Home / ಲೇಖನ / ಇತರೆ / ವಚನ ವಿಚಾರ – ಕೊಡಲಾಗದು

ವಚನ ವಿಚಾರ – ಕೊಡಲಾಗದು

ಏರಿಯ ಕಟ್ಟಬಹುದಲ್ಲದೆ ನೀರ ತುಂಬಬಹುದೆ
ಕೈದುವ ಕೊಡಬಹುದಲ್ಲದೆ ಕಲಿತನವ ಕೊಡಬಹುದೆ
ವಿವಾಹವ ಮಾಡಬಹುದಲ್ಲದೆ ಪುರುಷತನವ ಹರಸಬಹುದೆ
ಘನವ ತೋರಬಹುದಲ್ಲದೆ ನೆನಹ ನಿಲಿಸಬಹುದೆ
ಓದು ಒಕ್ಕಾಲು ಬುದ್ಧಿ ಮುಕ್ಕಾಲು ಎಂಬ ಲೋಕದ
ಗಾದೆಮಾತಿನಂತೆ
ಸದ್ಗುರುಕಾರುಣ್ಯವಾದಡೂ ಸಾಧಿಸಿದವನಿಲ್ಲ ಸಕಳೇಶ್ವರಾ

[ಕೈದು-ಆಯುಧ, ನೆನಹ-ಧ್ಯಾನವ]

ಸಕಳೇಶ ಮಾದರಸನ ವಚನ ಇದು. ಒಬ್ಬರು ಇನ್ನೊಬ್ಬರಿಗೆ ಏನು ಕೊಡಬಹುದು, ಕೊಡುವುದರ ಮಿತಿಗಳೇನು ಅನ್ನುವುದನ್ನು ಈ ವಚನ ಹೇಳುತ್ತದೆ. ಕೆರೆಗೆ ಏರಿ ಕಟ್ಟಿಸಬಹುದು ನೀರು ಬರಬೇಕು; ಕೈದು, ಅಂದರೆ ಆಯುಧ, ಕೊಡಬಹುದು, ಆದರೆ ಆಯುಧ ಹಿಡಿದು ಹೋರಾಡಬಲ್ಲ ಶೌರ್ಯ ಮಾತ್ರ ಒಳಗಿನಿಂದಲೇ ಬರಬೇಕು; ಒಳ್ಳೆಯ ಹೆಣ್ಣು ನೋಡಿ ಮದುವೆ ಮಾಡಬಹುದು, ಆದರೆ ಬಾಳುವೆ ನಡೆಸಲು ಬೇಕಾದ ಗಂಡಸುತನ, ಪೌರುಷ, ಇರಬೇಕು, ಹರಸಿದರೆ ಪೌರುಷ ಬರುವುದಿಲ್ಲ. ಮಹತ್ತಾದುದನ್ನು ತೋರಬಹುದು, ಆದರೆ ಕಂಡದ್ದು ನೆನಪು ಉಳಿಯಬೇಕಾದರೆ? ಓದಿ ತಿಳಿದದ್ದು ಕಾಲು ಭಾಗ, ಬುದ್ಧಿಯಿಂದ ಅರಿತದ್ದು ಅದಕ್ಕಿಂತ ಮೂರು ಪಟ್ಟು ಹೆಚ್ಚು. ಗುರುವಿನ ಕಾರುಣ್ಯ ದೊರೆಯಬಹುದು ಆದರೆ ಸಾಧನೆಯ ಜವಾಬ್ದಾರಿ ಮಾತ್ರ ಅವರವರದ್ದೇ.

ನಾವು ಏನಾಗುತ್ತೇವೋ ಅದಕ್ಕೆ ನಾವೇ ಜವಾಬ್ದಾರರು. ನಾವು ಹೇಗಿದ್ದೇವೋ ಅದಕ್ಕೂ ನಾವೇ ಜವಾಬ್ದಾರರು.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...