಲೂ ಅಲ್ಲ
ಅದು ನೀ ಮಾಡಿದ ಜಗದ ಬಿನ್ನಾಣದೊಡಲು
ಕಾಣಾ
ರಾಮನಾಥ

ಜೇಡರ ದಾಸಿಮಯ್ಯನ ವಚನ. ಇದು ನನ್ನ ಮೈಯಾದರೆ ನನ್ನ ಮಾತು ಕೇಳಬೇಕು, ಕೇಳುತ್ತಿಲ್ಲ. ದೇವರೇ, ಇದು ನಿನ್ನ ಮೈಯಾದರೆ ನಿನ್ನ ಮಾತು ಕೇಳುತ್ತಿರಬೇಕು. ಕೇಳುತ್ತಿಲ್ಲವಲ್ಲಾ? ಇದು ನನ್ನ ಒಡಲೂ ಅಲ್ಲ, ನಿನ್ನ ಒಡಲೂ ಅಲ್ಲ, ಈ ಲೋಕದ ಬಿನ್ನಾಣಕ್ಕೆ ಸಿಕ್ಕಿಬಿದ್ದ ಒಡಲು.

ಜೇಡರ ದಾಸಿಮಯ್ಯನ ಈ ಮಾತು ನಮ್ಮ ವ್ಯಕ್ತಿತ್ವಗಳು ಆದರ್ಶಗಳಿಂದ ಅಲ್ಲ, ನಮ್ಮ ಸುತ್ತಲ ವಾಸ್ತವ ಪರಿಸರದಿಂದ ರೂಪುಗೊಳ್ಳುತ್ತದೆ ಅನ್ನುವ ನಿಲುವಿನಿಂದ ಮೂಡಿದಂತಿದೆ. ಬಿನ್ನಾಣ ಎಂಬ ಮಾತಿಗೆ ತೋರಿಕೆಯ ವೈಭವ, ಆಕರ್ಷಣೆ ಇತ್ಯಾದಿ ಅರ್ಥಗಳೊಂದಿಗೆ ಅದು ವಿಜ್ಞಾನ ಎಂಬ ಮಾತಿನ ತದ್ಭವವೂ ಹೌದು.

ಈ ಲೋಕದ ವ್ಯವಹಾರದ ವಿಜ್ಞಾನ ನಮ್ಮ ನಮ್ಮ ವ್ಯಕ್ತಿತ್ವಗಳನ್ನು ತಿದ್ದುತ್ತದೆ, ನಮ್ಮ ಇಚ್ಛೆ ಅಂದುಕೊಳ್ಳುವುದೂ, ದೇವರ ಕಲ್ಪನೆಯೂ ನಮಗೆ ದೊರೆತ ಜಗತ್ತಿನ ಸಂಪರ್ಕದಿಂದಲೇ ಮೂಡಿದ್ದಲ್ಲವೇ? ಹಾಗಿದ್ದರೆ ನಾವು ಹೀಗೇಕೆ ಅನ್ನುವುದಕ್ಕೆ ನಮ್ಮ ಸುತ್ತಲ ಜಗತ್ತೇ ಕಾರಣ ಎಂದೆನ್ನಬಹುದೇ?

ಆಗದೇನೋ. ಯಾಕೆಂದರೆ ಜಗತ್ತಿನ ಇಚ್ಛೆಯಂತೆ ನಡೆಯಬೇಕೆನ್ನುವ ಬಲವಂತ, ದೇವರ ಆದರ್ಶದಂತೆ ಇರಲಾಗದ ಯಾತನೆ ಇವುಗಳ ಇಬ್ಬಂದಿಯೇ ದಾಸಿಮಯ್ಯನಿಗೆ ಮುಖ್ಯವಾದಂತೆ ತೋರುತ್ತದೆ. ಇವೆಲ್ಲದರ ಮೂಲದಲ್ಲಿರುವುದು ಕೂಡ ನಾನು ಅನ್ನುವ ಕಲ್ಪನೆಯನ್ನು ವಿವರಿಸಿಕೊಳ್ಳಲಾಗದ ತೊಳಲಾಟವೇ ಇರಬಹುದು.
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...