Home / ಲೇಖನ / ಇತರೆ / ವಚನ ವಿಚಾರ – ಇದು ಯಾರ ಮೈ?

ವಚನ ವಿಚಾರ – ಇದು ಯಾರ ಮೈ?

ಎನ್ನೊಡಲಾದಡೆ ಎನ್ನಿಚ್ಚೆಯಲ್ಲಿರದೆ
ನಿನ್ನೊಡಲಾದಡೆ ನಿನ್ನಿಚ್ಛೆಯಲ್ಲಿರದೆ
ಅದು ಎನ್ನೊಡಲೂ ಅಲ್ಲ
ನಿನ್ನೊಡಲೂ ಅಲ್ಲ
ಅದು ನೀ ಮಾಡಿದ ಜಗದ ಬಿನ್ನಾಣದೊಡಲು
ಕಾಣಾ
ರಾಮನಾಥ

ಜೇಡರ ದಾಸಿಮಯ್ಯನ ವಚನ. ಇದು ನನ್ನ ಮೈಯಾದರೆ ನನ್ನ ಮಾತು ಕೇಳಬೇಕು, ಕೇಳುತ್ತಿಲ್ಲ. ದೇವರೇ, ಇದು ನಿನ್ನ ಮೈಯಾದರೆ ನಿನ್ನ ಮಾತು ಕೇಳುತ್ತಿರಬೇಕು. ಕೇಳುತ್ತಿಲ್ಲವಲ್ಲಾ? ಇದು ನನ್ನ ಒಡಲೂ ಅಲ್ಲ, ನಿನ್ನ ಒಡಲೂ ಅಲ್ಲ, ಈ ಲೋಕದ ಬಿನ್ನಾಣಕ್ಕೆ ಸಿಕ್ಕಿಬಿದ್ದ ಒಡಲು.

ಜೇಡರ ದಾಸಿಮಯ್ಯನ ಈ ಮಾತು ನಮ್ಮ ವ್ಯಕ್ತಿತ್ವಗಳು ಆದರ್ಶಗಳಿಂದ ಅಲ್ಲ, ನಮ್ಮ ಸುತ್ತಲ ವಾಸ್ತವ ಪರಿಸರದಿಂದ ರೂಪುಗೊಳ್ಳುತ್ತದೆ ಅನ್ನುವ ನಿಲುವಿನಿಂದ ಮೂಡಿದಂತಿದೆ. ಬಿನ್ನಾಣ ಎಂಬ ಮಾತಿಗೆ ತೋರಿಕೆಯ ವೈಭವ, ಆಕರ್ಷಣೆ ಇತ್ಯಾದಿ ಅರ್ಥಗಳೊಂದಿಗೆ ಅದು ವಿಜ್ಞಾನ ಎಂಬ ಮಾತಿನ ತದ್ಭವವೂ ಹೌದು.

ಈ ಲೋಕದ ವ್ಯವಹಾರದ ವಿಜ್ಞಾನ ನಮ್ಮ ನಮ್ಮ ವ್ಯಕ್ತಿತ್ವಗಳನ್ನು ತಿದ್ದುತ್ತದೆ, ನಮ್ಮ ಇಚ್ಛೆ ಅಂದುಕೊಳ್ಳುವುದೂ, ದೇವರ ಕಲ್ಪನೆಯೂ ನಮಗೆ ದೊರೆತ ಜಗತ್ತಿನ ಸಂಪರ್ಕದಿಂದಲೇ ಮೂಡಿದ್ದಲ್ಲವೇ? ಹಾಗಿದ್ದರೆ ನಾವು ಹೀಗೇಕೆ ಅನ್ನುವುದಕ್ಕೆ ನಮ್ಮ ಸುತ್ತಲ ಜಗತ್ತೇ ಕಾರಣ ಎಂದೆನ್ನಬಹುದೇ?

ಆಗದೇನೋ. ಯಾಕೆಂದರೆ ಜಗತ್ತಿನ ಇಚ್ಛೆಯಂತೆ ನಡೆಯಬೇಕೆನ್ನುವ ಬಲವಂತ, ದೇವರ ಆದರ್ಶದಂತೆ ಇರಲಾಗದ ಯಾತನೆ ಇವುಗಳ ಇಬ್ಬಂದಿಯೇ ದಾಸಿಮಯ್ಯನಿಗೆ ಮುಖ್ಯವಾದಂತೆ ತೋರುತ್ತದೆ. ಇವೆಲ್ಲದರ ಮೂಲದಲ್ಲಿರುವುದು ಕೂಡ ನಾನು ಅನ್ನುವ ಕಲ್ಪನೆಯನ್ನು ವಿವರಿಸಿಕೊಳ್ಳಲಾಗದ ತೊಳಲಾಟವೇ ಇರಬಹುದು.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...